ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪಶ್ಚಿಮ ಬಂಗಾಳದ ಮಕ್ಕಳು ಸಂತೋಷ ಪಡಲು ಜನವರಿ 22ರಂದು ಶಾಲೆಗಳಿಗೆ ರಜೆ ಘೋಷಿಸಲು ಪರಿಗಣಿಸುವಂತೆ ನಾನು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ವಿನಂತಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಜನವರಿ 22 ದೇಶಕ್ಕೆ ಹೆಮ್ಮೆಯ ದಿನವಾಗಿದೆ ಎಂದು ಪತ್ರದಲ್ಲಿ ಬರೆದಿರುವ ಮಜುಂದಾರ್, ರಾಮಮಂದಿರದ ಸಂದರ್ಭದಲ್ಲಿ ನಡೆದ ಹೋರಾಟ ಮತ್ತು ಪರಿಶ್ರಮದ ಕುರಿತು ಪತ್ರದಲ್ಲಿ ಹಂಚಿಕೊಂಡಿದ್ದಾರೆ. ಪ್ರಾಣ ಪ್ರತಿಷ್ಠಾಪನೆಯ ಶುಭ ದಿನದಂದು ಜನರು ಭಾಗವಹಿಸಲು ಅನುಕೂಲವಾಗುವಂತೆ, ಆ ದಿನವನ್ನು ರಜೆ ಎಂದು ಅಧಿಕೃತವಾಗಿ ಘೋಷಿಸಲು ವಿನಂತಿಸಿದ್ದಾರೆ.