<p><strong>ನವದೆಹಲಿ</strong>: ಬಾಲಿವುಡ್ ನಟ ಶಾರುಖ್ ಖಾನ್ ಅಭಿಯನದ ಜವಾನ್ ಚಿತ್ರ ಇತ್ತೀಚಿಗೆ ತೆರೆಕಂಡಿತ್ತು. ಈ ಚಿತ್ರದಲ್ಲಿ ತೋರಿಸಲಾಗಿರುವ ಭ್ರಷ್ಟಾಚಾರದ ವಿಷಯವನ್ನು ಕಾಂಗ್ರೆಸ್ ವಿರುದ್ಧದ ಆರೋಪಕ್ಕೆ ಬಿಜೆಪಿ ಬಳಸಿಕೊಂಡಿದೆ.</p><p>ಈ ಕುರಿತು ಮೈಕ್ರೊ ಬ್ಲಾಗಿಂಗ್ ತಾಣ ಎಕ್ಸ್ (ಟ್ವಿಟರ್)ನಲ್ಲಿ ವಿಷಯ ಹಂಚಿಕೊಂಡಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಕಾಂಗ್ರೆಸ್ ಪಕ್ಷದ 10 ವರ್ಷಗಳ ಭ್ರಷ್ಟಾಚಾರ ತುಂಬಿದ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ಇದನ್ನು ತೋರಿಸಿದ್ದಕ್ಕಾಗಿ ಶಾರುಖ್ ಖಾನ್ ಅವರಿಗೆ ಅಭಿನಂದನೆಗಳು ಎಂದಿದ್ದಾರೆ.</p>. <p>ಜವಾನ್ ಚಿತ್ರವು ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯ ಕರಾಳ ರಾಜಕೀಯವನ್ನು ನೆನಪಿಸುತ್ತದೆ ಎಂದು ಭಾಟಿಯಾ ಟೀಕಿಸಿದ್ದಾರೆ.</p><p>ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದ ಕಲ್ಲಿದ್ದಲು ಹಗರಣ, 2G ಹಗರಣ ಸೇರಿದಂತೆ ಅನೇಕ ಹಗರಣಗಳು ನಡೆದಿವೆ ಎಂದು ಆರೋಪಿಸಿದ ಅವರು, ಈಗಿನ ನರೇಂದ್ರ ಮೋದಿ ಸರ್ಕಾರವು 9 ವರ್ಷಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ಪ್ರಕರಣಗಳಲ್ಲಿ ತೊಡಗಿಕೊಂಡಿಲ್ಲ ಎಂದು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಾಲಿವುಡ್ ನಟ ಶಾರುಖ್ ಖಾನ್ ಅಭಿಯನದ ಜವಾನ್ ಚಿತ್ರ ಇತ್ತೀಚಿಗೆ ತೆರೆಕಂಡಿತ್ತು. ಈ ಚಿತ್ರದಲ್ಲಿ ತೋರಿಸಲಾಗಿರುವ ಭ್ರಷ್ಟಾಚಾರದ ವಿಷಯವನ್ನು ಕಾಂಗ್ರೆಸ್ ವಿರುದ್ಧದ ಆರೋಪಕ್ಕೆ ಬಿಜೆಪಿ ಬಳಸಿಕೊಂಡಿದೆ.</p><p>ಈ ಕುರಿತು ಮೈಕ್ರೊ ಬ್ಲಾಗಿಂಗ್ ತಾಣ ಎಕ್ಸ್ (ಟ್ವಿಟರ್)ನಲ್ಲಿ ವಿಷಯ ಹಂಚಿಕೊಂಡಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಕಾಂಗ್ರೆಸ್ ಪಕ್ಷದ 10 ವರ್ಷಗಳ ಭ್ರಷ್ಟಾಚಾರ ತುಂಬಿದ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ಇದನ್ನು ತೋರಿಸಿದ್ದಕ್ಕಾಗಿ ಶಾರುಖ್ ಖಾನ್ ಅವರಿಗೆ ಅಭಿನಂದನೆಗಳು ಎಂದಿದ್ದಾರೆ.</p>. <p>ಜವಾನ್ ಚಿತ್ರವು ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯ ಕರಾಳ ರಾಜಕೀಯವನ್ನು ನೆನಪಿಸುತ್ತದೆ ಎಂದು ಭಾಟಿಯಾ ಟೀಕಿಸಿದ್ದಾರೆ.</p><p>ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದ ಕಲ್ಲಿದ್ದಲು ಹಗರಣ, 2G ಹಗರಣ ಸೇರಿದಂತೆ ಅನೇಕ ಹಗರಣಗಳು ನಡೆದಿವೆ ಎಂದು ಆರೋಪಿಸಿದ ಅವರು, ಈಗಿನ ನರೇಂದ್ರ ಮೋದಿ ಸರ್ಕಾರವು 9 ವರ್ಷಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ಪ್ರಕರಣಗಳಲ್ಲಿ ತೊಡಗಿಕೊಂಡಿಲ್ಲ ಎಂದು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>