<p><strong>ಲಖನೌ</strong>: ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಭಾನುವಾರ ವರದಿಯಾಗಿದೆ.</p><p>ಜೌನ್ಪುರದಲ್ಲಿರುವ ಪ್ರಸಾದ್ ಎಂಜಿನಿಯರಿಂಗ್ ಕಾಲೇಜ್ ಎದುರು ಭಾನುವಾರ ನಸುಕಿನ ಜಾವ 3ರ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಾರಾಣಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳು ಬಿಹಾರದ ಸೀತಾಮರ್ಹಿ ಜಿಲ್ಲೆಯವರು ಎಂದು ವರದಿಯಾಗಿದೆ.</p><p>ಗೌರಾಬಾದ್ಷಹರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶವಗಳನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಟ್ರಕ್ ಅನ್ನು ವಶಕ್ಕೆ ಪಡೆದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಪಘಾತಕ್ಕೀಡಾದ ಕಾರಿನಲ್ಲಿದ್ದವರು ಸೀತಾಮರ್ಹಿಯಿಂದ ಪ್ರಯಾಗರಾಜ್ನತ್ತ ಪ್ರಯಾಣ ಬೆಳೆಸಿದ್ದರು. ಅಜಮ್ಗಢದಿಂದ ಬರುತ್ತಿದ್ದಾಗ, ಪ್ರಸಾದ್ ಎಂಜಿನಿಯರಿಂಗ್ ಕಾಲೇಜ್ ಎದುರು ಅಪಘಾತ ಸಂಭವಿಸಿದೆ. ಮೃತರಲ್ಲಿ ನಾಲ್ಕು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಭಾನುವಾರ ವರದಿಯಾಗಿದೆ.</p><p>ಜೌನ್ಪುರದಲ್ಲಿರುವ ಪ್ರಸಾದ್ ಎಂಜಿನಿಯರಿಂಗ್ ಕಾಲೇಜ್ ಎದುರು ಭಾನುವಾರ ನಸುಕಿನ ಜಾವ 3ರ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಾರಾಣಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳು ಬಿಹಾರದ ಸೀತಾಮರ್ಹಿ ಜಿಲ್ಲೆಯವರು ಎಂದು ವರದಿಯಾಗಿದೆ.</p><p>ಗೌರಾಬಾದ್ಷಹರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶವಗಳನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಟ್ರಕ್ ಅನ್ನು ವಶಕ್ಕೆ ಪಡೆದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಪಘಾತಕ್ಕೀಡಾದ ಕಾರಿನಲ್ಲಿದ್ದವರು ಸೀತಾಮರ್ಹಿಯಿಂದ ಪ್ರಯಾಗರಾಜ್ನತ್ತ ಪ್ರಯಾಣ ಬೆಳೆಸಿದ್ದರು. ಅಜಮ್ಗಢದಿಂದ ಬರುತ್ತಿದ್ದಾಗ, ಪ್ರಸಾದ್ ಎಂಜಿನಿಯರಿಂಗ್ ಕಾಲೇಜ್ ಎದುರು ಅಪಘಾತ ಸಂಭವಿಸಿದೆ. ಮೃತರಲ್ಲಿ ನಾಲ್ಕು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>