<p><strong>ನವದೆಹಲಿ:</strong> 1984ರ ಭೋಪಾಲ್ ಅನಿಲ ದುರಂತದ ವಿಷಕಾರಿ ತ್ಯಾಜ್ಯವನ್ನು ಸ್ಥಳಾಂತರಿಸುವ ಮತ್ತು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಪೀಥಂಪುರದಲ್ಲಿ ವಿಲೇವಾರಿ ಮಾಡುವ ಕುರಿತಾದ ಮಧ್ಯಪ್ರದೇಶ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.</p><p>ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ ತ್ಯಾಜ್ಯವನ್ನು ವಿಲೇವಾರಿ ಮಾಡುವ ಪ್ರಾಯೋಗಿಕ ಚಾಲನೆಗೆ ತಡೆ ನೀಡಲು ನಿರಾಕರಿಸಿದೆ. ಜತೆಗೆ, ಎನ್ಇಇಆರ್ಐ, ಎನ್ಜಿಆರ್ಐ ಮತ್ತು ಸಿಪಿಸಿಬಿಯ ತಜ್ಞರು ಈ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದನ್ನು ಮಧ್ಯಪ್ರದೇಶ ಹೈಕೋರ್ಟ್ ಮತ್ತು ತಜ್ಞರ ಸಮಿತಿಯು ಪರಿಗಣಿಸಿದೆ ಎಂದೂ ಹೇಳಿದೆ. </p><p>ಇದೀಗ ನಿಷ್ಕ್ರಿಯಗೊಂಡಿರುವ, ಭೂಪಾಲ್ನ ಯೂನಿಯನ್ ಕಾರ್ಬೈಡ್ ಕಂಪನಿಯ 337 ಟನ್ ತ್ಯಾಜ್ಯವನ್ನು ಪೀಥಂಪುರದಲ್ಲಿ ವಿಲೇವಾರಿ ಮಾಡಿದಲ್ಲಿ ಅದು ಸ್ಥಳೀಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅಲ್ಲದೆ ಪರಿಸರದ ಮೇಲೂ ದುಷ್ಪರಿಣಾಮ ಬೀರಲಿದೆ ಎಂದು ಪ್ರತಿಭಟನಕಾರರು ಈಚೆಗೆ ಪ್ರತಿಪಾದಿಸಿದ್ದರು.</p><p>ಕಾರ್ಬೈಡ್ ತ್ಯಾಜ್ಯವು ವಿಷಕಾರಿಯಲ್ಲ ಎಂದು ಮಧ್ಯಪ್ರದೇಶ ಸರ್ಕಾರ ಹೇಳುತ್ತಿದೆ. ಅದು ನಿಜವೇ ಆಗಿದ್ದಲ್ಲಿ, ತ್ಯಾಜ್ಯವನ್ನು ಭೋಪಾಲ್ನಲ್ಲಿಯೇ ವಿಲೇವಾರಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದರು.</p><p>‘ತ್ಯಾಜ್ಯವನ್ನು ರಾಜಸ್ಥಾನದ ಥಾರ್ ಜಿಲ್ಲೆಯ ಪೋಖ್ರಾನ್ಗೆ ಕೊಂಡೊಯ್ದು, ಅಲ್ಲಿಯೇ ಹೂಳಲಿ’ ಎಂದು ಅವರು ಆಗ್ರಹಿಸಿದ್ದರು.</p><p>ಭೋಪಾಲ್ನ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ 1984ರ ಡಿಸೆಂಬರ್ 2 ಮತ್ತು 3ರ ನಡುವಿನ ರಾತ್ರಿ ಸೋರಿಕೆಯಾದ ವಿಷಕಾರಿ ಮೀಥೈಲ್ ಐಸೊಸೈಯನೇಟ್ (ಎಂಐಸಿ) ಅನಿಲವು 5,479 ಜನರ ಸಾವಿಗೆ ಕಾರಣವಾಗಿತ್ತು. ಸಾವಿರಾರು ಮಂದಿ ದೀರ್ಘಾವಧಿಯ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದರು. ಇದನ್ನು ‘ಭೂಪಾಲ್ ಅನಿಲ ದುರಂತ’ ಎಂದೂ ಕರೆಯಲಾಗುತ್ತದೆ.</p>.ಭೋಪಾಲ್ ಅನಿಲ ದುರಂತ: ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.ಭೋಪಾಲ್ ಅನಿಲ ದುರಂತ| ಇಂದಿನ ಪೀಳಿಗೆಯನ್ನೂ ಕಾಡುತ್ತಿದೆ ವಿಷಾನಿಲ: ನಿವೃತ್ತ ವೈದ್ಯ.ಭೋಪಾಲ್ ಅನಿಲ ದುರಂತ: ಪರಿಹಾರ ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’.ಭೋಪಾಲ್ ದುರಂತ: ಸಂತ್ರಸ್ತರ ಕಾಡುತ್ತಿರುವ ಕಹಿನೆನಪು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 1984ರ ಭೋಪಾಲ್ ಅನಿಲ ದುರಂತದ ವಿಷಕಾರಿ ತ್ಯಾಜ್ಯವನ್ನು ಸ್ಥಳಾಂತರಿಸುವ ಮತ್ತು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಪೀಥಂಪುರದಲ್ಲಿ ವಿಲೇವಾರಿ ಮಾಡುವ ಕುರಿತಾದ ಮಧ್ಯಪ್ರದೇಶ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.</p><p>ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ ತ್ಯಾಜ್ಯವನ್ನು ವಿಲೇವಾರಿ ಮಾಡುವ ಪ್ರಾಯೋಗಿಕ ಚಾಲನೆಗೆ ತಡೆ ನೀಡಲು ನಿರಾಕರಿಸಿದೆ. ಜತೆಗೆ, ಎನ್ಇಇಆರ್ಐ, ಎನ್ಜಿಆರ್ಐ ಮತ್ತು ಸಿಪಿಸಿಬಿಯ ತಜ್ಞರು ಈ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದನ್ನು ಮಧ್ಯಪ್ರದೇಶ ಹೈಕೋರ್ಟ್ ಮತ್ತು ತಜ್ಞರ ಸಮಿತಿಯು ಪರಿಗಣಿಸಿದೆ ಎಂದೂ ಹೇಳಿದೆ. </p><p>ಇದೀಗ ನಿಷ್ಕ್ರಿಯಗೊಂಡಿರುವ, ಭೂಪಾಲ್ನ ಯೂನಿಯನ್ ಕಾರ್ಬೈಡ್ ಕಂಪನಿಯ 337 ಟನ್ ತ್ಯಾಜ್ಯವನ್ನು ಪೀಥಂಪುರದಲ್ಲಿ ವಿಲೇವಾರಿ ಮಾಡಿದಲ್ಲಿ ಅದು ಸ್ಥಳೀಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅಲ್ಲದೆ ಪರಿಸರದ ಮೇಲೂ ದುಷ್ಪರಿಣಾಮ ಬೀರಲಿದೆ ಎಂದು ಪ್ರತಿಭಟನಕಾರರು ಈಚೆಗೆ ಪ್ರತಿಪಾದಿಸಿದ್ದರು.</p><p>ಕಾರ್ಬೈಡ್ ತ್ಯಾಜ್ಯವು ವಿಷಕಾರಿಯಲ್ಲ ಎಂದು ಮಧ್ಯಪ್ರದೇಶ ಸರ್ಕಾರ ಹೇಳುತ್ತಿದೆ. ಅದು ನಿಜವೇ ಆಗಿದ್ದಲ್ಲಿ, ತ್ಯಾಜ್ಯವನ್ನು ಭೋಪಾಲ್ನಲ್ಲಿಯೇ ವಿಲೇವಾರಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದರು.</p><p>‘ತ್ಯಾಜ್ಯವನ್ನು ರಾಜಸ್ಥಾನದ ಥಾರ್ ಜಿಲ್ಲೆಯ ಪೋಖ್ರಾನ್ಗೆ ಕೊಂಡೊಯ್ದು, ಅಲ್ಲಿಯೇ ಹೂಳಲಿ’ ಎಂದು ಅವರು ಆಗ್ರಹಿಸಿದ್ದರು.</p><p>ಭೋಪಾಲ್ನ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ 1984ರ ಡಿಸೆಂಬರ್ 2 ಮತ್ತು 3ರ ನಡುವಿನ ರಾತ್ರಿ ಸೋರಿಕೆಯಾದ ವಿಷಕಾರಿ ಮೀಥೈಲ್ ಐಸೊಸೈಯನೇಟ್ (ಎಂಐಸಿ) ಅನಿಲವು 5,479 ಜನರ ಸಾವಿಗೆ ಕಾರಣವಾಗಿತ್ತು. ಸಾವಿರಾರು ಮಂದಿ ದೀರ್ಘಾವಧಿಯ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದರು. ಇದನ್ನು ‘ಭೂಪಾಲ್ ಅನಿಲ ದುರಂತ’ ಎಂದೂ ಕರೆಯಲಾಗುತ್ತದೆ.</p>.ಭೋಪಾಲ್ ಅನಿಲ ದುರಂತ: ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.ಭೋಪಾಲ್ ಅನಿಲ ದುರಂತ| ಇಂದಿನ ಪೀಳಿಗೆಯನ್ನೂ ಕಾಡುತ್ತಿದೆ ವಿಷಾನಿಲ: ನಿವೃತ್ತ ವೈದ್ಯ.ಭೋಪಾಲ್ ಅನಿಲ ದುರಂತ: ಪರಿಹಾರ ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’.ಭೋಪಾಲ್ ದುರಂತ: ಸಂತ್ರಸ್ತರ ಕಾಡುತ್ತಿರುವ ಕಹಿನೆನಪು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>