ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್ ಮೇಲೆ ಗುಂಡಿನ ದಾಳಿ

Published 28 ಜೂನ್ 2023, 14:40 IST
Last Updated 28 ಜೂನ್ 2023, 14:40 IST
ಅಕ್ಷರ ಗಾತ್ರ

ಸಹರಾನ್ಪುರ: ಭೀಮ್‌ ಆರ್ಮಿ ಮುಖ್ಯಸ್ಥ, ಆಜಾದ್ ಸಮಾಜ ಪಾರ್ಟಿ (ಕಾನ್ಶಿ ರಾಮ್) ನಾಯಕ ಚಂದ್ರಶೇಖರ್ ಆಜಾದ್‌ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೆ ಪ್ರಯತ್ನಿಸಿದ ಘಟನೆ ಉತ್ತರ ಪ್ರದೇಶದ ಸಹರಾನ್ಪುದಲ್ಲಿ ನಡೆದಿದೆ.

ಬುಧವಾರ ಬೆಂಬಲಿಗರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರಿನಲ್ಲಿ ಹೊರಡುವ ವೇಳೆ ಚಂದ್ರಶೇಖರ್‌ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಾರೊಂದರಲ್ಲಿ ಬಂದಿದ್ದ ದುಷ್ಕರ್ಮಿಗಳು ಚಂದ್ರಶೇಖರ್‌ ಅವರ ಕಾರಿನ ಬಲಭಾಗಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ ಚಂದ್ರಶೇಖರ್‌ ಅವರ ಹೊಟ್ಟೆಗೆ ಗುಂಡು ತಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು‘ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಅಭಿಮನ್ಯು ಮಾಂಗ್ಲಿಕ್ ಹೇಳಿದ್ದಾರೆ.

‘ದುಷ್ಕರ್ಮಿಗಳ ಬಗ್ಗೆ ನನಗೆ ಚೆನ್ನಾಗಿ ನೆನಪಿಲ್ಲ. ಆದರೆ ನನ್ನ ಜನರು ಅವರನ್ನು ನೋಡಿದ್ದಾರೆ. ಗುಂಡು ಹಾರಿಸಿ ದುಷ್ಕರ್ಮಿಗಳು ಜಾಗದಿಂದ ಪರಾರಿಯಾಗಿದ್ದಾರೆ. ಘಟನೆ ಸಂಭವಿಸಿದ ವೇಳೆ ನನ್ನ ಕಿರಿಯ ಸಹೋದರ ಸೇರಿದಂತೆ ನಾವು ಐವರು ಕಾರಿನಲ್ಲಿದ್ದೆವು‘ ಎಂದು ಚಂದ್ರಶೇಖರ್ ಆಜಾದ್‌ ಹೇಳಿದ್ದಾರೆ.

ದುಷ್ಕರ್ಮಿಗಳಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT