<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮತದಾರರ ಪಟ್ಟಿ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ‘ಕಳಂಕಿತ’ ಅಧಿಕಾರಿಗಳನ್ನು ವಜಾಗೊಳಿಸದಿರುವ ನಿರ್ಧಾರದ ಬಗ್ಗೆ ಚುನಾವಣಾ ಆಯೋಗವು (ಇಸಿಐ) ರಾಜ್ಯ ಸರ್ಕಾರದ ವಿವರಣೆ ಕೋರಿದೆ.</p>.<p>ಆಗಸ್ಟ್ 13ರಂದು ಸಂಜೆ 5ರ ಒಳಗೆ ದೆಹಲಿಯಲ್ಲಿರುವ ಆಯೋಗದ ಕೇಂದ್ರ ಕಚೇರಿಗೆ ಬಂದು ಈ ಬಗ್ಗೆ ವಿವರಣೆ ನೀಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರಿಗೆ ಸೂಚಿಸಿದೆ.</p>.<p>ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ‘ಅಕ್ರಮ’ ಎಸಗಿದ್ದಾರೆಂದು ಆರೋಪಿಸಲಾದ ಅಧಿಕಾರಿಗಳನ್ನು ಅಮಾನತುಗೊಳಿಸುವ ಉದ್ದೇಶವಿಲ್ಲ ಎಂದು ಪಂತ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.</p>.<p>ಚುನಾವಣಾ ಆಯೋಗವು ಗುರುತಿಸಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವುದು ‘ತುಂಬಾ ಕಠಿಣ’ ಕ್ರಮ ಎನಿಸಲಿದೆ. ಇದು ಬಂಗಾಳದ ಅಧಿಕಾರಿಗಳ ‘ಧೈರ್ಯಗುಂದಿಸಲಿದೆ’ ಎಂದು ಮುಖ್ಯ ಕಾರ್ಯದರ್ಶಿಯವರು ತಮ್ಮ ಪತ್ರದಲ್ಲಿ ಕಾರಣ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮತದಾರರ ಪಟ್ಟಿ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ‘ಕಳಂಕಿತ’ ಅಧಿಕಾರಿಗಳನ್ನು ವಜಾಗೊಳಿಸದಿರುವ ನಿರ್ಧಾರದ ಬಗ್ಗೆ ಚುನಾವಣಾ ಆಯೋಗವು (ಇಸಿಐ) ರಾಜ್ಯ ಸರ್ಕಾರದ ವಿವರಣೆ ಕೋರಿದೆ.</p>.<p>ಆಗಸ್ಟ್ 13ರಂದು ಸಂಜೆ 5ರ ಒಳಗೆ ದೆಹಲಿಯಲ್ಲಿರುವ ಆಯೋಗದ ಕೇಂದ್ರ ಕಚೇರಿಗೆ ಬಂದು ಈ ಬಗ್ಗೆ ವಿವರಣೆ ನೀಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರಿಗೆ ಸೂಚಿಸಿದೆ.</p>.<p>ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ‘ಅಕ್ರಮ’ ಎಸಗಿದ್ದಾರೆಂದು ಆರೋಪಿಸಲಾದ ಅಧಿಕಾರಿಗಳನ್ನು ಅಮಾನತುಗೊಳಿಸುವ ಉದ್ದೇಶವಿಲ್ಲ ಎಂದು ಪಂತ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.</p>.<p>ಚುನಾವಣಾ ಆಯೋಗವು ಗುರುತಿಸಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವುದು ‘ತುಂಬಾ ಕಠಿಣ’ ಕ್ರಮ ಎನಿಸಲಿದೆ. ಇದು ಬಂಗಾಳದ ಅಧಿಕಾರಿಗಳ ‘ಧೈರ್ಯಗುಂದಿಸಲಿದೆ’ ಎಂದು ಮುಖ್ಯ ಕಾರ್ಯದರ್ಶಿಯವರು ತಮ್ಮ ಪತ್ರದಲ್ಲಿ ಕಾರಣ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>