<p><strong>ಮುಂಬೈ</strong>: ಭೋಜಪುರಿ ನಟ ಪವನ್ ಸಿಂಗ್ ಅವರಿಗೆ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಅಪರಿಚಿತರಿಂದ ಕೊಲೆ ಬೆದರಿಕೆ ಎದುರಾಗಿದೆ.</p><p>ಈ ಸಂಬಂಧ ಸಿಂಗ್ ಅವರ ಮ್ಯಾನೇಜರ್ ಮುಂಬೈ ಪೊಲೀಸ್ ಠಾಣೆಗೆ ಇಂದು (ಸೋಮವಾರ) ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಯು ಲಾರೆನ್ಸ್ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡು ಶನಿವಾರದಿಂದ ಕರೆ ಹಾಗೂ ಮೆಸೇಜ್ ಮಾಡಿ ಬೆದರಿಕೆ ಹಾಕುತ್ತಿದ್ದಾನೆ. ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.</p><p>ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ದೀಕ್ಷಿತ್ ಗೆದಂ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p><p><strong>ಬೆದರಿಕೆಗೆ ಕಾರಣವೇನು?<br></strong>ಬಾಲಿವುಡ್ ನಟ ಸಲ್ಮಾನ್ ಖಾನ್ ಅವರೊಂದಿಗೆ ಪವನ್ ಸಿಂಗ್ ವೇದಿಕೆ ಅಥವಾ ತೆರೆ ಹಂಚಿಕೊಳ್ಳಬಾರದು. ತಪ್ಪಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಎಚ್ಚರಿಕೆ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p><p>ಪವನ್ ಸಿಂಗ್ ಅವರ ತಂಡದ ಮತ್ತೊಬ್ಬರಿಗೂ ಇದೇ ರೀತಿಯ ಕರೆಗಳು ಬಂದಿವೆ. ಹಣಕ್ಕೆ ಬೇಡಿಕೆ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಸಲ್ಮಾನ್ ಹತ್ಯೆಗೆ ಬಿಷ್ಣೋಯಿ ಮುಂದಾಗಿರುವುದೇಕೆ? ಪರಿಹಾರ ಹೇಳಿದ ರಾಕೇಶ್ ಟಿಕಾಯತ್.ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ ₹2 ಕೋಟಿಗೆ ಬೇಡಿಕೆ ಇಟ್ಟಿದ್ದ ವ್ಯಕ್ತಿ ಸೆರೆ.<p>ಪವನ್ ಅವರು, ಸಲ್ಮಾನ್ ಖಾನ್ ನಡೆಸಿಕೊಡುವ ಹಿಂದಿ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದಾರೆ.</p><p>ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆ ಆರೊಪಿ ಲಾರೆನ್ಸ್ ಬಿಷ್ಟೋಯಿ, ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಗುಜರಾತ್ನ ಸಾಬರಮತಿ ಜೈಲಿನಲ್ಲಿದ್ದಾನೆ.</p><p><strong>ಸಲ್ಮಾನ್ ವಿರುದ್ಧ ಹಗೆ ಏಕೆ?<br></strong>1998ರಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರದ ಚಿತ್ರೀಕರಣದ ಸಂದರ್ಭ ರಾಜಸ್ಥಾನದ ಹಳ್ಳಿಯೊಂದರಲ್ಲಿ ಕೃಷ್ಣಮೃಗ ಬೇಟೆಯಾಡಿದ ಆರೋಪ ಸಲ್ಮಾನ್ ಖಾನ್ ಮೇಲಿದೆ.</p><p>ಬಿಷ್ಣೋಯಿ ಸಮುದಾಯವು ಕೃಷ್ಣಮೃಗಗಳನ್ನು ಅತ್ಯಂತ ಪವಿತ್ರವೆಂದು ಎಂದು ಭಾವಿಸುತ್ತದೆ. ಇದೇ ಕಾರಣಕ್ಕೆ ಸಲ್ಮಾನ್ ಅವರನ್ನು ಬಿಷ್ಣೋಯಿ ಹಗೆ ಸಾಧಿಸುತ್ತಿದೆ ಎನ್ನಲಾಗಿದೆ.</p><p>2024ರ ಏಪ್ರಿಲ್ನಲ್ಲಿ ಸಲ್ಮಾನ್ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿತ್ತು.</p><p>ಸಲ್ಮಾನ್ ಜೊತೆ ಉತ್ತಮ ಒಡನಾಟ ಹೊಂದಿದ್ದ ಮಹಾರಾಷ್ಟ್ರದ ಮಾಜಿ ಸಚಿವ, ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಅದೇ ವರ್ಷ ಅಕ್ಟೋಬರ್ನಲ್ಲಿ ಹತ್ಯೆ ಮಾಡಲಾಗಿತ್ತು. ಲಾರೆನ್ಸ್ ಬಿಷ್ಣೋಯಿ ಆದೇಶದಂತೆ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭೋಜಪುರಿ ನಟ ಪವನ್ ಸಿಂಗ್ ಅವರಿಗೆ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಅಪರಿಚಿತರಿಂದ ಕೊಲೆ ಬೆದರಿಕೆ ಎದುರಾಗಿದೆ.</p><p>ಈ ಸಂಬಂಧ ಸಿಂಗ್ ಅವರ ಮ್ಯಾನೇಜರ್ ಮುಂಬೈ ಪೊಲೀಸ್ ಠಾಣೆಗೆ ಇಂದು (ಸೋಮವಾರ) ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಯು ಲಾರೆನ್ಸ್ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡು ಶನಿವಾರದಿಂದ ಕರೆ ಹಾಗೂ ಮೆಸೇಜ್ ಮಾಡಿ ಬೆದರಿಕೆ ಹಾಕುತ್ತಿದ್ದಾನೆ. ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.</p><p>ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ದೀಕ್ಷಿತ್ ಗೆದಂ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p><p><strong>ಬೆದರಿಕೆಗೆ ಕಾರಣವೇನು?<br></strong>ಬಾಲಿವುಡ್ ನಟ ಸಲ್ಮಾನ್ ಖಾನ್ ಅವರೊಂದಿಗೆ ಪವನ್ ಸಿಂಗ್ ವೇದಿಕೆ ಅಥವಾ ತೆರೆ ಹಂಚಿಕೊಳ್ಳಬಾರದು. ತಪ್ಪಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಎಚ್ಚರಿಕೆ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p><p>ಪವನ್ ಸಿಂಗ್ ಅವರ ತಂಡದ ಮತ್ತೊಬ್ಬರಿಗೂ ಇದೇ ರೀತಿಯ ಕರೆಗಳು ಬಂದಿವೆ. ಹಣಕ್ಕೆ ಬೇಡಿಕೆ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಸಲ್ಮಾನ್ ಹತ್ಯೆಗೆ ಬಿಷ್ಣೋಯಿ ಮುಂದಾಗಿರುವುದೇಕೆ? ಪರಿಹಾರ ಹೇಳಿದ ರಾಕೇಶ್ ಟಿಕಾಯತ್.ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ ₹2 ಕೋಟಿಗೆ ಬೇಡಿಕೆ ಇಟ್ಟಿದ್ದ ವ್ಯಕ್ತಿ ಸೆರೆ.<p>ಪವನ್ ಅವರು, ಸಲ್ಮಾನ್ ಖಾನ್ ನಡೆಸಿಕೊಡುವ ಹಿಂದಿ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದಾರೆ.</p><p>ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆ ಆರೊಪಿ ಲಾರೆನ್ಸ್ ಬಿಷ್ಟೋಯಿ, ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಗುಜರಾತ್ನ ಸಾಬರಮತಿ ಜೈಲಿನಲ್ಲಿದ್ದಾನೆ.</p><p><strong>ಸಲ್ಮಾನ್ ವಿರುದ್ಧ ಹಗೆ ಏಕೆ?<br></strong>1998ರಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರದ ಚಿತ್ರೀಕರಣದ ಸಂದರ್ಭ ರಾಜಸ್ಥಾನದ ಹಳ್ಳಿಯೊಂದರಲ್ಲಿ ಕೃಷ್ಣಮೃಗ ಬೇಟೆಯಾಡಿದ ಆರೋಪ ಸಲ್ಮಾನ್ ಖಾನ್ ಮೇಲಿದೆ.</p><p>ಬಿಷ್ಣೋಯಿ ಸಮುದಾಯವು ಕೃಷ್ಣಮೃಗಗಳನ್ನು ಅತ್ಯಂತ ಪವಿತ್ರವೆಂದು ಎಂದು ಭಾವಿಸುತ್ತದೆ. ಇದೇ ಕಾರಣಕ್ಕೆ ಸಲ್ಮಾನ್ ಅವರನ್ನು ಬಿಷ್ಣೋಯಿ ಹಗೆ ಸಾಧಿಸುತ್ತಿದೆ ಎನ್ನಲಾಗಿದೆ.</p><p>2024ರ ಏಪ್ರಿಲ್ನಲ್ಲಿ ಸಲ್ಮಾನ್ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿತ್ತು.</p><p>ಸಲ್ಮಾನ್ ಜೊತೆ ಉತ್ತಮ ಒಡನಾಟ ಹೊಂದಿದ್ದ ಮಹಾರಾಷ್ಟ್ರದ ಮಾಜಿ ಸಚಿವ, ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಅದೇ ವರ್ಷ ಅಕ್ಟೋಬರ್ನಲ್ಲಿ ಹತ್ಯೆ ಮಾಡಲಾಗಿತ್ತು. ಲಾರೆನ್ಸ್ ಬಿಷ್ಣೋಯಿ ಆದೇಶದಂತೆ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>