ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿಲಾಯಿ ಉಕ್ಕು ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Last Updated 10 ಅಕ್ಟೋಬರ್ 2018, 12:14 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸಗಡದಲ್ಲಿರುವ ಸರ್ಕಾರಿ ಸ್ವಾಮ್ಯದ ಭಿಲಾಯಿ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ.

ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್‌) ಕಾರ್ಖಾನೆಯ ಗ್ಯಾಸ್‌ ಪೈಪ್‌ಲೈನ್‌ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದರು.

‘ತೀವ್ರ ಸುಟ್ಟ ಗಾಯಗಳಾಗಿದ್ದ 14 ಮಂದಿಯನ್ನು ಭಿಲಾಯಿಯ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಎಐಐಎಂಎಸ್‌) ನಾಲ್ವರು ವೈದ್ಯರ ತಂಡವನ್ನು ಗಾಯಾಳುಗಳ ಚಿಕಿತ್ಸೆಗಾಗಿ ಛತ್ತೀಸಗಡಕ್ಕೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

ಪರಿಹಾರ ಘೋಷಣೆ: ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹30ಲಕ್ಷ, ತೀವ್ರ ಗಾಯಗೊಂಡವರಿಗೆ ತಲಾ ₹15 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ತಲಾ ₹2ಲಕ್ಷ ಪರಿಹಾರ ನೀಡಲಾಗುವುದು’ ಎಂದು ಉಕ್ಕು ಸಚಿವಾಲಯ ತಿಳಿಸಿದೆ.

ಸಿಇಒ ವಜಾ: ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಭಿಲಾಯಿ ಉಕ್ಕು ಕಾರ್ಖಾನೆಯ ಸಿಇಒ ಅವರನ್ನು ವಜಾ ಮಾಡಲಾಗಿದೆ. ಇತರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT