<p><strong>ಭೋಪಾಲ್:</strong> ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163 (2) ಅಡಿಯಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು ಸೋಮವಾರ ಸಂಜೆ ಆದೇಶ ಹೊರಡಿಸಿದ್ದಾರೆ.</p>.<p>ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವ ಹಲವು ಮಂದಿ ಭಿಕ್ಷುಕರು ಮಾದಕ ವ್ಯಸನಿಗಳಾಗಿದ್ದಾರೆ. ಅಲ್ಲದೇ ಕೆಲವರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<p>ಭೋಪಾಲ್ ಜಿಲ್ಲೆಯಲ್ಲಿ ಭಿಕ್ಷೆ ಬೇಡುವುದು ಹಾಗೂ ಭಿಕ್ಷೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಿಕ್ಷುಕರಿಗೆ ಹಣ ನೀಡುವ ಅಥವಾ ಅವರಿಗಾಗಿ ಯಾವುದೇ ವಸ್ತುಗಳನ್ನು ಖರೀದಿಸಿ ನೀಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಸಂಬಂಧಿತ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದೂ ಎಚ್ಚರಿಸಲಾಗಿದೆ.</p>.<p>ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಈಗಾಗಲೇ ಭಿಕ್ಷಾಟನೆಯನ್ನು ನಿಷೇಧಿಸಲಾಗಿದೆ.</p>.ಭಿಕ್ಷಾಟನೆ ಮುಕ್ತ ನಗರ ನಿರ್ಮಾಣಕ್ಕೆ ಇಂದೋರ್ ಪಣ: ಭಿಕ್ಷೆ ನೀಡಿದವರ ವಿರುದ್ಧ FIR.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163 (2) ಅಡಿಯಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು ಸೋಮವಾರ ಸಂಜೆ ಆದೇಶ ಹೊರಡಿಸಿದ್ದಾರೆ.</p>.<p>ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವ ಹಲವು ಮಂದಿ ಭಿಕ್ಷುಕರು ಮಾದಕ ವ್ಯಸನಿಗಳಾಗಿದ್ದಾರೆ. ಅಲ್ಲದೇ ಕೆಲವರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<p>ಭೋಪಾಲ್ ಜಿಲ್ಲೆಯಲ್ಲಿ ಭಿಕ್ಷೆ ಬೇಡುವುದು ಹಾಗೂ ಭಿಕ್ಷೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಿಕ್ಷುಕರಿಗೆ ಹಣ ನೀಡುವ ಅಥವಾ ಅವರಿಗಾಗಿ ಯಾವುದೇ ವಸ್ತುಗಳನ್ನು ಖರೀದಿಸಿ ನೀಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಸಂಬಂಧಿತ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದೂ ಎಚ್ಚರಿಸಲಾಗಿದೆ.</p>.<p>ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಈಗಾಗಲೇ ಭಿಕ್ಷಾಟನೆಯನ್ನು ನಿಷೇಧಿಸಲಾಗಿದೆ.</p>.ಭಿಕ್ಷಾಟನೆ ಮುಕ್ತ ನಗರ ನಿರ್ಮಾಣಕ್ಕೆ ಇಂದೋರ್ ಪಣ: ಭಿಕ್ಷೆ ನೀಡಿದವರ ವಿರುದ್ಧ FIR.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>