<p><strong>ಛತ್ರಪತಿ ಸಾಂಬಾಜಿನಗರ:</strong> ಗಂಡನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಬೀಡ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯೊಬ್ಬರು, ವಿಷ ಸೇವಿಸಿದ ಘಟನೆ ಬುಧವಾರ ಜರುಗಿದೆ. </p><p>2023ರ ಅಕ್ಟೋಬರ್ನಲ್ಲಿ 19ರಂದು ಬೀಡ್ ಜಿಲ್ಲೆಯ ಮಹದೇವ್ ಮುಂಡೆ ಎನ್ನುವ ವ್ಯಕ್ತಿಯು ಕಾಣೆಯಾಗಿದ್ದರು. ಮೂರು ದಿನಗಳ ನಂತರ ಅವರ ಶವ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ, ಇದುವರೆಗೂ ಯಾರನ್ನು ಬಂಧಿಸಲಾಗಿಲ್ಲ. ಹಾಗಾಗಿ, ಆರೋಪಿಗಳನ್ನು ಬಂಧಿಸಬೇಕೆಂದು ಅವರ ಪತ್ನಿ ದ್ಯಾನೇಶ್ವರಿ ಮುಂಡೆ ಅವರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದರು. </p><p>ಘಟನೆಗೂ ಮುನ್ನ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಬಳಿ ಪತ್ರಕರ್ತರೊಂದಿಗೆ ಮಾತನಾಡಿರುವ ದ್ಯಾನೇಶ್ವರಿ ಮುಂಡೆ ‘ಪ್ರಧಾನಿ ನರೇಂದ್ರ ಮೋದಿಯವರು ಆಪರೇಷನ್ ಸಿಂಧೂರ ಕುರಿತು ಮಾತನಾಡುತ್ತಾರೆ. ಆದರೆ, ನನ್ನ ಸಿಂಧೂರಕ್ಕೆ ಏನಾಯಿತು ಎನ್ನುವ ಕುರಿತು ಸರ್ಕಾರವು ಮಾತನಾಡಲಿ’ ಎಂದಿದ್ದರು. </p><p>ಇದೇ ವೇಳೆ ವಿಷ ಸೇವನೆ ಮಾಡಿದ್ದು, ದ್ಯಾನೇಶ್ವರಿ ಮುಂಡೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p><p>ಮಹದೇವ್ ಮುಂಡೆ ಅವರ ಪ್ರಕರಣವನ್ನು ಘಟನೆ ನಡೆದ ತಕ್ಷಣವೇ ಸ್ಥಳೀಯ ಕ್ರೈಮ್ ಬ್ರ್ಯಾಂಚ್ಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಾಂಬಾಜಿನಗರ:</strong> ಗಂಡನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಬೀಡ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯೊಬ್ಬರು, ವಿಷ ಸೇವಿಸಿದ ಘಟನೆ ಬುಧವಾರ ಜರುಗಿದೆ. </p><p>2023ರ ಅಕ್ಟೋಬರ್ನಲ್ಲಿ 19ರಂದು ಬೀಡ್ ಜಿಲ್ಲೆಯ ಮಹದೇವ್ ಮುಂಡೆ ಎನ್ನುವ ವ್ಯಕ್ತಿಯು ಕಾಣೆಯಾಗಿದ್ದರು. ಮೂರು ದಿನಗಳ ನಂತರ ಅವರ ಶವ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ, ಇದುವರೆಗೂ ಯಾರನ್ನು ಬಂಧಿಸಲಾಗಿಲ್ಲ. ಹಾಗಾಗಿ, ಆರೋಪಿಗಳನ್ನು ಬಂಧಿಸಬೇಕೆಂದು ಅವರ ಪತ್ನಿ ದ್ಯಾನೇಶ್ವರಿ ಮುಂಡೆ ಅವರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದರು. </p><p>ಘಟನೆಗೂ ಮುನ್ನ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಬಳಿ ಪತ್ರಕರ್ತರೊಂದಿಗೆ ಮಾತನಾಡಿರುವ ದ್ಯಾನೇಶ್ವರಿ ಮುಂಡೆ ‘ಪ್ರಧಾನಿ ನರೇಂದ್ರ ಮೋದಿಯವರು ಆಪರೇಷನ್ ಸಿಂಧೂರ ಕುರಿತು ಮಾತನಾಡುತ್ತಾರೆ. ಆದರೆ, ನನ್ನ ಸಿಂಧೂರಕ್ಕೆ ಏನಾಯಿತು ಎನ್ನುವ ಕುರಿತು ಸರ್ಕಾರವು ಮಾತನಾಡಲಿ’ ಎಂದಿದ್ದರು. </p><p>ಇದೇ ವೇಳೆ ವಿಷ ಸೇವನೆ ಮಾಡಿದ್ದು, ದ್ಯಾನೇಶ್ವರಿ ಮುಂಡೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p><p>ಮಹದೇವ್ ಮುಂಡೆ ಅವರ ಪ್ರಕರಣವನ್ನು ಘಟನೆ ನಡೆದ ತಕ್ಷಣವೇ ಸ್ಥಳೀಯ ಕ್ರೈಮ್ ಬ್ರ್ಯಾಂಚ್ಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>