<div dir="ltr"><p class="bodytext" style="margin-bottom:0cm;"><strong>ನವದೆಹಲಿ</strong>: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶ ಪಥಗಳ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿಯನ್ನು 2022ರಅಕ್ಟೋಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದರು.</p><p>‘10 ಪಥಗಳ ಬೆಂಗಳೂರು-ಮೈಸೂರು ಆರ್ಥಿಕ ಕಾರಿಡಾರ್ ಅನ್ನು ದಾಖಲೆಯ ವೇಗದಲ್ಲಿ ನಿರ್ಮಿಸಲಾಗುತ್ತಿದೆ. ₹8,172 ಕೋಟಿ ವೆಚ್ಚದ ಆರ್ಥಿಕ ಕಾರಿಡಾರ್ 2022ರಅಕ್ಟೋಬರ್ ಒಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಇದು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಈಗಿನ 3 ಗಂಟೆಯಿಂದ ಒಂದೂವರೆ ಗಂಟೆಗೆ (90 ನಿಮಿಷಕ್ಕೆ) ತಗ್ಗಿಸುತ್ತದೆ’ ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.</p><p>ಎರಡು ನಗರಗಳ ನಡುವಿನ ರಸ್ತೆ ಯೋಜನೆಯನ್ನು ಭಾರತಮಾಲಾ ಪರಿಯೋಜನ ಹಂತ -1ರ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಎರಡು ಪ್ಯಾಕೇಜ್ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ಮೊದಲನೆಯ ಪ್ಯಾಕೇಜ್ನಲ್ಲಿ ಬೆಂಗಳೂರಿನಿಂದ ಮದ್ದೂರು ತಾಲ್ಲೂಕಿನ ನಿಡಘಟ್ಟವರೆಗೆ ಮತ್ತು ಎರಡನೆಯ ಪ್ಯಾಕೇಜ್ನಲ್ಲಿ ನಿಡಘಟ್ಟದಿಂದ ಮೈಸೂರಿನವರೆಗೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div dir="ltr"><p class="bodytext" style="margin-bottom:0cm;"><strong>ನವದೆಹಲಿ</strong>: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶ ಪಥಗಳ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿಯನ್ನು 2022ರಅಕ್ಟೋಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದರು.</p><p>‘10 ಪಥಗಳ ಬೆಂಗಳೂರು-ಮೈಸೂರು ಆರ್ಥಿಕ ಕಾರಿಡಾರ್ ಅನ್ನು ದಾಖಲೆಯ ವೇಗದಲ್ಲಿ ನಿರ್ಮಿಸಲಾಗುತ್ತಿದೆ. ₹8,172 ಕೋಟಿ ವೆಚ್ಚದ ಆರ್ಥಿಕ ಕಾರಿಡಾರ್ 2022ರಅಕ್ಟೋಬರ್ ಒಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಇದು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಈಗಿನ 3 ಗಂಟೆಯಿಂದ ಒಂದೂವರೆ ಗಂಟೆಗೆ (90 ನಿಮಿಷಕ್ಕೆ) ತಗ್ಗಿಸುತ್ತದೆ’ ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.</p><p>ಎರಡು ನಗರಗಳ ನಡುವಿನ ರಸ್ತೆ ಯೋಜನೆಯನ್ನು ಭಾರತಮಾಲಾ ಪರಿಯೋಜನ ಹಂತ -1ರ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಎರಡು ಪ್ಯಾಕೇಜ್ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ಮೊದಲನೆಯ ಪ್ಯಾಕೇಜ್ನಲ್ಲಿ ಬೆಂಗಳೂರಿನಿಂದ ಮದ್ದೂರು ತಾಲ್ಲೂಕಿನ ನಿಡಘಟ್ಟವರೆಗೆ ಮತ್ತು ಎರಡನೆಯ ಪ್ಯಾಕೇಜ್ನಲ್ಲಿ ನಿಡಘಟ್ಟದಿಂದ ಮೈಸೂರಿನವರೆಗೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>