ಲಖನೌ: ‘ಸೋನ್ಭದ್ರ ಜಿಲ್ಲೆಯಲ್ಲಿ ದಲಿತ ವ್ಯಕ್ತಿಗೆ ಥಳಿಸಿ, ಚಪ್ಪಲಿ ನೆಕ್ಕುವಂತೆ ಬಲವಂತಪಡಿಸಿದ ಘಟನೆ ಲಜ್ಜೆಗೇಡಿತನದ್ದು. ಆರೋಪಿ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಮತ್ತು ಗ್ಯಾಂಗಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡ ಪಿ.ಎಲ್.ಪುನಿಯಾ ಮಂಗಳವಾರ ಒತ್ತಾಯಿಸಿದ್ದಾರೆ.