<p><strong>ಅಮೇಥಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ಉತ್ತರ ಪ್ರದೇಶದ ಅಮೇಥಿಗೆ ಇದೇ ಫೆಬ್ರುವರಿ 19ರಂದು ತಲುಪಲಿದೆ ಎಂದು ಪಕ್ಷದ ಮುಖಂಡರೊಬ್ಬರು ಗುರುವಾರ ತಿಳಿಸಿದ್ದಾರೆ.</p>.ಕಾಂಗ್ರೆಸ್ನ ‘ಕಪ್ಪು ಪತ್ರ’ ಅಭಿವೃದ್ಧಿ ಕಾರ್ಯಗಳಿಗೆ ‘ದೃಷ್ಟಿ ಬೊಟ್ಟು’: ಮೋದಿ.<p>ರಾಹುಲ್ ಗಾಂಧಿ ಈ ಹಿಂದೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು.</p><p>ಅಮೇಥಿ ಜಿಲ್ಲೆಯ ಗೌರಿಗಂಜ್ನಲ್ಲಿರುವ ಬಾಬುಗಂಜ್ ಸಗ್ರಾ ಆಶ್ರಮದ ಬಳಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆಂದು ಎಂದು ಜಿಲ್ಲಾ ಮುಖಂಡ ಅನಿಲ್ ಸಿಂಗ್ ಹೇಳಿದ್ದಾರೆ.</p><p>ಯಾತ್ರೆಯು ಮಹಾರಾಜಪುರ, ಅಮೇಥಿ , ಗೌರಿಗಂಜ್, ಗಾಂಧಿನಗರ, ಜೈಸ್ ಮತ್ತು ಫರ್ಸತ್ಗಂಜ್ ಮೂಲಕ ಸಾಗಿ ರಾಯ್ ಬರೇಲಿ ಜಿಲ್ಲೆಗೆ ತಲುಪಲಿದೆ. ಈ ವೇಳೆ ಅನೇಕ ಕಡೆ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದರು.</p>.ಜಾರ್ಖಂಡ್ ಮಾಜಿ ಸಿಎಂ ಬಂಧನ ಪ್ರಕರಣದಲ್ಲಿ ರಾಜಭವನದ ಕೈವಾಡವಿಲ್ಲ: ರಾಜ್ಯಪಾಲ.<p>ರಾಯ್ ಬರೇಲಿ ಜಿಲ್ಲೆಯಲ್ಲಿ ಸಾಗುವ ಯಾತ್ರೆಯ ವೇಳೆ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರು ಭಾಗವಹಿಸುತ್ತಾರೆಂದು ಸಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.</p><p>ಅಮೇಥಿಯಲ್ಲಿ ನಡೆಯುವ ಭಾರತ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್ ಈ ಕ್ಷೇತ್ರದಿಂದಲೇ ಸ್ಪರ್ಧಿಸುವ ಸೂಚನೆ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ.</p><p>ರಾಹುಲ್ ಅಮೇಥಿಯಿಂದ ಮಾತ್ರ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಈ ಹಿಂದೆ ಹೇಳಿದ್ದರು. ಆದರೆ ಇದುವರೆಗೂ ಕಾಂಗ್ರೆಸ್ನಿಂದ ಅಧಿಕೃತ ಮಾಹಿತಿ ದೊರೆತಿಲ್ಲ. </p><p>ರಾಹುಲ್ ಗಾಂಧಿ 2002 ರಿಂದ 2019ರವರೆಗೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸಂಸದರಾಗಿದ್ದರು.</p><p>ರಾಹುಲ್ 2022ರ ಫೆಬ್ರವರಿ 15ರಂದು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಅಮೇಥಿಗೆ ಕೊನೆಯದಾಗಿ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೇಥಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ಉತ್ತರ ಪ್ರದೇಶದ ಅಮೇಥಿಗೆ ಇದೇ ಫೆಬ್ರುವರಿ 19ರಂದು ತಲುಪಲಿದೆ ಎಂದು ಪಕ್ಷದ ಮುಖಂಡರೊಬ್ಬರು ಗುರುವಾರ ತಿಳಿಸಿದ್ದಾರೆ.</p>.ಕಾಂಗ್ರೆಸ್ನ ‘ಕಪ್ಪು ಪತ್ರ’ ಅಭಿವೃದ್ಧಿ ಕಾರ್ಯಗಳಿಗೆ ‘ದೃಷ್ಟಿ ಬೊಟ್ಟು’: ಮೋದಿ.<p>ರಾಹುಲ್ ಗಾಂಧಿ ಈ ಹಿಂದೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು.</p><p>ಅಮೇಥಿ ಜಿಲ್ಲೆಯ ಗೌರಿಗಂಜ್ನಲ್ಲಿರುವ ಬಾಬುಗಂಜ್ ಸಗ್ರಾ ಆಶ್ರಮದ ಬಳಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆಂದು ಎಂದು ಜಿಲ್ಲಾ ಮುಖಂಡ ಅನಿಲ್ ಸಿಂಗ್ ಹೇಳಿದ್ದಾರೆ.</p><p>ಯಾತ್ರೆಯು ಮಹಾರಾಜಪುರ, ಅಮೇಥಿ , ಗೌರಿಗಂಜ್, ಗಾಂಧಿನಗರ, ಜೈಸ್ ಮತ್ತು ಫರ್ಸತ್ಗಂಜ್ ಮೂಲಕ ಸಾಗಿ ರಾಯ್ ಬರೇಲಿ ಜಿಲ್ಲೆಗೆ ತಲುಪಲಿದೆ. ಈ ವೇಳೆ ಅನೇಕ ಕಡೆ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದರು.</p>.ಜಾರ್ಖಂಡ್ ಮಾಜಿ ಸಿಎಂ ಬಂಧನ ಪ್ರಕರಣದಲ್ಲಿ ರಾಜಭವನದ ಕೈವಾಡವಿಲ್ಲ: ರಾಜ್ಯಪಾಲ.<p>ರಾಯ್ ಬರೇಲಿ ಜಿಲ್ಲೆಯಲ್ಲಿ ಸಾಗುವ ಯಾತ್ರೆಯ ವೇಳೆ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರು ಭಾಗವಹಿಸುತ್ತಾರೆಂದು ಸಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.</p><p>ಅಮೇಥಿಯಲ್ಲಿ ನಡೆಯುವ ಭಾರತ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್ ಈ ಕ್ಷೇತ್ರದಿಂದಲೇ ಸ್ಪರ್ಧಿಸುವ ಸೂಚನೆ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ.</p><p>ರಾಹುಲ್ ಅಮೇಥಿಯಿಂದ ಮಾತ್ರ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಈ ಹಿಂದೆ ಹೇಳಿದ್ದರು. ಆದರೆ ಇದುವರೆಗೂ ಕಾಂಗ್ರೆಸ್ನಿಂದ ಅಧಿಕೃತ ಮಾಹಿತಿ ದೊರೆತಿಲ್ಲ. </p><p>ರಾಹುಲ್ ಗಾಂಧಿ 2002 ರಿಂದ 2019ರವರೆಗೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸಂಸದರಾಗಿದ್ದರು.</p><p>ರಾಹುಲ್ 2022ರ ಫೆಬ್ರವರಿ 15ರಂದು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಅಮೇಥಿಗೆ ಕೊನೆಯದಾಗಿ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>