ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ನಾಲ್ಕು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸಬೇಕು ಎಂದು ಆಯೋಗ ಸೂಚಿಸಿದೆ. ಇದು ಎಫ್ಐಆರ್ನ ದಾಖಲಾತಿಯ ಸ್ಥಿತಿ, ತನಿಖೆಯ ಪ್ರಗತಿ, ಬಂಧನ, ಸಂತ್ರಸ್ತರಿಗೆ ಪರಿಹಾರ ನೀಡಿದ್ದರೆ ಆ ಬಗ್ಗೆ ವಿವರ ಹಾಗೂ ರಾಜ್ಯದಲ್ಲಿ ಅಂತಹ ಘಟನೆಗಳನ್ನು ತಡೆಗಟ್ಟಲು ತೆಗೆದುಕೊಂಡ ಅಥವಾ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.