<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹೆಸರಿನಲ್ಲಿ ಜನರು ಜೂಜು ಮತ್ತು ಬೆಟ್ಟಿಂಗ್ನಲ್ಲಿ ಹೆಚ್ಚು ತೊಡಗುತ್ತಿದ್ದು, ಇದು ಗಂಭೀರವಾದ ವಿಷಯ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿತು.</p><p>‘ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳಿಂದಾಗಿ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಪೀಠ ಈ ಮಾತು ಹೇಳಿತು.</p><p>ಅರ್ಜಿದಾರ ಕೆ.ಎ.ಪೌಲ್, ‘ಆನ್ಲೈನ್ನಲ್ಲಿ ಸಕ್ರಿಯವಾಗಿರುವ ಪ್ರಭಾವಿಗಳು, ನಟರು, ಕ್ರಿಕೆಟ್ ಪಟುಗಳು ಆ್ಯಪ್ಗಳ ಬಗ್ಗೆ ಪ್ರಚಾರ ಮಾಡಿ, ಬೆಟ್ಟಿಂಗ್ನತ್ತ ಜನರ ಸೆಳೆಯುತ್ತಿದ್ದಾರೆ’ ಎಂದು ದೂರಿದ್ದರು.</p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎನ್.ಕೋಟೀಶ್ವರ ಸಿಂಗ್ ಅವರಿದ್ದ ಪೀಠ, ಅರ್ಜಿ ಕುರಿತು ಪ್ರತಿಕ್ರಿಯೆಯನ್ನು ದಾಖಲಿಸುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p><p>ಕಳೆದ ಒಂದೆರಡು ವರ್ಷಗಳಲ್ಲಿ ಮೃತಪಟ್ಟಿರುವ ಮಕ್ಕಳ ಪೋಷಕರ ಪ್ರತಿನಿಧಿಯಾಗಿ ಪಿಐಎಲ್ ಸಲ್ಲಿಸುತ್ತಿದ್ದೇನೆ. ಸಿಗರೇಟ್ ಪ್ಯಾಕ್ಗಳ ಮೇಲೆ ಅದರ ಪರಿಣಾಮ ಬಿಂಬಿಸುವ ಚಿತ್ರಗಳಿವೆ. ಬೆಟ್ಟಿಂಗ್ ಆ್ಯಪ್ಗಳ ಸಂಬಂಧ ಇಂತಹ ಎಚ್ಚರಿಕೆಗಳನ್ನೂ ಪ್ರಸಾರ ಮಾಡುತ್ತಿಲ್ಲ. ಮಾಜಿ ಕ್ರಿಕೆಟ್ ಆಟಗಾರರೂ ಐಪಿಎಲ್ ವೇಳೆ ಈ ಆ್ಯಪ್ಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ’ ಎಂದು ಅರ್ಜಿದಾರ ಉಲ್ಲೇಖಿಸಿದ್ದಾರೆ.</p> .ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ: ನಾಲ್ವರ ಬಂಧನ .<p>ತೆಲಂಗಾಣದಲ್ಲೇ 1,023 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಿವುಡ್, ಟಾಲಿವುಡ್ನ 25ಕ್ಕೂ ಹೆಚ್ಚು ನಟರು, ಪ್ರಭಾವಿಗಳು ಈ ಅಮಾಯಕರ ಬದುಕಿನಲ್ಲಿ ಆಟವಾಡಿದ್ದಾರೆ. ಮೂಲಭೂತ ಹಕ್ಕಿನ ಉಲ್ಲಂಘನೆ ಸಂಬಂಧ ಈ ನಟರು, ಪ್ರಭಾವಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.</p><p>ಈ ಸಂಬಂಧ ತನ್ನ ಅಸಹಾಯಕತೆ ವ್ಯಕ್ತಪಡಿಸಿದ ಪೀಠವು, ‘ಇದು, ಸಮಾಜವೇ ಹಾದಿತಪ್ಪಿರುವ ಪರಿಸ್ಥಿತಿ. ಕೊಲೆ ಮಾಡದಂತೆ ಜನರನ್ನು ಹೇಗೆ ತಡೆಯಲು ಸಾಧ್ಯವಿಲ್ಲವೋ, ಹಾಗೆಯೇ ಕಾನೂನು ರಚನೆಯಿಂದ ಇದನ್ನೂ ತಡೆಯಲಾಗದು’ ಎಂದು ಪೀಠವು ವಿಚಾರಣೆ ವೇಳೆ ಪ್ರತಿಕ್ರಿಯಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹೆಸರಿನಲ್ಲಿ ಜನರು ಜೂಜು ಮತ್ತು ಬೆಟ್ಟಿಂಗ್ನಲ್ಲಿ ಹೆಚ್ಚು ತೊಡಗುತ್ತಿದ್ದು, ಇದು ಗಂಭೀರವಾದ ವಿಷಯ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿತು.</p><p>‘ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳಿಂದಾಗಿ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಪೀಠ ಈ ಮಾತು ಹೇಳಿತು.</p><p>ಅರ್ಜಿದಾರ ಕೆ.ಎ.ಪೌಲ್, ‘ಆನ್ಲೈನ್ನಲ್ಲಿ ಸಕ್ರಿಯವಾಗಿರುವ ಪ್ರಭಾವಿಗಳು, ನಟರು, ಕ್ರಿಕೆಟ್ ಪಟುಗಳು ಆ್ಯಪ್ಗಳ ಬಗ್ಗೆ ಪ್ರಚಾರ ಮಾಡಿ, ಬೆಟ್ಟಿಂಗ್ನತ್ತ ಜನರ ಸೆಳೆಯುತ್ತಿದ್ದಾರೆ’ ಎಂದು ದೂರಿದ್ದರು.</p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎನ್.ಕೋಟೀಶ್ವರ ಸಿಂಗ್ ಅವರಿದ್ದ ಪೀಠ, ಅರ್ಜಿ ಕುರಿತು ಪ್ರತಿಕ್ರಿಯೆಯನ್ನು ದಾಖಲಿಸುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p><p>ಕಳೆದ ಒಂದೆರಡು ವರ್ಷಗಳಲ್ಲಿ ಮೃತಪಟ್ಟಿರುವ ಮಕ್ಕಳ ಪೋಷಕರ ಪ್ರತಿನಿಧಿಯಾಗಿ ಪಿಐಎಲ್ ಸಲ್ಲಿಸುತ್ತಿದ್ದೇನೆ. ಸಿಗರೇಟ್ ಪ್ಯಾಕ್ಗಳ ಮೇಲೆ ಅದರ ಪರಿಣಾಮ ಬಿಂಬಿಸುವ ಚಿತ್ರಗಳಿವೆ. ಬೆಟ್ಟಿಂಗ್ ಆ್ಯಪ್ಗಳ ಸಂಬಂಧ ಇಂತಹ ಎಚ್ಚರಿಕೆಗಳನ್ನೂ ಪ್ರಸಾರ ಮಾಡುತ್ತಿಲ್ಲ. ಮಾಜಿ ಕ್ರಿಕೆಟ್ ಆಟಗಾರರೂ ಐಪಿಎಲ್ ವೇಳೆ ಈ ಆ್ಯಪ್ಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ’ ಎಂದು ಅರ್ಜಿದಾರ ಉಲ್ಲೇಖಿಸಿದ್ದಾರೆ.</p> .ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ: ನಾಲ್ವರ ಬಂಧನ .<p>ತೆಲಂಗಾಣದಲ್ಲೇ 1,023 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಿವುಡ್, ಟಾಲಿವುಡ್ನ 25ಕ್ಕೂ ಹೆಚ್ಚು ನಟರು, ಪ್ರಭಾವಿಗಳು ಈ ಅಮಾಯಕರ ಬದುಕಿನಲ್ಲಿ ಆಟವಾಡಿದ್ದಾರೆ. ಮೂಲಭೂತ ಹಕ್ಕಿನ ಉಲ್ಲಂಘನೆ ಸಂಬಂಧ ಈ ನಟರು, ಪ್ರಭಾವಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.</p><p>ಈ ಸಂಬಂಧ ತನ್ನ ಅಸಹಾಯಕತೆ ವ್ಯಕ್ತಪಡಿಸಿದ ಪೀಠವು, ‘ಇದು, ಸಮಾಜವೇ ಹಾದಿತಪ್ಪಿರುವ ಪರಿಸ್ಥಿತಿ. ಕೊಲೆ ಮಾಡದಂತೆ ಜನರನ್ನು ಹೇಗೆ ತಡೆಯಲು ಸಾಧ್ಯವಿಲ್ಲವೋ, ಹಾಗೆಯೇ ಕಾನೂನು ರಚನೆಯಿಂದ ಇದನ್ನೂ ತಡೆಯಲಾಗದು’ ಎಂದು ಪೀಠವು ವಿಚಾರಣೆ ವೇಳೆ ಪ್ರತಿಕ್ರಿಯಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>