<p><strong>ಕೊಲ್ಕತ್ತ: </strong>ಪ್ರತಿಭಟನಾ ನಿರತ ಶಾಲಾ ಶಿಕ್ಷಕರ ವಿರುದ್ಧ ಟಿಎಂಸಿ ಸರ್ಕಾರ ನಡೆಸಿದ ಲಾಠಿ ಚಾರ್ಜ್ 'ಕ್ರೌರ್ಯದ ಪರಮಾವಧಿ'ಯಾಗಿತ್ತು ಎಂದು ಬಿಜೆಪಿ ಟೀಕಿಸಿದೆ. </p><p>ಗುರುವಾರ, ರಾಜ್ಯ ಶಿಕ್ಷಣ ಇಲಾಖೆಯ ಪ್ರಧಾನ ಕಚೇರಿ ಬಳಿ ಪ್ರತಿಭಟನಾ ನಿರತ ಶಾಲಾ ಶಿಕ್ಷಕರ ಮೇಲೆ, ಗುರುವಾರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. </p><p>2016ರಲ್ಲಿ ಶಾಲಾ ಶಿಕ್ಷಕರ ನೇಮಕಾತಿಗಾಗಿ ಜರುಗುವ ಎಸ್ಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದವರ ನೇಮಕಾತಿಯನ್ನು ಕೋರ್ಟ್ ತಡೆ ಹಿಡಿದ ಕಾರಣ, ನಿರುದ್ಯೋಗಿಗಳಾಗಿರುವ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದರು. </p><p>ಪ್ರತಿಭಟನಾ ನಿರತ ಶಿಕ್ಷಕರ ಮೇಲಿನ ದಾಳಿಯನ್ನು, ಪಶ್ಚಿಮ ಬಂಗಾಳ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಶಾಸಕ ಸುವೆಂದು ಅಧಿಕಾರಿ ಖಂಡಿಸಿದ್ದಾರೆ. </p><p>ಇದು ಪಶ್ಚಿಮ ಬಂಗಾಳದಲ್ಲಿರುವ ಸರ್ವಾಧಿಕಾರಿ ಧೋರಣೆ ಹಾಗೂ ಇಲ್ಲಿನ ಸರ್ಕಾರವು ಭ್ರಷ್ಟರನ್ನು ರಕ್ಷಿಸುತ್ತಿರುವುದನ್ನು ತೋರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ. </p><p>ಚಿನ್ನದ ಪದಕ ಪಡೆದಿದ್ದವರು ಕೂಡ ನಿನ್ನೆಯ ಪ್ರತಿಭಟನೆಯ ವೇಳೆ ಕಣ್ಣೀರು ಹಾಕುತ್ತಿದ್ದರು. ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಸಚಿವರೇ ನೇರ ಹೊಣೆಯಾಗಿದ್ದಾರೆ ಎಂದು ಆರೋಪಿಸಿದರು. </p><p>ಶಿಕ್ಷಣ ಇಲಾಖೆಯ ಪ್ರಧಾನ ಕಚೇರಿಯ ಒಳಗಡೆ, ಪ್ರತಿಭಟನಾಕಾರರು ನುಸುಳಲು ಪ್ರಯತ್ನಪಟ್ಟಿದ್ದರಿಂದ, ಅದನ್ನು ತಪ್ಪಿಸಲು ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಯಲ್ಲಿ 19 ಜನ ಪೊಲೀಸ್ ಸೇರಿದಂತೆ ಪ್ರತಿಭಟನಾ ನಿರತ ಹಲವರಿಗೆ ಗಂಭೀರ ಗಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಕತ್ತ: </strong>ಪ್ರತಿಭಟನಾ ನಿರತ ಶಾಲಾ ಶಿಕ್ಷಕರ ವಿರುದ್ಧ ಟಿಎಂಸಿ ಸರ್ಕಾರ ನಡೆಸಿದ ಲಾಠಿ ಚಾರ್ಜ್ 'ಕ್ರೌರ್ಯದ ಪರಮಾವಧಿ'ಯಾಗಿತ್ತು ಎಂದು ಬಿಜೆಪಿ ಟೀಕಿಸಿದೆ. </p><p>ಗುರುವಾರ, ರಾಜ್ಯ ಶಿಕ್ಷಣ ಇಲಾಖೆಯ ಪ್ರಧಾನ ಕಚೇರಿ ಬಳಿ ಪ್ರತಿಭಟನಾ ನಿರತ ಶಾಲಾ ಶಿಕ್ಷಕರ ಮೇಲೆ, ಗುರುವಾರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. </p><p>2016ರಲ್ಲಿ ಶಾಲಾ ಶಿಕ್ಷಕರ ನೇಮಕಾತಿಗಾಗಿ ಜರುಗುವ ಎಸ್ಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದವರ ನೇಮಕಾತಿಯನ್ನು ಕೋರ್ಟ್ ತಡೆ ಹಿಡಿದ ಕಾರಣ, ನಿರುದ್ಯೋಗಿಗಳಾಗಿರುವ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದರು. </p><p>ಪ್ರತಿಭಟನಾ ನಿರತ ಶಿಕ್ಷಕರ ಮೇಲಿನ ದಾಳಿಯನ್ನು, ಪಶ್ಚಿಮ ಬಂಗಾಳ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಶಾಸಕ ಸುವೆಂದು ಅಧಿಕಾರಿ ಖಂಡಿಸಿದ್ದಾರೆ. </p><p>ಇದು ಪಶ್ಚಿಮ ಬಂಗಾಳದಲ್ಲಿರುವ ಸರ್ವಾಧಿಕಾರಿ ಧೋರಣೆ ಹಾಗೂ ಇಲ್ಲಿನ ಸರ್ಕಾರವು ಭ್ರಷ್ಟರನ್ನು ರಕ್ಷಿಸುತ್ತಿರುವುದನ್ನು ತೋರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ. </p><p>ಚಿನ್ನದ ಪದಕ ಪಡೆದಿದ್ದವರು ಕೂಡ ನಿನ್ನೆಯ ಪ್ರತಿಭಟನೆಯ ವೇಳೆ ಕಣ್ಣೀರು ಹಾಕುತ್ತಿದ್ದರು. ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಸಚಿವರೇ ನೇರ ಹೊಣೆಯಾಗಿದ್ದಾರೆ ಎಂದು ಆರೋಪಿಸಿದರು. </p><p>ಶಿಕ್ಷಣ ಇಲಾಖೆಯ ಪ್ರಧಾನ ಕಚೇರಿಯ ಒಳಗಡೆ, ಪ್ರತಿಭಟನಾಕಾರರು ನುಸುಳಲು ಪ್ರಯತ್ನಪಟ್ಟಿದ್ದರಿಂದ, ಅದನ್ನು ತಪ್ಪಿಸಲು ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಯಲ್ಲಿ 19 ಜನ ಪೊಲೀಸ್ ಸೇರಿದಂತೆ ಪ್ರತಿಭಟನಾ ನಿರತ ಹಲವರಿಗೆ ಗಂಭೀರ ಗಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>