<p><strong>ಪಟ್ನಾ:</strong> ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಹಾರದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರ ಸಹಾಯಧಾನವನ್ನು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಘೋಷಣೆ ಮಾಡಿದ್ದಾರೆ.</p>.ಬಿಹಾರ ಚುನಾವಣೆ: ಎನ್ಡಿಎ, ಇಂಡಿಯಾ ಮೈತ್ರಿಕೂಟಕ್ಕೆ ಸೀಟು ಹಂಚಿಕೆ ಸವಾಲು.<p>ಎಕ್ಸ್ ಪೋಸ್ಟ್ನಲ್ಲಿ ಮಾಡಿರುವ ಅವರು, ಅಂಗನವಾಡಿ ಕಾರ್ತಕರ್ತೆಯರು ಇನ್ನು ಮುಂದೆ ₹7 ಸಾವಿರಕ್ಕೆ ಬದಲಾಗಿ ₹ 9 ಸಾವಿರ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.</p><p>ಅಂಗನವಾಡಿ ಸಹಾಯಕಿಯರ ಸಹಾಯಧನವನ್ನು ₹ 4 ಸಾವಿರದಿಂದ ₹ 4,500ಕ್ಕೆ ಏರಿಕೆ ಮಾಡಲಾಗಿದೆ. ಈ ಬಗ್ಗೆ ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.</p>.ಬಿಹಾರ | ಉದ್ಯಮ ಆರಂಭಿಸುವ ಪ್ರತಿ ಮಹಿಳೆಗೆ ಆರ್ಥಿಕ ನೆರವು: ಸಿಎಂ ನಿತೀಶ್ ಕುಮಾರ್.<p>ಮಕ್ಕಳು ಮತ್ತು ಗರ್ಭಿಣಿಯರ ಪೋಷಣೆ ಮತ್ತು ಒಟ್ಟಾರೆ ಯೋಗಕ್ಷೇಮ ಸುಧಾರಣೆಯಲ್ಲಿ ಅಂಗನವಾಡಿ ಕಾರ್ಯಕರ್ತರ ಹಾಗೂ ಸೇವಕಿಯಯರು ಬಹುಮುಖ್ಯ ಪಾತ್ರ ವಹಿಸುತ್ತಾರೆ ಎಂದು ನಿತೀಶ್ ಹೇಳಿದ್ದಾರೆ.</p><p>‘2005ರಲ್ಲಿ ನಾವು ಅಧಿಕಾರಕ್ಕೆ ಬಂದ ಬಳಿಕ, ಮಕ್ಕಳು ಹಾಗೂ ಗರ್ಭಿಣಿಯರ ಕಲ್ಯಾಣಕ್ಕೆ ನಾವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಈ ಯೋಜನೆಗಳನ್ನು ಜಾರಿಗೆ ತರುವಲ್ಲಿ ಅಂಗನವಾಡಿಗಳ ಪಾತ್ರವನ್ನು ಪರಿಗಣಿಸಿ, ಸಹಾಯಧನ ಹೆಚ್ಚಿಸುವ ಕ್ರಮ ತೆಗೆದುಕೊಂಡಿದ್ದೇವೆ’ ಎಂದು ಹೇಳಿದ್ದಾರೆ.</p>.JP ಸೇನಾನಿಗಳ ಪಿಂಚಣಿ ದ್ವಿಗುಣ: ಹಲವು ಪ್ರಸ್ತಾವನೆಗಳಿಗೆ ಬಿಹಾರ ಸರ್ಕಾರ ಅನುಮೋದನೆ.<p>ಕಳೆದ ಕೆಲವು ತಿಂಗಳಲ್ಲಿ ಬಿಹಾರದಲ್ಲಿ, 125 ಯುನಿಟ್ ಉಚಿತ ವಿದ್ಯುತ್, ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಶುಲ್ಕ ಮನ್ನಾ ಸೇರಿದಂದತೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸಲಾಗಿದೆ.</p><p>ಮೂಲಗಳ ಪ್ರಕಾರ 1.20 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಧನ ಏರಿಕೆಯಿಂದ ಲಾಭವಾಗಲಿದೆ.</p> .ಬಿಹಾರ: ಹಲವು ಯೋಜನೆ ಘೋಷಿಸಿದ ಸಿ.ಎಂ ನಿತೀಶ್ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಹಾರದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರ ಸಹಾಯಧಾನವನ್ನು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಘೋಷಣೆ ಮಾಡಿದ್ದಾರೆ.</p>.ಬಿಹಾರ ಚುನಾವಣೆ: ಎನ್ಡಿಎ, ಇಂಡಿಯಾ ಮೈತ್ರಿಕೂಟಕ್ಕೆ ಸೀಟು ಹಂಚಿಕೆ ಸವಾಲು.<p>ಎಕ್ಸ್ ಪೋಸ್ಟ್ನಲ್ಲಿ ಮಾಡಿರುವ ಅವರು, ಅಂಗನವಾಡಿ ಕಾರ್ತಕರ್ತೆಯರು ಇನ್ನು ಮುಂದೆ ₹7 ಸಾವಿರಕ್ಕೆ ಬದಲಾಗಿ ₹ 9 ಸಾವಿರ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.</p><p>ಅಂಗನವಾಡಿ ಸಹಾಯಕಿಯರ ಸಹಾಯಧನವನ್ನು ₹ 4 ಸಾವಿರದಿಂದ ₹ 4,500ಕ್ಕೆ ಏರಿಕೆ ಮಾಡಲಾಗಿದೆ. ಈ ಬಗ್ಗೆ ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.</p>.ಬಿಹಾರ | ಉದ್ಯಮ ಆರಂಭಿಸುವ ಪ್ರತಿ ಮಹಿಳೆಗೆ ಆರ್ಥಿಕ ನೆರವು: ಸಿಎಂ ನಿತೀಶ್ ಕುಮಾರ್.<p>ಮಕ್ಕಳು ಮತ್ತು ಗರ್ಭಿಣಿಯರ ಪೋಷಣೆ ಮತ್ತು ಒಟ್ಟಾರೆ ಯೋಗಕ್ಷೇಮ ಸುಧಾರಣೆಯಲ್ಲಿ ಅಂಗನವಾಡಿ ಕಾರ್ಯಕರ್ತರ ಹಾಗೂ ಸೇವಕಿಯಯರು ಬಹುಮುಖ್ಯ ಪಾತ್ರ ವಹಿಸುತ್ತಾರೆ ಎಂದು ನಿತೀಶ್ ಹೇಳಿದ್ದಾರೆ.</p><p>‘2005ರಲ್ಲಿ ನಾವು ಅಧಿಕಾರಕ್ಕೆ ಬಂದ ಬಳಿಕ, ಮಕ್ಕಳು ಹಾಗೂ ಗರ್ಭಿಣಿಯರ ಕಲ್ಯಾಣಕ್ಕೆ ನಾವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಈ ಯೋಜನೆಗಳನ್ನು ಜಾರಿಗೆ ತರುವಲ್ಲಿ ಅಂಗನವಾಡಿಗಳ ಪಾತ್ರವನ್ನು ಪರಿಗಣಿಸಿ, ಸಹಾಯಧನ ಹೆಚ್ಚಿಸುವ ಕ್ರಮ ತೆಗೆದುಕೊಂಡಿದ್ದೇವೆ’ ಎಂದು ಹೇಳಿದ್ದಾರೆ.</p>.JP ಸೇನಾನಿಗಳ ಪಿಂಚಣಿ ದ್ವಿಗುಣ: ಹಲವು ಪ್ರಸ್ತಾವನೆಗಳಿಗೆ ಬಿಹಾರ ಸರ್ಕಾರ ಅನುಮೋದನೆ.<p>ಕಳೆದ ಕೆಲವು ತಿಂಗಳಲ್ಲಿ ಬಿಹಾರದಲ್ಲಿ, 125 ಯುನಿಟ್ ಉಚಿತ ವಿದ್ಯುತ್, ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಶುಲ್ಕ ಮನ್ನಾ ಸೇರಿದಂದತೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸಲಾಗಿದೆ.</p><p>ಮೂಲಗಳ ಪ್ರಕಾರ 1.20 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಧನ ಏರಿಕೆಯಿಂದ ಲಾಭವಾಗಲಿದೆ.</p> .ಬಿಹಾರ: ಹಲವು ಯೋಜನೆ ಘೋಷಿಸಿದ ಸಿ.ಎಂ ನಿತೀಶ್ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>