ಸಾವರ್ಕರ್ ಹೇಳಿಕೆ ಮುಗಿದ ಅಧ್ಯಾಯ (ಬುರ್ಹಾನ್ಪುರ): ‘ಸಾವರ್ಕರ್ ಅವರ ಕುರಿತು ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆಯು ಮುಗಿದ ಅಧ್ಯಾಯವಾಗಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಯಾವಾಗ ನಮ್ಮ ನಾಯಕರ ವಿರುದ್ಧ ಸುಳ್ಳು ಹೇಳುವುದನ್ನು ನಿಲ್ಲಿಸುತ್ತದೆಯೋ, ನಾವು ಕೂಡಾ ಅವರ ನಾಯಕರ ವಿರುದ್ಧ ಸತ್ಯ ಹೇಳುವುದನ್ನು ನಿಲ್ಲಿಸುತ್ತೇವೆ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಂ ರಮೇಶ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.