<p><strong>ಲಖನೌ:</strong> ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡಿನ ದಾಳಿಗೆ ಅಂಪೈರ್ ಒಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ. ಮಾತ್ರವಲ್ಲ 12ಕ್ಕೂ ಅಧಿಕ ಆಟಗಾರರು ಗಾಯಗೊಂಡಿದ್ದಾರೆ.</p><p>ಪೊಲೀಸರ ಮಾಹಿತಿಯ ಪ್ರಕಾರ, ಉನ್ನಾವೋ ಜಿಲ್ಲೆಯ ಶುಕ್ಲಗಂಜ್ನ ಸಪ್ರು ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಜೇನುನೊಣಗಳ ಹಿಂಡು ಆಟಗಾರರ ಮೇಲೆ ದಾಳಿ ಮಾಡಿದೆ. ಕೆಲವು ಆಟಗಾರರು ಮತ್ತು ಬೆರಳೆಣಿಕೆಯಷ್ಟು ಪ್ರೇಕ್ಷಕರು ಸುರಕ್ಷಿತ ಸ್ಥಳಕ್ಕೆ ಓಡಿ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.</p><p>ಆದರೆ, ಪಂದ್ಯದ ಅಂಪೈರಿಂಗ್ ಮಾಡುತ್ತಿದ್ದ ಕಾನ್ಪುರದ ನಿವಾಸಿ 65 ವರ್ಷದ ಮಾಣಿಕ್ ಗುಪ್ತಾ ಅವರ ಮೇಲೆ ಅತೀ ಹೆಚ್ಚು ಜೇನು ನೊಣಗಳು ದಾಳಿ ಮಾಡಿದ್ದರಿಂದ, ಅವರು ಸ್ಥಳದಲ್ಲೇ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.</p><p>ಜೇನುನೊಣಗಳ ದಾಳಿಯಲ್ಲಿ ಸುಮಾರು 15 ಆಟಗಾರರು ಗಾಯಗೊಂಡಿದ್ದು, ಉನ್ನಾವ್ ಮತ್ತು ಕಾನ್ಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡಿನ ದಾಳಿಗೆ ಅಂಪೈರ್ ಒಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ. ಮಾತ್ರವಲ್ಲ 12ಕ್ಕೂ ಅಧಿಕ ಆಟಗಾರರು ಗಾಯಗೊಂಡಿದ್ದಾರೆ.</p><p>ಪೊಲೀಸರ ಮಾಹಿತಿಯ ಪ್ರಕಾರ, ಉನ್ನಾವೋ ಜಿಲ್ಲೆಯ ಶುಕ್ಲಗಂಜ್ನ ಸಪ್ರು ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಜೇನುನೊಣಗಳ ಹಿಂಡು ಆಟಗಾರರ ಮೇಲೆ ದಾಳಿ ಮಾಡಿದೆ. ಕೆಲವು ಆಟಗಾರರು ಮತ್ತು ಬೆರಳೆಣಿಕೆಯಷ್ಟು ಪ್ರೇಕ್ಷಕರು ಸುರಕ್ಷಿತ ಸ್ಥಳಕ್ಕೆ ಓಡಿ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.</p><p>ಆದರೆ, ಪಂದ್ಯದ ಅಂಪೈರಿಂಗ್ ಮಾಡುತ್ತಿದ್ದ ಕಾನ್ಪುರದ ನಿವಾಸಿ 65 ವರ್ಷದ ಮಾಣಿಕ್ ಗುಪ್ತಾ ಅವರ ಮೇಲೆ ಅತೀ ಹೆಚ್ಚು ಜೇನು ನೊಣಗಳು ದಾಳಿ ಮಾಡಿದ್ದರಿಂದ, ಅವರು ಸ್ಥಳದಲ್ಲೇ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.</p><p>ಜೇನುನೊಣಗಳ ದಾಳಿಯಲ್ಲಿ ಸುಮಾರು 15 ಆಟಗಾರರು ಗಾಯಗೊಂಡಿದ್ದು, ಉನ್ನಾವ್ ಮತ್ತು ಕಾನ್ಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>