<p><strong>ನವದೆಹಲಿ:</strong>ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಭಾರತೀಯ ಕಿಸಾನ್ ಯೂನಿಯನ್ (ಭಾನು ಬಣ), ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.</p>.<p>ಆರ್ಜೆಡಿ ಸಂಸದ ಮನೋಜ್ ಝಾ, ಡಿಎಂಕೆ ಸಂಸದ ತಿರುಚ್ಚಿ ಶಿವ ಹಾಗೂ ಛತ್ತೀಸಗಡದ ರಾಕೇಶ್ ವೈಷ್ಣವ್ ಎಂಬುವರುಈ ಕಾಯ್ದೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಈಚೆಗೆ ವಿಚಾರಣೆಗೆ ಎತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠವು ಕೇಂದ್ರಕ್ಕೆ ನೋಟಿಸ್ ನೀಡಿತ್ತು. ಈ ಅರ್ಜಿಯಲ್ಲಿ ತನ್ನನ್ನೂ ಕಕ್ಷಿದಾರನನ್ನಾಗಿ ಪರಿಗಣಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ನ (ಭಾನು ಬಣ) ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅರ್ಜಿಯಲ್ಲಿ ಹೇಳಿದ್ದಾರೆ.</p>.<p>ಮೂರು ಕಾಯ್ದೆಗಳು ಜಾರಿಯಲ್ಲಿ ಮುಂದುವರಿದರೆ ಇಡೀ ದೇಶವೇ ನಾಶವಾಗಲಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಈ ಕಾಯ್ದೆಗಳು ಕಾನೂನುಬಾಹಿರ ಮತ್ತು ಕೃಷಿ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಆಸ್ಪದ ಕೊಡುತ್ತವೆ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಭಾರತೀಯ ಕಿಸಾನ್ ಯೂನಿಯನ್ (ಭಾನು ಬಣ), ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.</p>.<p>ಆರ್ಜೆಡಿ ಸಂಸದ ಮನೋಜ್ ಝಾ, ಡಿಎಂಕೆ ಸಂಸದ ತಿರುಚ್ಚಿ ಶಿವ ಹಾಗೂ ಛತ್ತೀಸಗಡದ ರಾಕೇಶ್ ವೈಷ್ಣವ್ ಎಂಬುವರುಈ ಕಾಯ್ದೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಈಚೆಗೆ ವಿಚಾರಣೆಗೆ ಎತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠವು ಕೇಂದ್ರಕ್ಕೆ ನೋಟಿಸ್ ನೀಡಿತ್ತು. ಈ ಅರ್ಜಿಯಲ್ಲಿ ತನ್ನನ್ನೂ ಕಕ್ಷಿದಾರನನ್ನಾಗಿ ಪರಿಗಣಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ನ (ಭಾನು ಬಣ) ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅರ್ಜಿಯಲ್ಲಿ ಹೇಳಿದ್ದಾರೆ.</p>.<p>ಮೂರು ಕಾಯ್ದೆಗಳು ಜಾರಿಯಲ್ಲಿ ಮುಂದುವರಿದರೆ ಇಡೀ ದೇಶವೇ ನಾಶವಾಗಲಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಈ ಕಾಯ್ದೆಗಳು ಕಾನೂನುಬಾಹಿರ ಮತ್ತು ಕೃಷಿ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಆಸ್ಪದ ಕೊಡುತ್ತವೆ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>