<p><strong>ಭುವನೇಶ್ವರ</strong>: ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭುವನೇಶ್ವರದ 22 ವರ್ಷದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನೊಬ್ಬನನ್ನು ಶನಿವಾರ ಬಂಧಿಸಿದ್ದಾರೆ.</p><p>ಇದೇ ಜನವರಿ 24ರಿಂದ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಖುರ್ದಾ ಜಿಲ್ಲೆಯ ತಪಾಂಗ್ನಲ್ಲಿರುವ ಪಾಳುಬಿದ್ದ ಕಲ್ಲು ಗಣಿಯೊಂದರಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಆರೋಪಿಯನ್ನು ಪೊಲೀಸರು ದೇಬಾಶಿಶ್ ಬಿಸೋಯಿ (26) ಎಂದು ಗುರುತಿಸಿದ್ದು, ಭುವನೇಶ್ವರದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದನು.</p>.ಕೇರಳ | ಮೆದುಳು ತಿನ್ನುವ ಅಮೀಬಾ ಸೋಂಕಿಗೆ ವ್ಯಕ್ತಿ ಸಾವು .IPS ಅಧಿಕಾರಿ ಅಂಜನಾ ವಿರುದ್ಧದ ಟ್ವೀಟ್ ಅಳಿಸಿ ಹಾಕಿ, ಕ್ಷಮೆಯಾಚಿಸಿದ MLC ಮಿಟ್ಕರಿ. <p>ನಿರುಪಮಾ ಪರಿದಾ ಭುವನೇಶ್ವರದ ಭರತ್ಪುರ ಪ್ರದೇಶದ ಉದ್ಯಮಿಯೊಬ್ಬರ ಮನೆಯಲ್ಲಿ ಕೇರ್ಟೇಕರ್ ಆಗಿ ಕೆಲಸ ಮಾಡುತ್ತಿದ್ದರು. ಜನವರಿ 27ರಂದು ಪೊಲೀಸ್ ಠಾಣೆಯಲ್ಲಿ ಈಕೆ ನಾಪತ್ತೆಯಾಗಿದ್ದಾರೆಂದು ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಯುವತಿ ಜತೆ ಪ್ರೀತಿಯಲ್ಲಿದ್ದ ದೇಬಾಶಿಶ್, ಆಕೆ ತನಗೆ ಮೋಸ ಮಾಡುತ್ತಿದ್ದಾಳೆ ಎಂದು ಅನುಮಾನಿಸುತ್ತಿದ್ದನು. ಇದೇ ಕಾರಣದಿಂದಾಗಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಜನವರಿ 24ರಂದು ಕೊಲೆ ಮಾಡಿ, ಎಸೆದು ಬಂದಿದ್ದನು ಎಂದು ತಿಳಿದು ಬಂದಿತ್ತು.</p>.Lunar Eclipse 2025: ಚಂದ್ರಗ್ರಹಣದ ದಿನ ಈ ತಪ್ಪುಗಳನ್ನು ಮಾಡಬೇಡಿ.ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕೃತ ನಿವಾಸದಲ್ಲಿ ನಾಗರಹಾವಿನ ಮರಿ!. <p>ಆರಂಭದಲ್ಲಿ ಆಕೆಯ ಮೃತದೇಹದ ಹುಡುಕಾಟವು ಸವಾಲಿನ ಕೆಲಸವಾಗಿತ್ತು. ಯಾವುದೇ ಸುಳಿವು ಸಿಗದ ಕಾರಣ ಪ್ರಕರಣ ಭೇದಿಸುವುದು ಕಷ್ಡಕರವಾಗಿತ್ತು ಎಂದು ಭುವನೇಶ್ವರ ಡಿಸಿಪಿ ಜಗಮೋಹನ್ ಮೀನಾ ಹೇಳಿದ್ದಾರೆ.</p><p>ಡಿಜಿಟಲ್ ಪುರಾವೆಗಳ ಸಂಪೂರ್ಣ ತನಿಖೆ ಮತ್ತು ವಿಶ್ಲೇಷಣೆಯ ನಂತರ ದೇಬಾಶಿಶ್ ಬಂಧಿಸಲಾಯಿತು. ಆಕೆಯ ಅಸ್ಥಿಪಂಜರವನ್ನು ಹೊರತೆಗೆಯಲಾಗಿದೆ ಎಂದು ಜಗಮೋಹನ್ ತಿಳಿಸಿದ್ದಾರೆ.</p>.ಸೇಡಿಗಾಗಿ ಬಾಲಕರಿಂದ ದಾಳಿ: ಎದೆ ಹೊಕ್ಕ ಚಾಕುವಿನೊಂದಿಗೇ ಠಾಣೆ ತಲುಪಿದ ವಿದ್ಯಾರ್ಥಿ.ಧರ್ಮಸ್ಥಳ ಪ್ರಕರಣ: ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸೆಂಥಿಲ್.ಓಣಂ ಸಂಭ್ರಮ: ಸಾಂಪ್ರದಾಯಿಕ ಸೀರೆಯಲ್ಲಿ ನಟಿ ಮೌನಿ ರಾಯ್.ಕುಡಿದು ಜಗಳವಾಡುತ್ತಿದ್ದ ಗಂಡನನ್ನು ಕೊಲೆ ಮಾಡಿ ಮನೆಯಲ್ಲಿಯೇ ಹೂತು ಹಾಕಿದಳು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭುವನೇಶ್ವರದ 22 ವರ್ಷದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನೊಬ್ಬನನ್ನು ಶನಿವಾರ ಬಂಧಿಸಿದ್ದಾರೆ.</p><p>ಇದೇ ಜನವರಿ 24ರಿಂದ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಖುರ್ದಾ ಜಿಲ್ಲೆಯ ತಪಾಂಗ್ನಲ್ಲಿರುವ ಪಾಳುಬಿದ್ದ ಕಲ್ಲು ಗಣಿಯೊಂದರಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಆರೋಪಿಯನ್ನು ಪೊಲೀಸರು ದೇಬಾಶಿಶ್ ಬಿಸೋಯಿ (26) ಎಂದು ಗುರುತಿಸಿದ್ದು, ಭುವನೇಶ್ವರದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದನು.</p>.ಕೇರಳ | ಮೆದುಳು ತಿನ್ನುವ ಅಮೀಬಾ ಸೋಂಕಿಗೆ ವ್ಯಕ್ತಿ ಸಾವು .IPS ಅಧಿಕಾರಿ ಅಂಜನಾ ವಿರುದ್ಧದ ಟ್ವೀಟ್ ಅಳಿಸಿ ಹಾಕಿ, ಕ್ಷಮೆಯಾಚಿಸಿದ MLC ಮಿಟ್ಕರಿ. <p>ನಿರುಪಮಾ ಪರಿದಾ ಭುವನೇಶ್ವರದ ಭರತ್ಪುರ ಪ್ರದೇಶದ ಉದ್ಯಮಿಯೊಬ್ಬರ ಮನೆಯಲ್ಲಿ ಕೇರ್ಟೇಕರ್ ಆಗಿ ಕೆಲಸ ಮಾಡುತ್ತಿದ್ದರು. ಜನವರಿ 27ರಂದು ಪೊಲೀಸ್ ಠಾಣೆಯಲ್ಲಿ ಈಕೆ ನಾಪತ್ತೆಯಾಗಿದ್ದಾರೆಂದು ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಯುವತಿ ಜತೆ ಪ್ರೀತಿಯಲ್ಲಿದ್ದ ದೇಬಾಶಿಶ್, ಆಕೆ ತನಗೆ ಮೋಸ ಮಾಡುತ್ತಿದ್ದಾಳೆ ಎಂದು ಅನುಮಾನಿಸುತ್ತಿದ್ದನು. ಇದೇ ಕಾರಣದಿಂದಾಗಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಜನವರಿ 24ರಂದು ಕೊಲೆ ಮಾಡಿ, ಎಸೆದು ಬಂದಿದ್ದನು ಎಂದು ತಿಳಿದು ಬಂದಿತ್ತು.</p>.Lunar Eclipse 2025: ಚಂದ್ರಗ್ರಹಣದ ದಿನ ಈ ತಪ್ಪುಗಳನ್ನು ಮಾಡಬೇಡಿ.ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕೃತ ನಿವಾಸದಲ್ಲಿ ನಾಗರಹಾವಿನ ಮರಿ!. <p>ಆರಂಭದಲ್ಲಿ ಆಕೆಯ ಮೃತದೇಹದ ಹುಡುಕಾಟವು ಸವಾಲಿನ ಕೆಲಸವಾಗಿತ್ತು. ಯಾವುದೇ ಸುಳಿವು ಸಿಗದ ಕಾರಣ ಪ್ರಕರಣ ಭೇದಿಸುವುದು ಕಷ್ಡಕರವಾಗಿತ್ತು ಎಂದು ಭುವನೇಶ್ವರ ಡಿಸಿಪಿ ಜಗಮೋಹನ್ ಮೀನಾ ಹೇಳಿದ್ದಾರೆ.</p><p>ಡಿಜಿಟಲ್ ಪುರಾವೆಗಳ ಸಂಪೂರ್ಣ ತನಿಖೆ ಮತ್ತು ವಿಶ್ಲೇಷಣೆಯ ನಂತರ ದೇಬಾಶಿಶ್ ಬಂಧಿಸಲಾಯಿತು. ಆಕೆಯ ಅಸ್ಥಿಪಂಜರವನ್ನು ಹೊರತೆಗೆಯಲಾಗಿದೆ ಎಂದು ಜಗಮೋಹನ್ ತಿಳಿಸಿದ್ದಾರೆ.</p>.ಸೇಡಿಗಾಗಿ ಬಾಲಕರಿಂದ ದಾಳಿ: ಎದೆ ಹೊಕ್ಕ ಚಾಕುವಿನೊಂದಿಗೇ ಠಾಣೆ ತಲುಪಿದ ವಿದ್ಯಾರ್ಥಿ.ಧರ್ಮಸ್ಥಳ ಪ್ರಕರಣ: ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸೆಂಥಿಲ್.ಓಣಂ ಸಂಭ್ರಮ: ಸಾಂಪ್ರದಾಯಿಕ ಸೀರೆಯಲ್ಲಿ ನಟಿ ಮೌನಿ ರಾಯ್.ಕುಡಿದು ಜಗಳವಾಡುತ್ತಿದ್ದ ಗಂಡನನ್ನು ಕೊಲೆ ಮಾಡಿ ಮನೆಯಲ್ಲಿಯೇ ಹೂತು ಹಾಕಿದಳು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>