<p><strong>ಶಿಮ್ಲಾ:</strong> ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೊ‘ ಯಾತ್ರೆ ಬುಧವಾರ ಬೆಳಿಗ್ಗೆ ಹಿಮಾಚಲ ಪ್ರದೇಶವನ್ನು ಪ್ರವೇಶ ಮಾಡಿದೆ.</p>.<p>ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ, ರಾಜ್ಯ ಪಕ್ಷದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಸಿಂಗ್, ಸಚಿವರು, ಶಾಸಕರು, ಮುಖಂಡರು ಸೇರಿದಂತೆ ಕಾರ್ಯಕರ್ತರು ಇಲ್ಲಿನ ಮನ್ಸೆರಾ ಟೋಲ್ ಪ್ಲಾಜಾದ ಸಮೀಪ ಯಾತ್ರೆಯನ್ನು ಸ್ವಾಗತಿಸಿದರು. </p>.<p>ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯವನ್ನು ಬಿತ್ತುತ್ತಿದೆ ಎಂದು ಆರೋಪ ಮಾಡಿದರು. </p>.<p>ಕೇಂದ್ರ ಸರ್ಕಾರದ ನೀತಿಗಳು, ನೋಟು ರದ್ಧತಿ, ಜಿಎಸ್ಟಿ ಮತ್ತು ಕೃಷಿ ವಿರೋಧಿ ಕಾನೂನುಗಳು ಮೂರು ಅಥವಾ ನಾಲ್ಕು ಜನ ಕೋಟ್ಯಧಿಪತಿಗಳಿಗೆ ಮಾತ್ರ ಪ್ರಯೋಜನವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. </p>.<p>ರೈತರು, ಯುವಕರ, ಕಾರ್ಮಿಕರ ಅಭಿವೃದ್ಧಿ ಕಾರ್ಯಸೂಚಿ ಬಿಜೆಪಿಯವರಲ್ಲಿ ಇಲ್ಲ ಎಂದರು.</p>.<p>ಭಾರತ್ ಜೋಡೊ ಯಾತ್ರೆ ಇಲ್ಲಿಯವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣದ ಮೂಲಕ ಹಾದುಹೋಗಿದೆ. ಇದೀಗ ಹಿಮಾಚಲ ಪ್ರವೇಶ ಮಾಡಿದೆ.</p>.<p>2022ರ ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭವಾಯಿತು. ಇದೇ ತಿಂಗಳು (ಜನವರಿ) 30 ರಂದು ಜೋಡೊ ಯಾತ್ರೆ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೊ‘ ಯಾತ್ರೆ ಬುಧವಾರ ಬೆಳಿಗ್ಗೆ ಹಿಮಾಚಲ ಪ್ರದೇಶವನ್ನು ಪ್ರವೇಶ ಮಾಡಿದೆ.</p>.<p>ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ, ರಾಜ್ಯ ಪಕ್ಷದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಸಿಂಗ್, ಸಚಿವರು, ಶಾಸಕರು, ಮುಖಂಡರು ಸೇರಿದಂತೆ ಕಾರ್ಯಕರ್ತರು ಇಲ್ಲಿನ ಮನ್ಸೆರಾ ಟೋಲ್ ಪ್ಲಾಜಾದ ಸಮೀಪ ಯಾತ್ರೆಯನ್ನು ಸ್ವಾಗತಿಸಿದರು. </p>.<p>ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯವನ್ನು ಬಿತ್ತುತ್ತಿದೆ ಎಂದು ಆರೋಪ ಮಾಡಿದರು. </p>.<p>ಕೇಂದ್ರ ಸರ್ಕಾರದ ನೀತಿಗಳು, ನೋಟು ರದ್ಧತಿ, ಜಿಎಸ್ಟಿ ಮತ್ತು ಕೃಷಿ ವಿರೋಧಿ ಕಾನೂನುಗಳು ಮೂರು ಅಥವಾ ನಾಲ್ಕು ಜನ ಕೋಟ್ಯಧಿಪತಿಗಳಿಗೆ ಮಾತ್ರ ಪ್ರಯೋಜನವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. </p>.<p>ರೈತರು, ಯುವಕರ, ಕಾರ್ಮಿಕರ ಅಭಿವೃದ್ಧಿ ಕಾರ್ಯಸೂಚಿ ಬಿಜೆಪಿಯವರಲ್ಲಿ ಇಲ್ಲ ಎಂದರು.</p>.<p>ಭಾರತ್ ಜೋಡೊ ಯಾತ್ರೆ ಇಲ್ಲಿಯವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣದ ಮೂಲಕ ಹಾದುಹೋಗಿದೆ. ಇದೀಗ ಹಿಮಾಚಲ ಪ್ರವೇಶ ಮಾಡಿದೆ.</p>.<p>2022ರ ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭವಾಯಿತು. ಇದೇ ತಿಂಗಳು (ಜನವರಿ) 30 ರಂದು ಜೋಡೊ ಯಾತ್ರೆ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>