<p><strong>ಪುಣೆ:</strong> ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್ ಬಂದ್‘ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಮಹಾರಾಷ್ಟ್ರದ ಅಹಮದ್ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು‘ ಎಂದು ಹೇಳಿದರು.</p>.<p>‘ಸರ್ಕಾರರಗಳು ಭರವಸೆಗಳನ್ನು ಮಾತ್ರ ನೀಡಿದವು. ಆದರೆ ರೈತರ ಬೇಡಿಕೆಗಳನ್ನು ಎಂದಿಗೂ ಈಡೇರಿಸಲಿಲ್ಲ‘ ಎಂದು ಆರೋಪಿಸಿದ ಹಜಾರೆಯವರು, ‘ದೆಹಲಿಯಲ್ಲಿ ನಡೆಯುತ್ತಿರುವ ಈ ಆಂದೋಲನವು ದೇಶಾದ್ಯಂತ ವಿಸ್ತರಿಸಬೇಕೆಂದು ದೇಶದ ಜನರಲ್ಲಿ ನಾನು ಮನವಿ ಮಾಡುತ್ತಿದ್ದೇನೆ‘ ಎಂದರು.</p>.<p>‘ರೈತರ ಹಿತಾಸಕ್ತಿಗಾಗಿ ಕೆಲಸ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತಹ ವಾತಾವರಣವನ್ನು ಈ ಆಂದೋಲನ ಸೃಷ್ಟಿಸಬೇಕು. ಆದರೆ, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು‘ ಎಂದು ಅವರು ಮನವಿ ಮಾಡಿದರು.</p>.<p>‘ರೈತರು ಹೋರಾಟದ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಇದು ಸರಿಯಾದ ಸಮಯ‘ ಎಂದ ಅವರು ‘ನಾನು ಹಿಂದೆಯೂ ರೈತರ ಹೋರಾಟವನ್ನು ಬೆಂಬಲಿಸುತ್ತಿದ್ದೆ. ಅದನ್ನು ಈಗಲೂ ಮುಂದುವರಿಸುತ್ತೇನೆ‘ ಎಂದು ಹೇಳಿದರು.</p>.<p>‘ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗಕ್ಕೆ (ಸಿಎಸಿಪಿ) ಸ್ವಾಯತ್ತತೆ ನೀಡುವ ಜತೆಗೆ, ಕೃಷಿ ತಜ್ಞ ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು. ಒಂದೊಮ್ಮೆ ಇದು ಜಾರಿಗೆ ತರಲು ವಿಫಲವಾದರೆ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ‘ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್ ಬಂದ್‘ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಮಹಾರಾಷ್ಟ್ರದ ಅಹಮದ್ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು‘ ಎಂದು ಹೇಳಿದರು.</p>.<p>‘ಸರ್ಕಾರರಗಳು ಭರವಸೆಗಳನ್ನು ಮಾತ್ರ ನೀಡಿದವು. ಆದರೆ ರೈತರ ಬೇಡಿಕೆಗಳನ್ನು ಎಂದಿಗೂ ಈಡೇರಿಸಲಿಲ್ಲ‘ ಎಂದು ಆರೋಪಿಸಿದ ಹಜಾರೆಯವರು, ‘ದೆಹಲಿಯಲ್ಲಿ ನಡೆಯುತ್ತಿರುವ ಈ ಆಂದೋಲನವು ದೇಶಾದ್ಯಂತ ವಿಸ್ತರಿಸಬೇಕೆಂದು ದೇಶದ ಜನರಲ್ಲಿ ನಾನು ಮನವಿ ಮಾಡುತ್ತಿದ್ದೇನೆ‘ ಎಂದರು.</p>.<p>‘ರೈತರ ಹಿತಾಸಕ್ತಿಗಾಗಿ ಕೆಲಸ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತಹ ವಾತಾವರಣವನ್ನು ಈ ಆಂದೋಲನ ಸೃಷ್ಟಿಸಬೇಕು. ಆದರೆ, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು‘ ಎಂದು ಅವರು ಮನವಿ ಮಾಡಿದರು.</p>.<p>‘ರೈತರು ಹೋರಾಟದ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಇದು ಸರಿಯಾದ ಸಮಯ‘ ಎಂದ ಅವರು ‘ನಾನು ಹಿಂದೆಯೂ ರೈತರ ಹೋರಾಟವನ್ನು ಬೆಂಬಲಿಸುತ್ತಿದ್ದೆ. ಅದನ್ನು ಈಗಲೂ ಮುಂದುವರಿಸುತ್ತೇನೆ‘ ಎಂದು ಹೇಳಿದರು.</p>.<p>‘ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗಕ್ಕೆ (ಸಿಎಸಿಪಿ) ಸ್ವಾಯತ್ತತೆ ನೀಡುವ ಜತೆಗೆ, ಕೃಷಿ ತಜ್ಞ ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು. ಒಂದೊಮ್ಮೆ ಇದು ಜಾರಿಗೆ ತರಲು ವಿಫಲವಾದರೆ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ‘ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>