<p><strong>ಕೊಲ್ಕತ್ತಾ:</strong> ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ, ಕ್ರಮೇಣ ಇದು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ಟೀಕಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ತೃಣಮೂಲ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವ ಎರಡು ರಾಜ್ಯಗಳಲ್ಲಿ ಮಾಫಿಯಾ-ರಾಜ್ ಅಸ್ತಿತ್ವದಲ್ಲಿದೆ ಎಂದು ಬಿಜೆಪಿ ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿದೆ.</p>.<p>‘ಪಶ್ಚಿಮ ಬಂಗಾಳವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ-ರಾಜ್ ವ್ಯವಸ್ಥೆಗೆ ಜಾರುತ್ತಿದೆ. ಪೊಲೀಸ್ ಠಾಣೆಯ ಮುಂದೆ ಕೌನ್ಸಿಲರ್ನನ್ನು ಗುಂಡಿಕ್ಕಿ ಕೊಂದಿದ್ದು ನಾಚಿಕೆಗೇಡಿನ ಘಟನೆ’ ಎಂದು ಘೋಷ್ ಹೇಳಿದರು.</p>.<p>24 ಪರಗಣ ಜಿಲ್ಲೆಯ ತಿತಾಗರ್ನಲ್ಲಿ ಪೊಲೀಸ್ ಠಾಣೆಯ ಎದುರೇ ಬಿಜೆಪಿ ನಾಯಕ ಮನೀಷ್ ಶುಕ್ಲಾ ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಘೋಷ್, ಪಶ್ಚಿಮ ಬಂಗಾಳವು ಮಾಫಿಯಾ ರಾಜ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಅಲ್ಲದೆ, ‘ಇಂತಹ ಅರಾಜಕ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಸಾಧ್ಯವೇ’ ಎಂದು ಘೋಷ್ ಪ್ರಶ್ನೆ ಮಾಡಿದ್ದಾರೆ.</p>.<p>‘ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ 120 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದಾರೆ,’ ಎಂದು ಅವರು ಹೇಳಿದರು.</p>.<p>ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.</p>.<p><strong>ಘೋಷ್ ಅವರ ಟೀಕೆಗಳನ್ನು ವ್ಯಂಗ್ಯವಾಡಿದ ಟಿಎಂಸಿ </strong></p>.<p>‘ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮಾಫಿಯಾ–ರಾಜ್ ಅಸ್ತಿತ್ವದಲ್ಲಿದೆ ಎಂದು ಘೋಷ್ ಅವರು ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಒಮ್ಮೆಯಾದರೂ ಅವರು ಸತ್ಯವನ್ನು ಮಾತನಾಡಿದ್ದಕ್ಕೆ ನಮಗೆ ಸಂತೋಷವಾಗಿದೆ’ ಎಂದು ಟಿಎಂಸಿಯ ಹಿರಿಯ ಮುಖಂಡ ಮತ್ತು ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಕತ್ತಾ:</strong> ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ, ಕ್ರಮೇಣ ಇದು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ಟೀಕಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ತೃಣಮೂಲ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವ ಎರಡು ರಾಜ್ಯಗಳಲ್ಲಿ ಮಾಫಿಯಾ-ರಾಜ್ ಅಸ್ತಿತ್ವದಲ್ಲಿದೆ ಎಂದು ಬಿಜೆಪಿ ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿದೆ.</p>.<p>‘ಪಶ್ಚಿಮ ಬಂಗಾಳವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ-ರಾಜ್ ವ್ಯವಸ್ಥೆಗೆ ಜಾರುತ್ತಿದೆ. ಪೊಲೀಸ್ ಠಾಣೆಯ ಮುಂದೆ ಕೌನ್ಸಿಲರ್ನನ್ನು ಗುಂಡಿಕ್ಕಿ ಕೊಂದಿದ್ದು ನಾಚಿಕೆಗೇಡಿನ ಘಟನೆ’ ಎಂದು ಘೋಷ್ ಹೇಳಿದರು.</p>.<p>24 ಪರಗಣ ಜಿಲ್ಲೆಯ ತಿತಾಗರ್ನಲ್ಲಿ ಪೊಲೀಸ್ ಠಾಣೆಯ ಎದುರೇ ಬಿಜೆಪಿ ನಾಯಕ ಮನೀಷ್ ಶುಕ್ಲಾ ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಘೋಷ್, ಪಶ್ಚಿಮ ಬಂಗಾಳವು ಮಾಫಿಯಾ ರಾಜ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಅಲ್ಲದೆ, ‘ಇಂತಹ ಅರಾಜಕ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಸಾಧ್ಯವೇ’ ಎಂದು ಘೋಷ್ ಪ್ರಶ್ನೆ ಮಾಡಿದ್ದಾರೆ.</p>.<p>‘ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ 120 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದಾರೆ,’ ಎಂದು ಅವರು ಹೇಳಿದರು.</p>.<p>ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.</p>.<p><strong>ಘೋಷ್ ಅವರ ಟೀಕೆಗಳನ್ನು ವ್ಯಂಗ್ಯವಾಡಿದ ಟಿಎಂಸಿ </strong></p>.<p>‘ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮಾಫಿಯಾ–ರಾಜ್ ಅಸ್ತಿತ್ವದಲ್ಲಿದೆ ಎಂದು ಘೋಷ್ ಅವರು ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಒಮ್ಮೆಯಾದರೂ ಅವರು ಸತ್ಯವನ್ನು ಮಾತನಾಡಿದ್ದಕ್ಕೆ ನಮಗೆ ಸಂತೋಷವಾಗಿದೆ’ ಎಂದು ಟಿಎಂಸಿಯ ಹಿರಿಯ ಮುಖಂಡ ಮತ್ತು ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>