<p><strong>ಹೋಶಿಯಾರಪುರ:</strong> ‘ಪಂಜಾಬ್ನ ನಿಜವಾದ ರಾಜಧಾನಿ ಚಂಡೀಗಢ. ಆದರೆ, ಅದನ್ನು ಅನ್ಯಾಯವಾಗಿ ನಿರಾಕರಿಸಲಾಗಿದೆ. ಅದನ್ನು ಪಡೆಯಲು ರಾಜ್ಯ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡಲಿದೆ’ ಎಂದು ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಹೇಳಿದ್ದಾರೆ.</p>.<p>ಗಣರಾಜ್ಯೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ತ್ಯಾಗ, ಸಾಧನೆ ಮತ್ತು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದರೂ ಪಂಜಾಬ್ಗೆ ತನ್ನದೇ ಆದ ರಾಜಧಾನಿ ಇಲ್ಲ. ಚಂಡೀಗಢ, ಪಂಜಾಬ್ ವಿಶ್ವವಿದ್ಯಾಲಯ ಮತ್ತು ನೀರಿನ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪಿತೂರಿಗಳು ಯಶಸ್ವಿಯಾಗುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಪ್ರಸ್ತುತ, ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಗಿದೆ.</p>.<p>‘ಪಂಜಾಬ್ ತನ್ನದೇ ಆದ ಹೈಕೋಟ್ ಹೊಂದಿಲ್ಲದಿರುವುದು ದುರದೃಷ್ಟಕರ. ಆದರೆ, ಈಶಾನ್ಯದ ಸಣ್ಣ ರಾಜ್ಯಗಳು ತಮ್ಮದೇ ಆದ ಹೈಕೋರ್ಟ್ಗಳನ್ನು ಹೊಂದಿವೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗಳಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಪಂಜಾಬಿಗಳು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ. </p>.<p>‘ದೇಶಕ್ಕಾಗಿ ನಾವು ಗರಿಷ್ಠ ತ್ಯಾಗಗಳನ್ನು ಮಾಡಿದರೂ, ನಮ್ಮ ರಾಜ್ಯಕ್ಕೆ ಅನ್ಯಾಯ ಮತ್ತು ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ನಮ್ಮ ಹಕ್ಕುಗಳನ್ನು ಪಡೆಯಲು ಇಂದಿಗೂ ಹೋರಾಡಬೇಕಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೋಶಿಯಾರಪುರ:</strong> ‘ಪಂಜಾಬ್ನ ನಿಜವಾದ ರಾಜಧಾನಿ ಚಂಡೀಗಢ. ಆದರೆ, ಅದನ್ನು ಅನ್ಯಾಯವಾಗಿ ನಿರಾಕರಿಸಲಾಗಿದೆ. ಅದನ್ನು ಪಡೆಯಲು ರಾಜ್ಯ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡಲಿದೆ’ ಎಂದು ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಹೇಳಿದ್ದಾರೆ.</p>.<p>ಗಣರಾಜ್ಯೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ತ್ಯಾಗ, ಸಾಧನೆ ಮತ್ತು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದರೂ ಪಂಜಾಬ್ಗೆ ತನ್ನದೇ ಆದ ರಾಜಧಾನಿ ಇಲ್ಲ. ಚಂಡೀಗಢ, ಪಂಜಾಬ್ ವಿಶ್ವವಿದ್ಯಾಲಯ ಮತ್ತು ನೀರಿನ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪಿತೂರಿಗಳು ಯಶಸ್ವಿಯಾಗುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಪ್ರಸ್ತುತ, ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಗಿದೆ.</p>.<p>‘ಪಂಜಾಬ್ ತನ್ನದೇ ಆದ ಹೈಕೋಟ್ ಹೊಂದಿಲ್ಲದಿರುವುದು ದುರದೃಷ್ಟಕರ. ಆದರೆ, ಈಶಾನ್ಯದ ಸಣ್ಣ ರಾಜ್ಯಗಳು ತಮ್ಮದೇ ಆದ ಹೈಕೋರ್ಟ್ಗಳನ್ನು ಹೊಂದಿವೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗಳಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಪಂಜಾಬಿಗಳು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ. </p>.<p>‘ದೇಶಕ್ಕಾಗಿ ನಾವು ಗರಿಷ್ಠ ತ್ಯಾಗಗಳನ್ನು ಮಾಡಿದರೂ, ನಮ್ಮ ರಾಜ್ಯಕ್ಕೆ ಅನ್ಯಾಯ ಮತ್ತು ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ನಮ್ಮ ಹಕ್ಕುಗಳನ್ನು ಪಡೆಯಲು ಇಂದಿಗೂ ಹೋರಾಡಬೇಕಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>