<p><strong>ಕೋಲ್ಕತ್ತಾ</strong>: ರಾಷ್ಟ್ರಗೀತೆಯಂತೆಯೇ ನಾಡಗೀತೆ ಹಾಡಿದಾಗಲೂ ಎದ್ದು ನಿಂತು ಗೌರವ ಕೊಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.</p><p>ಪ್ಲಾಟಿನಂ ಜುಬಿಲಿ ಸ್ಮಾರಕ ಕಟ್ಟಡದ ನೆಲಮಾಳಿಗೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿ ಮಾತನಾಡಿದ ಮಮತಾ, ‘ಇಂದಿನಿಂದ ಪ್ರಾರಂಭವಾಗಲಿರುವ ಕೋಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಿಂದ ಹಿಡಿದು ರಾಜ್ಯ ಸರ್ಕಾರ ಆಯೋಜಿಸುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ನಾಡಗೀತೆ ಹಾಡಿಸಲಾಗುತ್ತದೆ’ ಎಂದು ಹೇಳಿದರು.</p><p>‘ರಾಷ್ಟ್ರಗೀತೆಯಂತೆಯೇ ನಾಡಗೀತೆಯನ್ನು ಹಾಡಿದಾಗಲೆಲ್ಲ ಎದ್ದು ನಿಂತು ಗೌರವ ಕೊಡಬೇಕು ಎಂದು ಮನವಿ ಮಾಡುತ್ತೇನೆ. ಚಲನಚಿತ್ರೋತ್ಸವದ ಉದ್ಘಾಟನ ಸಮಾರಂಭದಲ್ಲೂ ನಾಡಗೀತೆಯನ್ನು ಪ್ರಸಾರ ಮಾಡಲಾಗುತ್ತದೆ’ ಎಂದರು.</p><p>ಪಶ್ಚಿಮ ಬಂಗಾಳದ ವಿಧಾನಸಭೆಯು ‘ಪೋಲಿಯಾ ಬೈಸಾಖ್’ ದಿನವನ್ನು ರಾಜ್ಯ ದಿನವಾಗಿ ಆಚರಿಸಲು ಮತ್ತು ಟಾಗೋರ್ ರಚನೆಯ 'ಬಾಂಗ್ಲಾರ್ ಮತಿ, ಬಾಂಗ್ಲಾರ್ ಜೋಲ್' (ಬಂಗಾಳದ ಮಣ್ಣು, ಬಂಗಾಳದ ನೀರು) ಅನ್ನು ನಾಡಗೀತೆಯಾಗಿ ಪರಿಗಣಿಸುವ ನಿರ್ಣಯವನ್ನು ಸೆಪ್ಟೆಂಬರ್ನಲ್ಲಿ ಅಂಗೀಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತಾ</strong>: ರಾಷ್ಟ್ರಗೀತೆಯಂತೆಯೇ ನಾಡಗೀತೆ ಹಾಡಿದಾಗಲೂ ಎದ್ದು ನಿಂತು ಗೌರವ ಕೊಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.</p><p>ಪ್ಲಾಟಿನಂ ಜುಬಿಲಿ ಸ್ಮಾರಕ ಕಟ್ಟಡದ ನೆಲಮಾಳಿಗೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿ ಮಾತನಾಡಿದ ಮಮತಾ, ‘ಇಂದಿನಿಂದ ಪ್ರಾರಂಭವಾಗಲಿರುವ ಕೋಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಿಂದ ಹಿಡಿದು ರಾಜ್ಯ ಸರ್ಕಾರ ಆಯೋಜಿಸುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ನಾಡಗೀತೆ ಹಾಡಿಸಲಾಗುತ್ತದೆ’ ಎಂದು ಹೇಳಿದರು.</p><p>‘ರಾಷ್ಟ್ರಗೀತೆಯಂತೆಯೇ ನಾಡಗೀತೆಯನ್ನು ಹಾಡಿದಾಗಲೆಲ್ಲ ಎದ್ದು ನಿಂತು ಗೌರವ ಕೊಡಬೇಕು ಎಂದು ಮನವಿ ಮಾಡುತ್ತೇನೆ. ಚಲನಚಿತ್ರೋತ್ಸವದ ಉದ್ಘಾಟನ ಸಮಾರಂಭದಲ್ಲೂ ನಾಡಗೀತೆಯನ್ನು ಪ್ರಸಾರ ಮಾಡಲಾಗುತ್ತದೆ’ ಎಂದರು.</p><p>ಪಶ್ಚಿಮ ಬಂಗಾಳದ ವಿಧಾನಸಭೆಯು ‘ಪೋಲಿಯಾ ಬೈಸಾಖ್’ ದಿನವನ್ನು ರಾಜ್ಯ ದಿನವಾಗಿ ಆಚರಿಸಲು ಮತ್ತು ಟಾಗೋರ್ ರಚನೆಯ 'ಬಾಂಗ್ಲಾರ್ ಮತಿ, ಬಾಂಗ್ಲಾರ್ ಜೋಲ್' (ಬಂಗಾಳದ ಮಣ್ಣು, ಬಂಗಾಳದ ನೀರು) ಅನ್ನು ನಾಡಗೀತೆಯಾಗಿ ಪರಿಗಣಿಸುವ ನಿರ್ಣಯವನ್ನು ಸೆಪ್ಟೆಂಬರ್ನಲ್ಲಿ ಅಂಗೀಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>