<p><strong>ಕೋಲ್ಕತ್ತ:</strong> ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಎಂಸಿಯ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆ ಎಸೆಯುತ್ತೇವೆ ಎಂದಿದ್ದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಪಶ್ಚಿಮ ಬಂಗಾಳ ವಿಧಾನಭೆಯಲ್ಲಿ ನಿಲುವಳಿ ಮಂಡಿಸಲಾಯಿತು.</p><p>ನಿಲುವಳಿಗೆ ಸದನದ ಧ್ವನಿಮತದ ಒಪ್ಪಿಗೆ ಸಿಕ್ಕಿತು.</p>.Assembly Elections: ಭವಾನಿಪುರದಿಂದ ಸ್ಪರ್ಧಿಸುವಂತೆ ಮಮತಾಗೆ ಸುವೇಂದು ಸವಾಲು.<p>ತಾವು ಮಂಡಿಸಿದ ಗಮನ ಸೆಳೆಯುವ ಸೂಚನೆಯನ್ನು ಸ್ಪೀಕರ್ ಬಿಮನ್ ಮುಖರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಇದರ ಬೆನ್ನಲ್ಲೇ ಟಿಎಂಸಿಯ ಸಚೇತಕ ನಿರ್ಮಲ್ ಘೋಷ್ ಅವರು ಸುವೇಂದು ವಿರುದ್ಧ ನಿಲುವಳಿ ಮಂಡಿಸಿದರು.</p><p>ಸುವೇಂದು ಅಧಿಕಾರಿ ದೇಶದ ಧಾರ್ಮಿಕ ಹಾಗೂ ಸಾಮಾಜಿಕ ರಚನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಘೋಷ್ ನಿಲುವಳಿ ಮಂಡನೆ ವೇಳೆ ಹೇಳಿದ್ದಾರೆ. </p>.ಪ. ಬಂಗಾಳ | ಸದನದಲ್ಲಿ ಅಶಿಸ್ತಿನ ವರ್ತನೆ: ಸುವೇಂದು ಸೇರಿ ಮೂವರು ಶಾಸಕರು ಅಮಾನತು.<p>ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಎಂಸಿಯ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆ ಎಸೆಯುತ್ತೇವೆ ಎಂದು ಸುವೇಂದು ಮಂಗಳವಾರ ಹೇಳಿದ್ದರು.</p><p>ಸುವೇಂದು ಅವರ ಈ ಹೇಳಿಕೆಗೆ ಕಿಡಿ ಕಾರಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ರಾಜ್ಯಕ್ಕೆ ಹುಸಿ ಹಿಂದುತ್ವವಾದವನ್ನು ತರುತ್ತಿದೆ ಎಂದು ಹೇಳಿದ್ದರು.</p> .ನುಸುಳುಕೋರರಿಗೆ BSF ನೆರವು ಆರೋಪ | ಭದ್ರತಾ ಪಡೆಗೆ ಅವಮಾನ; ಮಮತಾಗೆ ಸುವೇಂದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಎಂಸಿಯ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆ ಎಸೆಯುತ್ತೇವೆ ಎಂದಿದ್ದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಪಶ್ಚಿಮ ಬಂಗಾಳ ವಿಧಾನಭೆಯಲ್ಲಿ ನಿಲುವಳಿ ಮಂಡಿಸಲಾಯಿತು.</p><p>ನಿಲುವಳಿಗೆ ಸದನದ ಧ್ವನಿಮತದ ಒಪ್ಪಿಗೆ ಸಿಕ್ಕಿತು.</p>.Assembly Elections: ಭವಾನಿಪುರದಿಂದ ಸ್ಪರ್ಧಿಸುವಂತೆ ಮಮತಾಗೆ ಸುವೇಂದು ಸವಾಲು.<p>ತಾವು ಮಂಡಿಸಿದ ಗಮನ ಸೆಳೆಯುವ ಸೂಚನೆಯನ್ನು ಸ್ಪೀಕರ್ ಬಿಮನ್ ಮುಖರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಇದರ ಬೆನ್ನಲ್ಲೇ ಟಿಎಂಸಿಯ ಸಚೇತಕ ನಿರ್ಮಲ್ ಘೋಷ್ ಅವರು ಸುವೇಂದು ವಿರುದ್ಧ ನಿಲುವಳಿ ಮಂಡಿಸಿದರು.</p><p>ಸುವೇಂದು ಅಧಿಕಾರಿ ದೇಶದ ಧಾರ್ಮಿಕ ಹಾಗೂ ಸಾಮಾಜಿಕ ರಚನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಘೋಷ್ ನಿಲುವಳಿ ಮಂಡನೆ ವೇಳೆ ಹೇಳಿದ್ದಾರೆ. </p>.ಪ. ಬಂಗಾಳ | ಸದನದಲ್ಲಿ ಅಶಿಸ್ತಿನ ವರ್ತನೆ: ಸುವೇಂದು ಸೇರಿ ಮೂವರು ಶಾಸಕರು ಅಮಾನತು.<p>ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಎಂಸಿಯ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆ ಎಸೆಯುತ್ತೇವೆ ಎಂದು ಸುವೇಂದು ಮಂಗಳವಾರ ಹೇಳಿದ್ದರು.</p><p>ಸುವೇಂದು ಅವರ ಈ ಹೇಳಿಕೆಗೆ ಕಿಡಿ ಕಾರಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ರಾಜ್ಯಕ್ಕೆ ಹುಸಿ ಹಿಂದುತ್ವವಾದವನ್ನು ತರುತ್ತಿದೆ ಎಂದು ಹೇಳಿದ್ದರು.</p> .ನುಸುಳುಕೋರರಿಗೆ BSF ನೆರವು ಆರೋಪ | ಭದ್ರತಾ ಪಡೆಗೆ ಅವಮಾನ; ಮಮತಾಗೆ ಸುವೇಂದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>