<p class="bodytext"><strong>ನವದೆಹಲಿ:</strong> ‘ಮೂರು ಕೃಷಿ ಕಾಯ್ದೆಗಳ ವಿರುದ್ಧ ಹಿಂಸಾರಹಿತವಾಗಿ ‘ಸತ್ಯಾಗ್ರಹ‘ ನಡೆಸುವ ಕೃಷಿಕರ ಸಂಕಲ್ಪ ದೃಢವಾಗಿದೆ. ಆದರೆ, ಶೋಷಣೆ ಮನೋಭಾವದ ಸರ್ಕಾರಕ್ಕೆ ಇದು ಇಷ್ಟವಾಗುತ್ತಿಲ್ಲ. ಹೀಗಾಗಿಯೇ ‘ಭಾರತ್ ಬಂದ್’ ಪ್ರತಿಭಟನೆಗೆ ಕರೆ ನೀಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಹೇಳಿದ್ದಾರೆ.</p>.<p class="bodytext">ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳ ಮುಖ್ಯಸ್ಥರು, ಅಧ್ಯಕ್ಷರು, ಮುಂಚೂಣಿ ಸಂಘಟನೆಗಳೂ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ.</p>.<p>ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ.</p>.<p>ಪ್ರತಿಭಟನೆ ಬೆಂಬಲಿಸಿ ‘ಐ ಸ್ಟ್ಯಾಂಡ್ ವಿತ್ ಫಾರ್ಮರ್ಸ್’ ಹ್ಯಾಷ್ಟ್ಯಾಗ್ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮುಷ್ಕರ ನಿರತ ರೈತ ಸಂಘಟನೆಗಳೊಂದಿಗೆ ಸರ್ಕಾರ ಈಗಾಗಲೇ 11 ಸುತ್ತು ಮಾತುಕತೆ ನಡೆಸಿದ್ದು, ಫಲಪ್ರದವಾಗಿಲ್ಲ. ಜನವರಿ 26ರಂದು ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಳಿಕ ಚರ್ಚೆ ಮುಂದುವರಿದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ:</strong> ‘ಮೂರು ಕೃಷಿ ಕಾಯ್ದೆಗಳ ವಿರುದ್ಧ ಹಿಂಸಾರಹಿತವಾಗಿ ‘ಸತ್ಯಾಗ್ರಹ‘ ನಡೆಸುವ ಕೃಷಿಕರ ಸಂಕಲ್ಪ ದೃಢವಾಗಿದೆ. ಆದರೆ, ಶೋಷಣೆ ಮನೋಭಾವದ ಸರ್ಕಾರಕ್ಕೆ ಇದು ಇಷ್ಟವಾಗುತ್ತಿಲ್ಲ. ಹೀಗಾಗಿಯೇ ‘ಭಾರತ್ ಬಂದ್’ ಪ್ರತಿಭಟನೆಗೆ ಕರೆ ನೀಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಹೇಳಿದ್ದಾರೆ.</p>.<p class="bodytext">ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳ ಮುಖ್ಯಸ್ಥರು, ಅಧ್ಯಕ್ಷರು, ಮುಂಚೂಣಿ ಸಂಘಟನೆಗಳೂ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ.</p>.<p>ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ.</p>.<p>ಪ್ರತಿಭಟನೆ ಬೆಂಬಲಿಸಿ ‘ಐ ಸ್ಟ್ಯಾಂಡ್ ವಿತ್ ಫಾರ್ಮರ್ಸ್’ ಹ್ಯಾಷ್ಟ್ಯಾಗ್ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮುಷ್ಕರ ನಿರತ ರೈತ ಸಂಘಟನೆಗಳೊಂದಿಗೆ ಸರ್ಕಾರ ಈಗಾಗಲೇ 11 ಸುತ್ತು ಮಾತುಕತೆ ನಡೆಸಿದ್ದು, ಫಲಪ್ರದವಾಗಿಲ್ಲ. ಜನವರಿ 26ರಂದು ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಳಿಕ ಚರ್ಚೆ ಮುಂದುವರಿದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>