<p><strong>ಧಾರ್</strong>: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ–ಕಮಲ್ ಮೌಲಾ ಮಸೀದಿಯಲ್ಲಿ ವಸಂತ ಪಂಚಮಿ ದಿನವಾದ ಶುಕ್ರವಾರ ಹಿಂದೂಗಳು ಸರಸ್ವತಿ ದೇವಿಗೆ ಪೂಜೆ ಸಲ್ಲಿಸಿದರೆ, ಮತ್ತೊಂದೆಡೆ ಮುಸ್ಲಿಮರು ನಮಾಜ್ ಮಾಡಿದರು.</p>.<p>ಈ ಮೂಲಕ ವಿವಾದಿತ ಸ್ಥಳದಲ್ಲಿ ಎರಡೂ ಧರ್ಮದವರು ಶಾಂತಿ–ಸುವ್ಯವಸ್ಥೆಯನ್ನು ಕಾಪಾಡಿದರು. ಅಹಿತಕರವಾದ ಮತ್ತು ಶಾಂತಿ ಭಂಗವಾಗುವ ಯಾವುದೇ ಘಟನೆ ನಡೆದಿಲ್ಲ.</p>.<p>ಬಿಗಿ ಭದ್ರತೆಯ ನಡುವೆ ಮುಂಜಾನೆ ಪೂಜೆ ಆರಂಭಿಸಿದ ಹಿಂದೂಗಳು ಸಂಜೆಯವರೆಗೆ ಪೂಜೆ ನಡೆಸಿದರು. ಮುಸ್ಲಿಮರು ಮಧ್ಯಾಹ್ನ 1ರಿಂದ 3 ಗಂಟೆವರೆಗಿನ ಅವಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಪ್ರತಿ ಮಂಗಳವಾರ ಹಿಂದೂಗಳ ಪೂಜೆಗೆ ಮತ್ತು ಶುಕ್ರವಾರ ಮುಸ್ಲಿಮರ ಪ್ರಾರ್ಥನೆಗೆ ಭಾರತೀಯ ಪುರಾತತ್ವ ಇಲಾಖೆಯು 2003ರಿಂದ ಅವಕಾಶ ಕಲ್ಪಿಸಿದೆ. ಆದರೆ, ಈ ಬಾರಿ ವಸಂತ ಪಂಚಮಿಯು ಶುಕ್ರವಾರ ಇದ್ದುದರಿಂದ ಆ ದಿನ ಪೂಜೆಗೆ ಅವಕಾಶ ಕೋರಿ ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು.</p>.<p>ಅಹಿತಕರ ಘಟನೆಯನ್ನು ತಡೆಯುವ ನಿಟ್ಟಿನಲ್ಲಿ ಹಿಂದೂ ಮತ್ತು ಮುಸ್ಲಿಮರ ಆಚರಣೆಗಳಿಗೆ ಸಮಯ ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್ ಗುರುವಾರ ಅದೇಶ ಹೊರಡಿಸಿತ್ತು. ಪೊಲೀಸರು ಮತ್ತು ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿದ್ದವು. 8000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p>.<p>ಭೋಜಶಾಲಾ ಸರಸ್ವತಿ ದೇವಿಯ ದೇಗುಲ ಎಂಬುದು ಹಿಂದೂಗಳ ನಂಬಿಕೆಯಾಗಿದೆ. ಮುಸ್ಲಿಂ ಸಮುದಾಯವು ಈ ಕಟ್ಟಡ ಕಮಲ್ ಮೌಲಾ ಮಸೀದಿ ಎಂದು ಪರಿಗಣಿಸಿದೆ. ಈ ವಿವಾದದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರ್</strong>: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ–ಕಮಲ್ ಮೌಲಾ ಮಸೀದಿಯಲ್ಲಿ ವಸಂತ ಪಂಚಮಿ ದಿನವಾದ ಶುಕ್ರವಾರ ಹಿಂದೂಗಳು ಸರಸ್ವತಿ ದೇವಿಗೆ ಪೂಜೆ ಸಲ್ಲಿಸಿದರೆ, ಮತ್ತೊಂದೆಡೆ ಮುಸ್ಲಿಮರು ನಮಾಜ್ ಮಾಡಿದರು.</p>.<p>ಈ ಮೂಲಕ ವಿವಾದಿತ ಸ್ಥಳದಲ್ಲಿ ಎರಡೂ ಧರ್ಮದವರು ಶಾಂತಿ–ಸುವ್ಯವಸ್ಥೆಯನ್ನು ಕಾಪಾಡಿದರು. ಅಹಿತಕರವಾದ ಮತ್ತು ಶಾಂತಿ ಭಂಗವಾಗುವ ಯಾವುದೇ ಘಟನೆ ನಡೆದಿಲ್ಲ.</p>.<p>ಬಿಗಿ ಭದ್ರತೆಯ ನಡುವೆ ಮುಂಜಾನೆ ಪೂಜೆ ಆರಂಭಿಸಿದ ಹಿಂದೂಗಳು ಸಂಜೆಯವರೆಗೆ ಪೂಜೆ ನಡೆಸಿದರು. ಮುಸ್ಲಿಮರು ಮಧ್ಯಾಹ್ನ 1ರಿಂದ 3 ಗಂಟೆವರೆಗಿನ ಅವಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಪ್ರತಿ ಮಂಗಳವಾರ ಹಿಂದೂಗಳ ಪೂಜೆಗೆ ಮತ್ತು ಶುಕ್ರವಾರ ಮುಸ್ಲಿಮರ ಪ್ರಾರ್ಥನೆಗೆ ಭಾರತೀಯ ಪುರಾತತ್ವ ಇಲಾಖೆಯು 2003ರಿಂದ ಅವಕಾಶ ಕಲ್ಪಿಸಿದೆ. ಆದರೆ, ಈ ಬಾರಿ ವಸಂತ ಪಂಚಮಿಯು ಶುಕ್ರವಾರ ಇದ್ದುದರಿಂದ ಆ ದಿನ ಪೂಜೆಗೆ ಅವಕಾಶ ಕೋರಿ ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು.</p>.<p>ಅಹಿತಕರ ಘಟನೆಯನ್ನು ತಡೆಯುವ ನಿಟ್ಟಿನಲ್ಲಿ ಹಿಂದೂ ಮತ್ತು ಮುಸ್ಲಿಮರ ಆಚರಣೆಗಳಿಗೆ ಸಮಯ ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್ ಗುರುವಾರ ಅದೇಶ ಹೊರಡಿಸಿತ್ತು. ಪೊಲೀಸರು ಮತ್ತು ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿದ್ದವು. 8000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p>.<p>ಭೋಜಶಾಲಾ ಸರಸ್ವತಿ ದೇವಿಯ ದೇಗುಲ ಎಂಬುದು ಹಿಂದೂಗಳ ನಂಬಿಕೆಯಾಗಿದೆ. ಮುಸ್ಲಿಂ ಸಮುದಾಯವು ಈ ಕಟ್ಟಡ ಕಮಲ್ ಮೌಲಾ ಮಸೀದಿ ಎಂದು ಪರಿಗಣಿಸಿದೆ. ಈ ವಿವಾದದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>