<p><strong>ಲಖಿಂಪುರ:</strong> ಭಾರತ್ ಜೋಡೊ ನ್ಯಾಯ ಯಾತ್ರೆ ಪ್ರಯುಕ್ತ ಅಸ್ಸಾಂನ ಉತ್ತರ ಲಖಿಂಪುರದಲ್ಲಿ ಯಾತ್ರೆ ಹಾದುಹೋಗಲಿರುವ ಮಾರ್ಗದಲ್ಲಿ ಹಾಕಲಾಗಿದ್ದ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ.</p><p>‘ಉತ್ತರ ಲಖಿಂಪುರ ಪಟ್ಟಣದಲ್ಲಿ ಹಾಕಲಾಗಿದ್ದ ಬ್ಯಾನರ್ಗಳು, ಪೋಸ್ಟರ್ಗಳನ್ನು ಹಾನಿಗೊಳಿಸಲಾಗಿದೆ. ಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ಕಿಡಿಗೇಡಿಗಳು ಈ ಕೆಲಸಕ್ಕೆ ಕೈ ಹಾಕಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ಭರತ್ ನಾರಾಹ್ ತಿಳಿಸಿದ್ದಾರೆ.</p><p>‘ಅಸ್ಸಾಂನ ರಾಜಕೀಯ ಇತಿಹಾಸದಲ್ಲಿ ಒಂದು ರಾಜಕೀಯ ಪಕ್ಷ ಮತ್ತೊಂದು ಪಕ್ಷದ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಹಾನಿಗೊಳಿಸಿರುವುದನ್ನು ನಾವು ಇದುವರೆಗೂ ಕಂಡಿಲ್ಲ’ ಎಂದು ಅವರು ಹೇಳಿದರು.</p><p>‘ರಾಜ್ಯದಲ್ಲಿ ಯಾತ್ರೆ ಸುಗಮವಾಗಿ ನಡೆಯದಂತೆ ಹಲವು ಅಡೆತಡೆಗಳನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸೃಷ್ಟಿಸಿತ್ತು. ಯಾತ್ರೆಗೆ ಜನ ಸೇರದಂತೆ ಮಾಡಲು ಪ್ರಯತ್ನಿಸಿತ್ತು. ಆದರೆ ಯಾತ್ರೆಯ ಯಶಸ್ಸನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ’ ಎಂದರು.</p><p>‘ಮೊದಲ ಭಾರತ್ ಜೋಡೊ ಯಾತ್ರೆ ವೇಳೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮೂಲಕ ಹಾದುಹೋಗುವಾಗಲೂ ನಾವು ಇಷ್ಟೊಂದು ತೊಂದರೆ ಅನುಭವಿಸಿರಲಿಲ್ಲ. ಈ ಎರಡು ದಿನಗಳಲ್ಲಿ ಅಸ್ಸಾಂನಲ್ಲಿ ಎದುರಿಸಿದ ಕಷ್ಟಗಳನ್ನು ಹೇಳಲು ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.</p><p>‘ನಮ್ಮ ವಿರುದ್ಧ ಎಫ್ಐಆರ್ ಹಾಕಿ ಜೈಲು ಶಿಕ್ಷೆ ವಿಧಿಸುವ ಬೆದರಿಕೆ ಹಾಕಲಾಗುತ್ತಿದೆ. ಯಾತ್ರೆಗೆ ಜನರು ಸೇರದಂತೆ ತಡೆಯಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.</p><p>ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಅರುಣಾಚಲ ಪ್ರದೇಶವನ್ನು ಪ್ರವೇಶಿಸುವ ಮೊದಲು ಲಖಿಂಪುರ ಜಿಲ್ಲೆಯ ಹಲವಾರು ಭಾಗಗಳನ್ನು ಹಾದು ಹೋಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖಿಂಪುರ:</strong> ಭಾರತ್ ಜೋಡೊ ನ್ಯಾಯ ಯಾತ್ರೆ ಪ್ರಯುಕ್ತ ಅಸ್ಸಾಂನ ಉತ್ತರ ಲಖಿಂಪುರದಲ್ಲಿ ಯಾತ್ರೆ ಹಾದುಹೋಗಲಿರುವ ಮಾರ್ಗದಲ್ಲಿ ಹಾಕಲಾಗಿದ್ದ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ.</p><p>‘ಉತ್ತರ ಲಖಿಂಪುರ ಪಟ್ಟಣದಲ್ಲಿ ಹಾಕಲಾಗಿದ್ದ ಬ್ಯಾನರ್ಗಳು, ಪೋಸ್ಟರ್ಗಳನ್ನು ಹಾನಿಗೊಳಿಸಲಾಗಿದೆ. ಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ಕಿಡಿಗೇಡಿಗಳು ಈ ಕೆಲಸಕ್ಕೆ ಕೈ ಹಾಕಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ಭರತ್ ನಾರಾಹ್ ತಿಳಿಸಿದ್ದಾರೆ.</p><p>‘ಅಸ್ಸಾಂನ ರಾಜಕೀಯ ಇತಿಹಾಸದಲ್ಲಿ ಒಂದು ರಾಜಕೀಯ ಪಕ್ಷ ಮತ್ತೊಂದು ಪಕ್ಷದ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಹಾನಿಗೊಳಿಸಿರುವುದನ್ನು ನಾವು ಇದುವರೆಗೂ ಕಂಡಿಲ್ಲ’ ಎಂದು ಅವರು ಹೇಳಿದರು.</p><p>‘ರಾಜ್ಯದಲ್ಲಿ ಯಾತ್ರೆ ಸುಗಮವಾಗಿ ನಡೆಯದಂತೆ ಹಲವು ಅಡೆತಡೆಗಳನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸೃಷ್ಟಿಸಿತ್ತು. ಯಾತ್ರೆಗೆ ಜನ ಸೇರದಂತೆ ಮಾಡಲು ಪ್ರಯತ್ನಿಸಿತ್ತು. ಆದರೆ ಯಾತ್ರೆಯ ಯಶಸ್ಸನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ’ ಎಂದರು.</p><p>‘ಮೊದಲ ಭಾರತ್ ಜೋಡೊ ಯಾತ್ರೆ ವೇಳೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮೂಲಕ ಹಾದುಹೋಗುವಾಗಲೂ ನಾವು ಇಷ್ಟೊಂದು ತೊಂದರೆ ಅನುಭವಿಸಿರಲಿಲ್ಲ. ಈ ಎರಡು ದಿನಗಳಲ್ಲಿ ಅಸ್ಸಾಂನಲ್ಲಿ ಎದುರಿಸಿದ ಕಷ್ಟಗಳನ್ನು ಹೇಳಲು ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.</p><p>‘ನಮ್ಮ ವಿರುದ್ಧ ಎಫ್ಐಆರ್ ಹಾಕಿ ಜೈಲು ಶಿಕ್ಷೆ ವಿಧಿಸುವ ಬೆದರಿಕೆ ಹಾಕಲಾಗುತ್ತಿದೆ. ಯಾತ್ರೆಗೆ ಜನರು ಸೇರದಂತೆ ತಡೆಯಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.</p><p>ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಅರುಣಾಚಲ ಪ್ರದೇಶವನ್ನು ಪ್ರವೇಶಿಸುವ ಮೊದಲು ಲಖಿಂಪುರ ಜಿಲ್ಲೆಯ ಹಲವಾರು ಭಾಗಗಳನ್ನು ಹಾದು ಹೋಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>