<p><strong>ಕೋಲ್ಕತ್ತ</strong>: 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯು ಪ್ರಗತಿ ಕಾಣದಿರುವುದಕ್ಕೆ ಪಶ್ಚಿಮ ಬಂಗಾಳದ ಕುಲ್ತಾಲಿಯಲ್ಲಿನ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಬಾಲಕಿ ಸಾವಿಗೆ ನ್ಯಾಯ ಬೇಕು, ನಮಗೆ ‘ಲಕ್ಷ್ಮಿ ಭಂಡಾರ’ದ (ರಾಜ್ಯ ಸರ್ಕಾರದ ಆರ್ಥಿಕ ನೆರವಿನ ಯೋಜನೆ) ಅನುಕೂಲ ಬೇಡ ಎಂದು ಅವರು ಹೇಳಿದರು.</p>.<p>ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯ ಮಹಿಳೆಯರು ಅಲ್ಲಿನ ಅರಳಿ ಮರದ ಕೆಳಗೆ ಕುಳಿತು ನ್ಯಾಯ ಮತ್ತು ಹೆಣ್ಣುಮಕ್ಕಳ ರಕ್ಷಣೆಗಾಗಿ ದುರ್ಗಾ ಮಾತೆಯನ್ನು ಪ್ರಾರ್ಥಿಸಿದರು.</p>.<p>‘ನಮಗೆ ಲಕ್ಷ್ಮಿ ಭಂಡಾರ ಅಥವಾ ಕನ್ಯಾಶ್ರೀ ಯೋಜನೆಗಳು ಬೇಡ. ನಮ್ಮ ಮಕ್ಕಳಿಗೆ ರಕ್ಷಣೆ ಬೇಕು’ ಎಂದು ಅಲ್ಲಿ ನೆರೆದಿದ್ದ ಮಹಿಳೆಯೊಬ್ಬರು ಹೇಳಿದರು.</p>.<p>ಮತ್ತೊಬ್ಬ ಮಹಿಳೆ, ‘ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಸಂದೇಶ್ಖಾಲಿ ಪ್ರಕರಣ ಕಂಡೆವು, ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಲಾಯಿತು. ಈಗ ನಮ್ಮ ಮನೆಯ ಮಗಳನ್ನು ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.</p>.<p>ಈ ಮಧ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ದಳ ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ಸಂಬಂಧಿಸಿ ಈವರೆಗೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯು ಪ್ರಗತಿ ಕಾಣದಿರುವುದಕ್ಕೆ ಪಶ್ಚಿಮ ಬಂಗಾಳದ ಕುಲ್ತಾಲಿಯಲ್ಲಿನ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಬಾಲಕಿ ಸಾವಿಗೆ ನ್ಯಾಯ ಬೇಕು, ನಮಗೆ ‘ಲಕ್ಷ್ಮಿ ಭಂಡಾರ’ದ (ರಾಜ್ಯ ಸರ್ಕಾರದ ಆರ್ಥಿಕ ನೆರವಿನ ಯೋಜನೆ) ಅನುಕೂಲ ಬೇಡ ಎಂದು ಅವರು ಹೇಳಿದರು.</p>.<p>ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯ ಮಹಿಳೆಯರು ಅಲ್ಲಿನ ಅರಳಿ ಮರದ ಕೆಳಗೆ ಕುಳಿತು ನ್ಯಾಯ ಮತ್ತು ಹೆಣ್ಣುಮಕ್ಕಳ ರಕ್ಷಣೆಗಾಗಿ ದುರ್ಗಾ ಮಾತೆಯನ್ನು ಪ್ರಾರ್ಥಿಸಿದರು.</p>.<p>‘ನಮಗೆ ಲಕ್ಷ್ಮಿ ಭಂಡಾರ ಅಥವಾ ಕನ್ಯಾಶ್ರೀ ಯೋಜನೆಗಳು ಬೇಡ. ನಮ್ಮ ಮಕ್ಕಳಿಗೆ ರಕ್ಷಣೆ ಬೇಕು’ ಎಂದು ಅಲ್ಲಿ ನೆರೆದಿದ್ದ ಮಹಿಳೆಯೊಬ್ಬರು ಹೇಳಿದರು.</p>.<p>ಮತ್ತೊಬ್ಬ ಮಹಿಳೆ, ‘ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಸಂದೇಶ್ಖಾಲಿ ಪ್ರಕರಣ ಕಂಡೆವು, ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಲಾಯಿತು. ಈಗ ನಮ್ಮ ಮನೆಯ ಮಗಳನ್ನು ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.</p>.<p>ಈ ಮಧ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ದಳ ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ಸಂಬಂಧಿಸಿ ಈವರೆಗೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>