<p><strong>ಕೋಲ್ಕತ್ತ:</strong> ಸಂದೇಶ್ಖಾಲಿಯಲ್ಲಿ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರ ಧ್ವನಿಯನ್ನು ಪಶ್ಚಿಮ ಬಂಗಾಳ ಸರ್ಕಾರವು ಹತ್ತಿಕ್ಕುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಸೋಮವಾರ ಆರೋಪಿಸಿದರು.</p>.<p>ಸಂದೇಶ್ಖಾಲಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ‘ಸತ್ಯ ಹೊರಬರದಂತೆ ತಡೆಯಲು ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಹೇಳಿದರು.</p>.<p>ರೇಖಾ ಶರ್ಮಾ ಅವರ ನೇತೃತ್ವದಲ್ಲಿ ಎನ್ಸಿಡಬ್ಲ್ಯು ನಿಯೋಗವು ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಗೆ ಭೇಟಿ ನೀಡಿ, ಮಹಿಳೆಯರ ಜೊತೆ ಮಾತುಕತೆ ನಡೆಸಿದೆ.</p>.<p>‘ದೌರ್ಜನ್ಯ ನಡೆದಿರುವ ಪ್ರದೇಶದ ಮಹಿಳೆಯರ ಸಂಕಷ್ಟ ಆಲಿಸಿದ್ದೇನೆ. ಆರೋಪಿ ಶಹಜಹಾನ್ ಶೇಖ್ರನ್ನು ಕೂಡಲೇ ಬಂಧಿಸಬೇಕು. ಅವರನ್ನು ಬಂಧಿಸಿದರೆ ಇನ್ನಷ್ಟು ಮಹಿಳೆಯರು ದೂರು ನೀಡಲು ಮುಂದೆ ಬರಬಹುದು. ನಾವು ಮಹಿಳೆಯರಿಗೆ ಧೈರ್ಯ ತುಂಬಿದ್ದೇವೆ’ ಎಂದು ರೇಖಾ ಶರ್ಮಾ ತಿಳಿಸಿದರು.</p>.<p>ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದೂ ಅವರು ಒತ್ತಾಯಿಸಿದರು.</p>.<p>ಟಿಎಂಸಿ ನಾಯಕ ಶಹಜಹಾನ್ ಶೇಖ್ ಹಾಗೂ ಬೆಂಬಲಿಗರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಸಂದೇಶ್ಖಾಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಹಜಹಾನ್ ಶೇಖ್ ಅವರು ತಲೆಮರೆಸಿಕೊಂಡಿದ್ದಾರೆ.</p>.<p>‘ಮಮತಾ ಸರ್ಕಾರವನ್ನು ಕಿತ್ತೆಸೆಯಬೇಕು’: ಪಶ್ಚಿಮ ಬಂಗಾಳವನ್ನು ಉಳಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಹೇಳಿದರು.</p>.<p>‘ಸಂದೇಶ್ಖಾಲಿಯಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ’ ಎಂಬ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಮಮತಾ ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.</p>.<h2><strong>ಹಕ್ಕುಬಾಧ್ಯತಾ ಸಮಿತಿಯ ನೋಟಿಸ್ಗೆ ತಡೆ </strong></h2><p><strong>ನವದೆಹಲಿ (ಪಿಟಿಐ):</strong> ಸಂದೇಶ್ಖಾಲಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಲೋಕಸಭೆಯ ಹಕ್ಕುಬಾಧ್ಯತಾ ಸಮಿತಿಯು ಪಶ್ಚಿಮ ಬಂಗಳದ ಅಧಿಕಾರಿಗಳಿಗೆ ನೀಡಿದ್ದ ನೋಟಿಸ್ಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.</p><p>ಅಧಿಕಾರಿಗಳ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ನಂತರಕ್ಕೆ ನಿಗದಿಪಡಿಸಿದೆ. </p><p>ನೋಟಿಸ್ಗೆ ತಡೆಯಾಜ್ಞೆ ನೀಡಿರುವ ಕಾರಣ ಅಧಿಕಾರಿಗಳು ಸಮಿತಿ ಮುಂದೆ ಹಾಜರಾಗಿರಲಿಲ್ಲ. ಕೋರಂನ ಕೊರತೆಯಿಂದಲೂ ಹಕ್ಕುಬಾಧ್ಯತಾ ಸಮಿತಿಯ ಸಭೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ. </p><p>ಪಶ್ಚಿಮ ಬಂಗಾಳದ ಅಧಿಕಾರಿಗಳ ವಿರುದ್ಧ ಬಿಜೆಪಿ ಸಂಸದ ಸುಕಾಂತ ಮಜುಂದಾರ್ ಅವರು ಸಮಿತಿಗೆ ದೂರು ನೀಡಿದ್ದರು.</p>.ಸಿಎಂ ಹುದ್ದೆ ಬಿಟ್ಟು ಬಂದ್ರೆ ಮಮತಾಗೆ ಮಹಿಳೆಯರ ನೋವು ಅರ್ಥವಾಗುತ್ತೆ: ರೇಖಾ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಸಂದೇಶ್ಖಾಲಿಯಲ್ಲಿ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರ ಧ್ವನಿಯನ್ನು ಪಶ್ಚಿಮ ಬಂಗಾಳ ಸರ್ಕಾರವು ಹತ್ತಿಕ್ಕುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಸೋಮವಾರ ಆರೋಪಿಸಿದರು.</p>.<p>ಸಂದೇಶ್ಖಾಲಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ‘ಸತ್ಯ ಹೊರಬರದಂತೆ ತಡೆಯಲು ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಹೇಳಿದರು.</p>.<p>ರೇಖಾ ಶರ್ಮಾ ಅವರ ನೇತೃತ್ವದಲ್ಲಿ ಎನ್ಸಿಡಬ್ಲ್ಯು ನಿಯೋಗವು ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಗೆ ಭೇಟಿ ನೀಡಿ, ಮಹಿಳೆಯರ ಜೊತೆ ಮಾತುಕತೆ ನಡೆಸಿದೆ.</p>.<p>‘ದೌರ್ಜನ್ಯ ನಡೆದಿರುವ ಪ್ರದೇಶದ ಮಹಿಳೆಯರ ಸಂಕಷ್ಟ ಆಲಿಸಿದ್ದೇನೆ. ಆರೋಪಿ ಶಹಜಹಾನ್ ಶೇಖ್ರನ್ನು ಕೂಡಲೇ ಬಂಧಿಸಬೇಕು. ಅವರನ್ನು ಬಂಧಿಸಿದರೆ ಇನ್ನಷ್ಟು ಮಹಿಳೆಯರು ದೂರು ನೀಡಲು ಮುಂದೆ ಬರಬಹುದು. ನಾವು ಮಹಿಳೆಯರಿಗೆ ಧೈರ್ಯ ತುಂಬಿದ್ದೇವೆ’ ಎಂದು ರೇಖಾ ಶರ್ಮಾ ತಿಳಿಸಿದರು.</p>.<p>ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದೂ ಅವರು ಒತ್ತಾಯಿಸಿದರು.</p>.<p>ಟಿಎಂಸಿ ನಾಯಕ ಶಹಜಹಾನ್ ಶೇಖ್ ಹಾಗೂ ಬೆಂಬಲಿಗರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಸಂದೇಶ್ಖಾಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಹಜಹಾನ್ ಶೇಖ್ ಅವರು ತಲೆಮರೆಸಿಕೊಂಡಿದ್ದಾರೆ.</p>.<p>‘ಮಮತಾ ಸರ್ಕಾರವನ್ನು ಕಿತ್ತೆಸೆಯಬೇಕು’: ಪಶ್ಚಿಮ ಬಂಗಾಳವನ್ನು ಉಳಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಹೇಳಿದರು.</p>.<p>‘ಸಂದೇಶ್ಖಾಲಿಯಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ’ ಎಂಬ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಮಮತಾ ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.</p>.<h2><strong>ಹಕ್ಕುಬಾಧ್ಯತಾ ಸಮಿತಿಯ ನೋಟಿಸ್ಗೆ ತಡೆ </strong></h2><p><strong>ನವದೆಹಲಿ (ಪಿಟಿಐ):</strong> ಸಂದೇಶ್ಖಾಲಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಲೋಕಸಭೆಯ ಹಕ್ಕುಬಾಧ್ಯತಾ ಸಮಿತಿಯು ಪಶ್ಚಿಮ ಬಂಗಳದ ಅಧಿಕಾರಿಗಳಿಗೆ ನೀಡಿದ್ದ ನೋಟಿಸ್ಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.</p><p>ಅಧಿಕಾರಿಗಳ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ನಂತರಕ್ಕೆ ನಿಗದಿಪಡಿಸಿದೆ. </p><p>ನೋಟಿಸ್ಗೆ ತಡೆಯಾಜ್ಞೆ ನೀಡಿರುವ ಕಾರಣ ಅಧಿಕಾರಿಗಳು ಸಮಿತಿ ಮುಂದೆ ಹಾಜರಾಗಿರಲಿಲ್ಲ. ಕೋರಂನ ಕೊರತೆಯಿಂದಲೂ ಹಕ್ಕುಬಾಧ್ಯತಾ ಸಮಿತಿಯ ಸಭೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ. </p><p>ಪಶ್ಚಿಮ ಬಂಗಾಳದ ಅಧಿಕಾರಿಗಳ ವಿರುದ್ಧ ಬಿಜೆಪಿ ಸಂಸದ ಸುಕಾಂತ ಮಜುಂದಾರ್ ಅವರು ಸಮಿತಿಗೆ ದೂರು ನೀಡಿದ್ದರು.</p>.ಸಿಎಂ ಹುದ್ದೆ ಬಿಟ್ಟು ಬಂದ್ರೆ ಮಮತಾಗೆ ಮಹಿಳೆಯರ ನೋವು ಅರ್ಥವಾಗುತ್ತೆ: ರೇಖಾ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>