<p><strong>ಇಂಫಾಲ</strong>: ಕಾಂಗ್ಪೊಕ್ಪಿ ಜಿಲ್ಲೆಯ ಗ್ರಾಮಕ್ಕೆ ಮೇ 4ರಂದು ಮುತ್ತಿಗೆ ಹಾಕಿದ್ದ ಸಾವಿರಾರು ಜನರ ಗುಂಪು, ಮನೆಗಳನ್ನು ಲೂಟಿ ಮಾಡಿ ಇಡೀ ಊರಿಗೇ ಬೆಂಕಿ ಹಚ್ಚಿತ್ತು. ಆ ದಿನ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ ನಡೆಸುವುದಕ್ಕೂ ಮುನ್ನ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿತ್ತು ಎಂಬ ಮಾಹಿತಿ ತಿಳಿದುಬಂದಿದೆ.</p><p>ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ಹೇಯ ಕೃತ್ಯದ ಸಂಬಂಧ ಜೂನ್ 21ರಂದು ಸೈಕುಲ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ. ಸದ್ಯ ಹರಿದಾಡುತ್ತಿರುವ ವಿಡಿಯೊಗಳು ಕೃತ್ಯಕ್ಕೆ ಪ್ರಮುಖ ಸಾಕ್ಷ್ಯಗಳಾಗಿವೆ.</p><p>ಎಫ್ಐಆರ್ ಆಧಾರದಲ್ಲಿ ಪಿಟಿಐ ವಿವರವಾದ ವರದಿ ಬರೆದಿದೆ.</p><p>ಅತ್ಯಾಚಾರಕ್ಕೆ ಯತ್ನಿಸಿದ್ದ ಉದ್ರಿಕ್ತ ಜನರ ಗುಂಪಿನಿಂದ ತನ್ನ ಸಹೋದರಿಯರನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದ ವ್ಯಕ್ತಿಯನ್ನು ಕೊಲೆ ಮಾಡಲಾಗಿತ್ತು. ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡುವುದಕ್ಕೂ ಮೊದಲು ಈ ಕೃತ್ಯವೆಸಗಲಾಗಿತ್ತು.</p><p><strong>ಇದನ್ನೂ ಓದಿ:</strong> <a href="https://www.prajavani.net/news/india-news/pm-modi-assures-of-action-against-manipur-incident-culprits-2398255">ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದವರನ್ನು ಸುಮ್ಮನೆ ಬಿಡಲ್ಲ- ಮೌನ ಮುರಿದ ಮೋದಿ </a></p><p>'ಸುಮಾರು 900–1000 ಜನರು ರೈಫಲ್ಸ್ನಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಮೇ 4ರಂದು ಮಧ್ಯಾಹ್ನ 3ರ ಹೊತ್ತಿಗೆ ಗ್ರಾಮಕ್ಕೆ ನುಗ್ಗಿದ್ದರು. ಹಣ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು, ಆಹಾರ ಧಾನ್ಯಗಳು, ಬಟ್ಟೆ ಹೊತ್ತೊಯ್ದಿದ್ದರು. ಲೂಟಿ ಬಳಿಕ ಎಲ್ಲ ಮನೆಗಳಿಗೆ ಬೆಂಕಿ ಹಚ್ಚಿದರು. ಕಾಂಗ್ಪೊಕ್ಪಿ ಜಿಲ್ಲೆಯ ಈ ಹಳ್ಳಿಯು, ಸೈಕುಲ್ ಪೊಲೀಸ್ ಠಾಣೆಯಿಂದ 68 ಕಿ.ಮೀ ದೂರದಲ್ಲಿದೆ' ಎಂದು ಎಫ್ಐಆರ್ನಲ್ಲಿ ಹೇಳಲಾಗಿದೆ.</p><p>ಗುಂಪು ದಾಳಿಯಿಂದ ಹೆದರಿದ್ದ ಹಳ್ಳಿಯ ಐವರು ಕಾಡಿಗೆ ಓಡಿಹೋಗಿದ್ದರು.</p><p>ಮಹಿಳೆಯರನ್ನು ವಿವಸ್ತ್ರಗೊಳಿಸಿ, ಲೈಂಗಿಕ ಕಿರುಕುಳ ನೀಡಿದ ಹೇಯ ಕೃತ್ಯಕ್ಕೆ ಸಂಬಂಧಿಸಿದ ವಿಡಿಯೊಗಳು ಜುಲೈ 19ರಂದು ಎಲ್ಲೆಡೆ ಹರಿದಾಡಿದ ಒಂದು ದಿನದ ಬಳಿಕ, ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ವಿಚಾರವಾಗಿ ಜೂನ್ 21ರಂದೇ ಸೈಕುಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p><p><strong>ಇದನ್ನೂ ಓದಿ:</strong> <a href="https://www.prajavani.net/technology/viral/pm-modis-response-to-manipur-violence-the-telegraph-front-page-viral-2400686">ಮಣಿಪುರ ಘಟನೆ ಬಗ್ಗೆ ಮೋದಿ ಮಾತು: 'ದಿ ಟೆಲಿಗ್ರಾಫ್' ಮುಖಪುಟ ವ್ಯಾಪಕ ಚರ್ಚೆ! </a></p><p>ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಮೇ 3ರ ಬಳಿಕ ಹಿಂಸಾಚಾರ ಭುಗಿಲೆದ್ದಿದ್ದೆ. ಈವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.</p><p><strong>ಆರೋಪಿಯ ಮನೆಗೆ ಬೆಂಕಿ</strong><br>ಬಂಧನಕ್ಕೊಳಗಾಗಿರುವ ನಾಲ್ವರ ಪೈಕಿ ತೌಬಲ್ ಜಿಲ್ಲೆಯ ಪೆಚಿ ಅವಾಂಗ್ನಲ್ಲಿ ಇರುವ ಒಬ್ಬ ಆರೋಪಿಯ ಮನೆಗೆ ಉದ್ರಿಕ್ತ ಸ್ಥಳೀಯರು ಗುರುವಾರ ರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ</strong>: ಕಾಂಗ್ಪೊಕ್ಪಿ ಜಿಲ್ಲೆಯ ಗ್ರಾಮಕ್ಕೆ ಮೇ 4ರಂದು ಮುತ್ತಿಗೆ ಹಾಕಿದ್ದ ಸಾವಿರಾರು ಜನರ ಗುಂಪು, ಮನೆಗಳನ್ನು ಲೂಟಿ ಮಾಡಿ ಇಡೀ ಊರಿಗೇ ಬೆಂಕಿ ಹಚ್ಚಿತ್ತು. ಆ ದಿನ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ ನಡೆಸುವುದಕ್ಕೂ ಮುನ್ನ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿತ್ತು ಎಂಬ ಮಾಹಿತಿ ತಿಳಿದುಬಂದಿದೆ.</p><p>ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ಹೇಯ ಕೃತ್ಯದ ಸಂಬಂಧ ಜೂನ್ 21ರಂದು ಸೈಕುಲ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ. ಸದ್ಯ ಹರಿದಾಡುತ್ತಿರುವ ವಿಡಿಯೊಗಳು ಕೃತ್ಯಕ್ಕೆ ಪ್ರಮುಖ ಸಾಕ್ಷ್ಯಗಳಾಗಿವೆ.</p><p>ಎಫ್ಐಆರ್ ಆಧಾರದಲ್ಲಿ ಪಿಟಿಐ ವಿವರವಾದ ವರದಿ ಬರೆದಿದೆ.</p><p>ಅತ್ಯಾಚಾರಕ್ಕೆ ಯತ್ನಿಸಿದ್ದ ಉದ್ರಿಕ್ತ ಜನರ ಗುಂಪಿನಿಂದ ತನ್ನ ಸಹೋದರಿಯರನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದ ವ್ಯಕ್ತಿಯನ್ನು ಕೊಲೆ ಮಾಡಲಾಗಿತ್ತು. ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡುವುದಕ್ಕೂ ಮೊದಲು ಈ ಕೃತ್ಯವೆಸಗಲಾಗಿತ್ತು.</p><p><strong>ಇದನ್ನೂ ಓದಿ:</strong> <a href="https://www.prajavani.net/news/india-news/pm-modi-assures-of-action-against-manipur-incident-culprits-2398255">ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದವರನ್ನು ಸುಮ್ಮನೆ ಬಿಡಲ್ಲ- ಮೌನ ಮುರಿದ ಮೋದಿ </a></p><p>'ಸುಮಾರು 900–1000 ಜನರು ರೈಫಲ್ಸ್ನಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಮೇ 4ರಂದು ಮಧ್ಯಾಹ್ನ 3ರ ಹೊತ್ತಿಗೆ ಗ್ರಾಮಕ್ಕೆ ನುಗ್ಗಿದ್ದರು. ಹಣ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು, ಆಹಾರ ಧಾನ್ಯಗಳು, ಬಟ್ಟೆ ಹೊತ್ತೊಯ್ದಿದ್ದರು. ಲೂಟಿ ಬಳಿಕ ಎಲ್ಲ ಮನೆಗಳಿಗೆ ಬೆಂಕಿ ಹಚ್ಚಿದರು. ಕಾಂಗ್ಪೊಕ್ಪಿ ಜಿಲ್ಲೆಯ ಈ ಹಳ್ಳಿಯು, ಸೈಕುಲ್ ಪೊಲೀಸ್ ಠಾಣೆಯಿಂದ 68 ಕಿ.ಮೀ ದೂರದಲ್ಲಿದೆ' ಎಂದು ಎಫ್ಐಆರ್ನಲ್ಲಿ ಹೇಳಲಾಗಿದೆ.</p><p>ಗುಂಪು ದಾಳಿಯಿಂದ ಹೆದರಿದ್ದ ಹಳ್ಳಿಯ ಐವರು ಕಾಡಿಗೆ ಓಡಿಹೋಗಿದ್ದರು.</p><p>ಮಹಿಳೆಯರನ್ನು ವಿವಸ್ತ್ರಗೊಳಿಸಿ, ಲೈಂಗಿಕ ಕಿರುಕುಳ ನೀಡಿದ ಹೇಯ ಕೃತ್ಯಕ್ಕೆ ಸಂಬಂಧಿಸಿದ ವಿಡಿಯೊಗಳು ಜುಲೈ 19ರಂದು ಎಲ್ಲೆಡೆ ಹರಿದಾಡಿದ ಒಂದು ದಿನದ ಬಳಿಕ, ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ವಿಚಾರವಾಗಿ ಜೂನ್ 21ರಂದೇ ಸೈಕುಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p><p><strong>ಇದನ್ನೂ ಓದಿ:</strong> <a href="https://www.prajavani.net/technology/viral/pm-modis-response-to-manipur-violence-the-telegraph-front-page-viral-2400686">ಮಣಿಪುರ ಘಟನೆ ಬಗ್ಗೆ ಮೋದಿ ಮಾತು: 'ದಿ ಟೆಲಿಗ್ರಾಫ್' ಮುಖಪುಟ ವ್ಯಾಪಕ ಚರ್ಚೆ! </a></p><p>ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಮೇ 3ರ ಬಳಿಕ ಹಿಂಸಾಚಾರ ಭುಗಿಲೆದ್ದಿದ್ದೆ. ಈವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.</p><p><strong>ಆರೋಪಿಯ ಮನೆಗೆ ಬೆಂಕಿ</strong><br>ಬಂಧನಕ್ಕೊಳಗಾಗಿರುವ ನಾಲ್ವರ ಪೈಕಿ ತೌಬಲ್ ಜಿಲ್ಲೆಯ ಪೆಚಿ ಅವಾಂಗ್ನಲ್ಲಿ ಇರುವ ಒಬ್ಬ ಆರೋಪಿಯ ಮನೆಗೆ ಉದ್ರಿಕ್ತ ಸ್ಥಳೀಯರು ಗುರುವಾರ ರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>