<p><strong>ರಾಂಚಿ:</strong> ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಬಾಲಕರನ್ನು ಜಾರ್ಖಂಡ್ನ ರಾಂಚಿ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ರಕ್ಷಿಸಲಾಗಿದೆ ಎಂದು ಆರ್ಪಿಎಫ್ ಭಾನುವಾರ ಹೇಳಿಕೆ ನೀಡಿದೆ.</p>.<p>ಮಾನವ ಕಳ್ಳಸಾಗಣೆ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಕ್ಷಿಸಲಾದ ಮೂವರು ಬಾಲಕರು ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಝಾಲ್ದಾದವರು.</p>.<p>ಮಾನವ ಕಳ್ಳಸಾಗಣೆ ಮತ್ತು ಬಾಲ ಕಾರ್ಮಿಕ ಪದ್ಧತಿ ವಿರೋಧಿ ವಿಶೇಷ ಕಾರ್ಯಾಚರಣೆ ಸಂದರ್ಭದಲ್ಲಿ, ರೈಲ್ವೆ ಪೊಲೀಸ್ ಪಡೆ ಶನಿವಾರ ಸಂಜೆ ಹಟಿಯಾ ನಿಲ್ದಾಣದಲ್ಲಿ 14–15 ವರ್ಷದೊಳಗಿನ ಮೂವರು ಬಾಲಕರನ್ನು ರಕ್ಷಿಸಿದೆ ಎಂದು ಆರ್ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.</p>.<p>‘ಬೆಂಗಳೂರಿನ ನಿರ್ಮಾಣ ಸ್ಥಳಗಳಿಗೆ ಕಾರ್ಮಿಕರನ್ನು ಕಳುಹಿಸುವುದಾಗಿ ಮತ್ತು ಪ್ರತಿ ಕಾರ್ಮಿಕರಿಗೆ ₹300–400 ಕಮಿಷನ್ ಪಡೆಯುವುದಾಗಿ ವಿಚಾರಣೆಯ ಸಮಯದಲ್ಲಿ ಆರೋಪಿಯು ಒಪ್ಪಿಕೊಂಡಿದ್ದಾನೆ.ಬಂಧಿತ ವ್ಯಕ್ತಿ ಮೊತ್ತೊಬ್ಬ ವ್ಯಕ್ತಿ ಯೊಂದಿಗೆ ಸೇರಿ ವಿವಿಧ ರಾಜ್ಯಗಳಿಂದ ಬಡ ಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಬಹಿರಂಗ ಪಡಿಸಿದ್ದಾರೆ’ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಬಾಲಕರನ್ನು ಜಾರ್ಖಂಡ್ನ ರಾಂಚಿ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ರಕ್ಷಿಸಲಾಗಿದೆ ಎಂದು ಆರ್ಪಿಎಫ್ ಭಾನುವಾರ ಹೇಳಿಕೆ ನೀಡಿದೆ.</p>.<p>ಮಾನವ ಕಳ್ಳಸಾಗಣೆ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಕ್ಷಿಸಲಾದ ಮೂವರು ಬಾಲಕರು ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಝಾಲ್ದಾದವರು.</p>.<p>ಮಾನವ ಕಳ್ಳಸಾಗಣೆ ಮತ್ತು ಬಾಲ ಕಾರ್ಮಿಕ ಪದ್ಧತಿ ವಿರೋಧಿ ವಿಶೇಷ ಕಾರ್ಯಾಚರಣೆ ಸಂದರ್ಭದಲ್ಲಿ, ರೈಲ್ವೆ ಪೊಲೀಸ್ ಪಡೆ ಶನಿವಾರ ಸಂಜೆ ಹಟಿಯಾ ನಿಲ್ದಾಣದಲ್ಲಿ 14–15 ವರ್ಷದೊಳಗಿನ ಮೂವರು ಬಾಲಕರನ್ನು ರಕ್ಷಿಸಿದೆ ಎಂದು ಆರ್ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.</p>.<p>‘ಬೆಂಗಳೂರಿನ ನಿರ್ಮಾಣ ಸ್ಥಳಗಳಿಗೆ ಕಾರ್ಮಿಕರನ್ನು ಕಳುಹಿಸುವುದಾಗಿ ಮತ್ತು ಪ್ರತಿ ಕಾರ್ಮಿಕರಿಗೆ ₹300–400 ಕಮಿಷನ್ ಪಡೆಯುವುದಾಗಿ ವಿಚಾರಣೆಯ ಸಮಯದಲ್ಲಿ ಆರೋಪಿಯು ಒಪ್ಪಿಕೊಂಡಿದ್ದಾನೆ.ಬಂಧಿತ ವ್ಯಕ್ತಿ ಮೊತ್ತೊಬ್ಬ ವ್ಯಕ್ತಿ ಯೊಂದಿಗೆ ಸೇರಿ ವಿವಿಧ ರಾಜ್ಯಗಳಿಂದ ಬಡ ಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಬಹಿರಂಗ ಪಡಿಸಿದ್ದಾರೆ’ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>