‘ಸ್ವಾತಂತ್ರ್ಯ ಬಳಿಕ ದೇಶ ಇಂತಹ ಪರಿಸ್ಥಿತಿಯನ್ನು ಎದುರಿಸಿಲ್ಲ. ಬ್ರಿಟೀಷ್ ಆಡಳಿತದಲ್ಲಿ ಭಾರತದಲ್ಲಿದ್ದ ಗವರ್ನರ್ ಜನರಲ್ಗಳಂತೆ ಈಗಿನ ರಾಜ್ಯಪಾಲರು ಸರ್ಕಾರವನ್ನು ನಿರ್ಲಕ್ಷ್ಯ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಜಾರಿಗೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯಪಾಲರು ಅವರ ಇಚ್ಛೆಯಂತೆ ಹಂಗಾಮಿ ಕುಲಪತಿಗಳನ್ನು ನೇಮಿಸಿದ್ದರು. ಅವರ ಅವಧಿ ಪೂರ್ಣಗೊಂಡಿದ್ದರೂ ಅವರನ್ನು ಬದಲಾಯಿಸಿಲ್ಲ’ ಎಂದರು.