<p><strong>ಕೋಲ್ಕತ್ತ:</strong> 2023–24ನೆಯ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ರಾಜ್ಯಕ್ಕೆ ದೊರೆತ ₹1.17 ಲಕ್ಷ ಕೋಟಿ ಹಣವನ್ನು ಹೇಗೆ ಖರ್ಚು ಮಾಡಲಾಯಿತು ಎಂಬ ವಿವರ ಒದಗಿಸುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ರಾಜ್ಯ ಸರ್ಕಾರವು ಮಹಾಲೇಖಪಾಲರು (ಸಿಎಜಿ) ಸಿದ್ಧಪಡಿಸಿದ ಹಲವು ವರದಿಗಳನ್ನು ರಾಜ್ಯದ ವಿಧಾನಸಭೆಯಲ್ಲಿ ಮಂಡಿಸದೆ, ಸಂವಿಧಾನದ ನಿರ್ದೇಶನಗಳನ್ನು ಉಲ್ಲಂಘಿಸಿದೆ ಎಂಬ ಮಾಹಿತಿ ಪಡೆದ ರಾಜ್ಯಪಾಲರು ಈ ವಿವರ ಕೋರಿ ಪತ್ರ ಬರೆದಿದ್ದಾರೆ ಎಂದು ರಾಜಭವನದ ಉನ್ನತ ಮೂಲಗಳು ತಿಳಿಸಿವೆ.</p>.<p>‘ಕೇಂದ್ರದಿಂದ ಬಂದಿರುವ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳಿವೆ. ರಾಜ್ಯದ ಹಣಕಾಸಿನ ಪರಿಸ್ಥಿತಿಯು ಹಲವು ಸವಾಲುಗಳನ್ನು ಎದುರಿಸುತ್ತಿದೆ’ ಎಂದು ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ ಮೂಲವೊಂದು ತಿಳಿಸಿದೆ.</p>.<p>2018–19ನೆಯ ಹಣಕಾಸು ವರ್ಷದಲ್ಲಿ ರಾಜ್ಯದ ವಿತ್ತೀಯ ಕೊರತೆಯು ₹33,500 ಕೋಟಿ ಇದ್ದುದು, 2022–23ರಲ್ಲಿ ₹49 ಸಾವಿರ ಕೋಟಿಗೆ ಹೆಚ್ಚಳವಾಗಿದೆ. ಇದೇ ಅವಧಿಯಲ್ಲಿ ರಾಜ್ಯದ ಜಿಡಿಪಿ ಮತ್ತು ಸಾಲದ ನಡುವಿನ ಅನುಪಾತವು ಶೇ 35.69 ಇದ್ದುದು, ಶೇ 37ಕ್ಕೆ ಹೆಚ್ಚಳವಾಗಿದೆ ಎಂಬುದನ್ನು ರಾಜ್ಯಪಾಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸಿಎಜಿ ನೀಡಿರುವ ಆರು ವರದಿಗಳನ್ನು ವಿಧಾನಸಭೆಯಲ್ಲಿ ಮಂಡಿಸಿಲ್ಲ ಎನ್ನಲಾಗಿದೆ. ಹಣಕಾಸಿನ ವಿಚಾರದಲ್ಲಿ ವಿವೇಕವನ್ನು ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು, ರಾಜ್ಯದ ಹಣಕಾಸಿನ ಪರಿಸ್ಥಿತಿ ಕುರಿತು ಶ್ವೇತಪತ್ರವೊಂದನ್ನು ಹೊರಡಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> 2023–24ನೆಯ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ರಾಜ್ಯಕ್ಕೆ ದೊರೆತ ₹1.17 ಲಕ್ಷ ಕೋಟಿ ಹಣವನ್ನು ಹೇಗೆ ಖರ್ಚು ಮಾಡಲಾಯಿತು ಎಂಬ ವಿವರ ಒದಗಿಸುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ರಾಜ್ಯ ಸರ್ಕಾರವು ಮಹಾಲೇಖಪಾಲರು (ಸಿಎಜಿ) ಸಿದ್ಧಪಡಿಸಿದ ಹಲವು ವರದಿಗಳನ್ನು ರಾಜ್ಯದ ವಿಧಾನಸಭೆಯಲ್ಲಿ ಮಂಡಿಸದೆ, ಸಂವಿಧಾನದ ನಿರ್ದೇಶನಗಳನ್ನು ಉಲ್ಲಂಘಿಸಿದೆ ಎಂಬ ಮಾಹಿತಿ ಪಡೆದ ರಾಜ್ಯಪಾಲರು ಈ ವಿವರ ಕೋರಿ ಪತ್ರ ಬರೆದಿದ್ದಾರೆ ಎಂದು ರಾಜಭವನದ ಉನ್ನತ ಮೂಲಗಳು ತಿಳಿಸಿವೆ.</p>.<p>‘ಕೇಂದ್ರದಿಂದ ಬಂದಿರುವ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳಿವೆ. ರಾಜ್ಯದ ಹಣಕಾಸಿನ ಪರಿಸ್ಥಿತಿಯು ಹಲವು ಸವಾಲುಗಳನ್ನು ಎದುರಿಸುತ್ತಿದೆ’ ಎಂದು ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ ಮೂಲವೊಂದು ತಿಳಿಸಿದೆ.</p>.<p>2018–19ನೆಯ ಹಣಕಾಸು ವರ್ಷದಲ್ಲಿ ರಾಜ್ಯದ ವಿತ್ತೀಯ ಕೊರತೆಯು ₹33,500 ಕೋಟಿ ಇದ್ದುದು, 2022–23ರಲ್ಲಿ ₹49 ಸಾವಿರ ಕೋಟಿಗೆ ಹೆಚ್ಚಳವಾಗಿದೆ. ಇದೇ ಅವಧಿಯಲ್ಲಿ ರಾಜ್ಯದ ಜಿಡಿಪಿ ಮತ್ತು ಸಾಲದ ನಡುವಿನ ಅನುಪಾತವು ಶೇ 35.69 ಇದ್ದುದು, ಶೇ 37ಕ್ಕೆ ಹೆಚ್ಚಳವಾಗಿದೆ ಎಂಬುದನ್ನು ರಾಜ್ಯಪಾಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸಿಎಜಿ ನೀಡಿರುವ ಆರು ವರದಿಗಳನ್ನು ವಿಧಾನಸಭೆಯಲ್ಲಿ ಮಂಡಿಸಿಲ್ಲ ಎನ್ನಲಾಗಿದೆ. ಹಣಕಾಸಿನ ವಿಚಾರದಲ್ಲಿ ವಿವೇಕವನ್ನು ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು, ರಾಜ್ಯದ ಹಣಕಾಸಿನ ಪರಿಸ್ಥಿತಿ ಕುರಿತು ಶ್ವೇತಪತ್ರವೊಂದನ್ನು ಹೊರಡಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>