ನವದೆಹಲಿ: ಬಿಹಾರ ಮತ್ತು ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರವಾಗಿ ಮಳೆಯು ಜಾಸ್ತಿಯಾಗುತ್ತಲೇ ಇರುವುದರಿಂದಾಗಿ ಪರಿಸ್ಥಿತಿಯನ್ನು ನಿಭಾಯಿಸಲು ಎರಡೂ ಕಡೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ.
ಬಿಹಾರದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಎಸ್ಡಿಆರ್ಎಫ್ ಸೇರಿದಂತೆ 30 ಕ್ಕೂ ಹೆಚ್ಚು ತಂಡಗಳನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ವಿಭಾಗ ತಿಳಿಸಿದೆ.
#BiharFloods : 33 teams including NDRF, SDRF have been deployed across various districts of state to tackle flood situation. A total of 16 districts have been affected by floods. Death toll has mounted to 19 & as many as 12,202 people have been shifted to relief camps: Bihar Govt pic.twitter.com/0pbrNY8FrZ
— ANI (@ANI) August 6, 2020
ಇಲಾಖೆ ಬುಧವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹದಿಂದಾಗಿ 19 ಜನರು ಪ್ರಾಣ ಕಳೆದುಕೊಂಡಿದ್ದು, 66,60,655 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬುಧವಾರದವರೆಗೆ ಒಟ್ಟು 12,202 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಹಾರಾಷ್ಟ್ರದಲ್ಲೂ ಎನ್ಡಿಆರ್ಎಫ್ 16 ತಂಡ ನಿಯೋಜನೆ
ಇನ್ನೊಂದೆಡೆ ಮಹಾರಾಷ್ಟ್ರದಲ್ಲೂ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮವಾಗಿ 16 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ ಎಂದು ಎನ್ಡಿಆರ್ಎಫ್ ತಿಳಿಸಿದೆ.
Mumbai's Nair Hospital flooded as the city received heavy rainfall yesterday. As per IMD, Colaba received 331.8mm & Santacruz received 162.3mm rainfall in last 24 hours.
— ANI (@ANI) August 6, 2020
Mumbai city & suburbs very likely to receive few spells of moderate to heavy rainfall during next 3- 4 hours. pic.twitter.com/Rzd0ufnJMV
ಇವುಗಳಲ್ಲಿ ಐದು ಮುಂಬೈನಲ್ಲಿ, ನಾಲ್ಕು ಕೊಲ್ಹಾಪುರ, ಎರಡು ಸಾಂಗ್ಲಿ ಮತ್ತು ಸತಾರ, ಥಾಣೆ, ಪಲ್ಘಾರ್, ನಾಗಪುರ ಮತ್ತು ರಾಯ್ಗಢದಲ್ಲಿ ತಲಾ ಒಂದೊಂದು ತಂಡವನ್ನು ನಿಯೋಜಿಸಲಾಗಿದೆ. ಈಮಧ್ಯೆ, ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಜಲಾವೃತ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸುತ್ತಿವೆ.
Due to the evolving situation of incessant rains, 16 teams have been pre-positioned in #Maharashtra.
— ANI (@ANI) August 6, 2020
5 teams in #Mumbai, 4 teams in Kolhapur, 2 teams in Sangli, and 1 team each in Satara, Thane, Palghar, Nagpur, Raigad: National Disaster Response Force (NDRF)
ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ನೀಡಿರುವ ಮಾಹಿತಿ ಪ್ರಕಾರ, ಥಾಣೆಯಲ್ಲಿ 'ಸಾಮಾನ್ಯವಾಗಿ ಭಾರಿ ಮಳೆಯೊಂದಿಗೆ ಮೋಡ ಕವಿದ ವಾತಾವರಣ' ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಮುಂಬೈನಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ.
ಭಾರಿ ಮಳೆಯಿಂದಾಗಿ ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.