<p><strong>ಐಜ್ವಾಲ್:</strong> ವಿರೋಧ ಪಕ್ಷಗಳ ಪ್ರತಿಭಟನೆ ನಡುವೆಯೂ ಮಿಜೋರಾಂ ವಿಧಾನಸಭೆಯಲ್ಲಿ ಬುಧವಾರ ‘ಭಿಕ್ಷಾಟನೆ ನಿಷೇಧ ಮಸೂದೆ–2025’ಯನ್ನು ಅಂಗೀಕರಿಸಲಾಗಿದೆ. </p><p>ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಾಲ್ರಿನ್ಪುಯಿ ಅವರು ವಿಧಾನಸಭೆಯಲ್ಲಿ ಭಿಕ್ಷಾಟನೆ ನಿಷೇಧ ಮಸೂದೆ ಮಂಡಿಸಿದ್ದಾರೆ. </p><p>‘ರಾಜ್ಯದಲ್ಲಿ ಭಿಕ್ಷಾಟನೆಯನ್ನು ನಿಷೇಧಿಸುವುದು ಮಾತ್ರವಲ್ಲದೆ, ಸುಸ್ಥಿರ ಜೀವನೋಪಾಯದ ಆಯ್ಕೆಗಳನ್ನು ಕಲ್ಪಿಸುವ ಮೂಲಕ ನೆರವು ಒದಗಿಸುವುದು ಈ ಮಸೂದೆಯ ಮುಖ್ಯ ಉದ್ದೇಶವಾಗಿದೆ’ ಎಂದು ಅವರು ಹೇಳಿದ್ದಾರೆ.</p><p>‘ರಾಜ್ಯದಲ್ಲಿ ಭಿಕ್ಷಾಟನೆ ಹೆಚ್ಚುತ್ತಿದೆ ಎಂಬ ಕಳವಳವಿದೆ. ಆದರೆ, ಚರ್ಚ್ಗಳು ಮತ್ತು ಎನ್ಜಿಒಗಳ ಒಳಗೊಳ್ಳುವಿಕೆ ಮತ್ತು ಸರ್ಕಾರದ ಕಲ್ಯಾಣ ಕ್ರಮಗಳಿಂದಾಗಿ ಭಿಕ್ಷುಕರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬುದು ಸಮಾಧಾನಕಾರ ಸಂಗತಿ’ ಎಂದು ಅವರು ತಿಳಿಸಿದ್ದಾರೆ. </p><p>‘ರೈಲುಗಳ ಮೂಲಕ ಹೊರರಾಜ್ಯಗಳಿಂದ ಭಿಕ್ಷುಕರ ರಾಜ್ಯಕ್ಕೆ ಬರುತ್ತಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿರುವ ಅವರು, ಭಿಕ್ಷುಕರನ್ನು ಮೊದಲು ಶಿಬಿರಗಳಲ್ಲಿ ಇರಿಸಲಾಗುತ್ತದೆ. ಬಳಿಕ ಅವರನ್ನು ಮನೆಗಳಿಗೆ ಅಥವಾ ರಾಜ್ಯಗಳಿಗೆ ಕಳುಹಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>‘ಈ ಮಸೂದೆಯು ಕ್ರಿಶ್ಚಿಯನ್ ನಂಬಿಕೆಗೆ ಹಾನಿಕಾರಕವಾಗಿದ್ದು, ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತದೆ’ ಎಂದು ಎಂಎನ್ಎಫ್ ನಾಯಕ ಲಾಲ್ಚಂದಮ ರಾಲ್ಟೆ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ. </p><p>‘ರಾಜ್ಯವನ್ನು ಭಿಕ್ಷಾಟನೆಯಿಂದ ಮುಕ್ತಗೊಳಿಸಲು ಸರ್ಕಾರ, ಎನ್ಜಿಒಗಳು ಮತ್ತು ಚರ್ಚ್ಗಳ ಸಾಮೂಹಿಕ ಭಾಗವಹಿಸುವಿಕೆಯಿಂದಾಗಿ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸುವುದು ಮಸೂದೆಯ ಮುಖ್ಯ ಉದ್ದೇಶವಾಗಿದೆ’ ಎಂದು ಮುಖ್ಯಮಂತ್ರಿ ಲಾಲ್ದುಹೋಮ ಅಭಿಪ್ರಾಯಪಟ್ಟಿದ್ದಾರೆ.</p><p>ಸುದೀರ್ಘ ಚರ್ಚೆಯ ಬಳಿಕ ಮಿಜೋರಾಂ ವಿಧಾನಸಭೆಯಲ್ಲಿ ಭಿಕ್ಷಾಟನೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಜ್ವಾಲ್:</strong> ವಿರೋಧ ಪಕ್ಷಗಳ ಪ್ರತಿಭಟನೆ ನಡುವೆಯೂ ಮಿಜೋರಾಂ ವಿಧಾನಸಭೆಯಲ್ಲಿ ಬುಧವಾರ ‘ಭಿಕ್ಷಾಟನೆ ನಿಷೇಧ ಮಸೂದೆ–2025’ಯನ್ನು ಅಂಗೀಕರಿಸಲಾಗಿದೆ. </p><p>ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಾಲ್ರಿನ್ಪುಯಿ ಅವರು ವಿಧಾನಸಭೆಯಲ್ಲಿ ಭಿಕ್ಷಾಟನೆ ನಿಷೇಧ ಮಸೂದೆ ಮಂಡಿಸಿದ್ದಾರೆ. </p><p>‘ರಾಜ್ಯದಲ್ಲಿ ಭಿಕ್ಷಾಟನೆಯನ್ನು ನಿಷೇಧಿಸುವುದು ಮಾತ್ರವಲ್ಲದೆ, ಸುಸ್ಥಿರ ಜೀವನೋಪಾಯದ ಆಯ್ಕೆಗಳನ್ನು ಕಲ್ಪಿಸುವ ಮೂಲಕ ನೆರವು ಒದಗಿಸುವುದು ಈ ಮಸೂದೆಯ ಮುಖ್ಯ ಉದ್ದೇಶವಾಗಿದೆ’ ಎಂದು ಅವರು ಹೇಳಿದ್ದಾರೆ.</p><p>‘ರಾಜ್ಯದಲ್ಲಿ ಭಿಕ್ಷಾಟನೆ ಹೆಚ್ಚುತ್ತಿದೆ ಎಂಬ ಕಳವಳವಿದೆ. ಆದರೆ, ಚರ್ಚ್ಗಳು ಮತ್ತು ಎನ್ಜಿಒಗಳ ಒಳಗೊಳ್ಳುವಿಕೆ ಮತ್ತು ಸರ್ಕಾರದ ಕಲ್ಯಾಣ ಕ್ರಮಗಳಿಂದಾಗಿ ಭಿಕ್ಷುಕರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬುದು ಸಮಾಧಾನಕಾರ ಸಂಗತಿ’ ಎಂದು ಅವರು ತಿಳಿಸಿದ್ದಾರೆ. </p><p>‘ರೈಲುಗಳ ಮೂಲಕ ಹೊರರಾಜ್ಯಗಳಿಂದ ಭಿಕ್ಷುಕರ ರಾಜ್ಯಕ್ಕೆ ಬರುತ್ತಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿರುವ ಅವರು, ಭಿಕ್ಷುಕರನ್ನು ಮೊದಲು ಶಿಬಿರಗಳಲ್ಲಿ ಇರಿಸಲಾಗುತ್ತದೆ. ಬಳಿಕ ಅವರನ್ನು ಮನೆಗಳಿಗೆ ಅಥವಾ ರಾಜ್ಯಗಳಿಗೆ ಕಳುಹಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>‘ಈ ಮಸೂದೆಯು ಕ್ರಿಶ್ಚಿಯನ್ ನಂಬಿಕೆಗೆ ಹಾನಿಕಾರಕವಾಗಿದ್ದು, ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತದೆ’ ಎಂದು ಎಂಎನ್ಎಫ್ ನಾಯಕ ಲಾಲ್ಚಂದಮ ರಾಲ್ಟೆ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ. </p><p>‘ರಾಜ್ಯವನ್ನು ಭಿಕ್ಷಾಟನೆಯಿಂದ ಮುಕ್ತಗೊಳಿಸಲು ಸರ್ಕಾರ, ಎನ್ಜಿಒಗಳು ಮತ್ತು ಚರ್ಚ್ಗಳ ಸಾಮೂಹಿಕ ಭಾಗವಹಿಸುವಿಕೆಯಿಂದಾಗಿ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸುವುದು ಮಸೂದೆಯ ಮುಖ್ಯ ಉದ್ದೇಶವಾಗಿದೆ’ ಎಂದು ಮುಖ್ಯಮಂತ್ರಿ ಲಾಲ್ದುಹೋಮ ಅಭಿಪ್ರಾಯಪಟ್ಟಿದ್ದಾರೆ.</p><p>ಸುದೀರ್ಘ ಚರ್ಚೆಯ ಬಳಿಕ ಮಿಜೋರಾಂ ವಿಧಾನಸಭೆಯಲ್ಲಿ ಭಿಕ್ಷಾಟನೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>