<p><strong>ಲಖನೌ</strong>: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ರಾಷ್ಟ್ರೀಯ ಜನತಾ ದಳಕ್ಕೆ (ಆರ್ಜೆಡಿ) ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೋಮವಾರ ಘೋಷಿಸಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಹಾರ ಚುನಾವಣೆಯಲ್ಲಿ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಮಾಡಿದ ಹಗರಣಗಳು ಬಹಿರಂಗಗೊಳ್ಳಲಿದೆ. ಜನರಿಗೆ ಸತ್ಯ ತಿಳಿಯಲಿದೆ ಎಂದು ಹೇಳಿದ್ದಾರೆ.</p><p>ನಿತೀಶ್ ಕುಮಾರ್ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡುವ ಉದ್ದೇಶ ಬಿಜೆಪಿಗೆ ಇಲ್ಲ. ನಾವು ಒಮ್ಮೆ ನಿತೀಶ್ ಕುಮಾರ್ ಅವರನ್ನು ಪ್ರಧಾನಿಯಾನ್ನಾಗಿ ಮಾಡಲು ಬಯಸಿದ್ದೆವು. ಆದರೆ ಮುಖ್ಯಮಂತ್ರಿ ಸ್ಥಾನದಿಂದ ನಿವೃತ್ತಿ ಹೊಂದುವಂತೆ ಬಿಜೆಪಿಯವರು ಮಾಡುತ್ತಾರೆ ಎಂದು ಯಾದವ್ ತಿಳಿಸಿದ್ದಾರೆ.</p>.ಒಡಿಶಾ| ಕೋಳಿಫಾರಂ ಗೋಡೆ ಕುಸಿದು ಇಬ್ಬರ ಸಾವು, 16 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’.ಹಠಾತ್ ಸಾವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ: ದಿನೇಶ್ ಗುಂಡೂರಾವ್. <p>ಬಿಜೆಪಿ ಪಕ್ಷವು ಧಾರ್ಮಿಕ ಸಿದ್ಧಾಂತದಲ್ಲಿ ಬೂಟಾಟಿಕೆ ಹೊಂದಿದೆ. ಅನ್ಯಾಯ ಎಸಗುವವರು, ತಾರತಮ್ಯ ಮಾಡುವವರು ಮತ್ತು ಮಕ್ಕಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವವರು ತಮ್ಮನ್ನು ತಾವು ಸನಾತನಿಗಳೆಂದು ಕರೆದುಕೊಳ್ಳುವುದು ಸರಿಯಲ್ಲ ಎಂದು ಯಾದವ್ ಹೇಳಿದ್ದಾರೆ.</p><p>ಇಂದಿನ ರಾಜಕೀಯದಲ್ಲಿ ಕೇವಲ ಕೇಸರಿ ನಿಲುವಂಗಿ ಧರಿಸುವುದರಿಂದ ಒಬ್ಬರನ್ನು 'ಬಾಬಾ' ಅಥವಾ ಯೋಗಿ ಎಂದು ಕರೆಯಲಾಗುವುದಿಲ್ಲ. ನಿಜವಾಗಿ ಯೋಗಿ ಎಂದು ಕರೆಯುವುದು ಆತನ ಆಲೋಚನೆ ಮತ್ತು ನಡವಳಿಕೆಯಿಂದ ಮಾತ್ರ ಎಂದು ಯೋಗಿ ಆದಿತ್ಯನಾಥ್ ವಿರುದ್ಧ ಯಾದವ್ ಕಿಡಿಕಾರಿದ್ದಾರೆ. </p><p>ದೇಶ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಂದ ಬಿಜೆಪಿಯು ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದೆ. 2027ರ ಉತ್ತರ ಪ್ರದೇಶ ಚುನಾವಣೆಯು ನೀವು ಹಿಂದೆಂದೂ ನೋಡಿರದ ಮತ್ತು ಯಾವುದೇ ಸಮೀಕ್ಷೆಗಳ ಫಲಿತಾಂಶಕ್ಕಿಂತ ಭಿನ್ನವಾಗಿರುತ್ತದೆ ಎಂದು ಯಾದವ್ ತಿಳಿಸಿದ್ದಾರೆ.</p>.ಆತ್ಮೀಯವಾಗಿ ಮಾತನಾಡಿದ್ದನ್ನು ನಕಾರಾತ್ಮಕವಾಗಿ ಬರೆಯಬಾರದು: ಬಸವರಾಜ ರಾಯರಡ್ಡಿ.ಮಹಾರಾಷ್ಟ್ರ: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ.ಭಯೋತ್ಪಾದನೆಯ ಪೋಷಕರು, ಸಂತ್ರಸ್ತರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಆಗದು: ಮೋದಿ.ಹಿಮಾಚಲ ಪ್ರದೇಶ | ಮೇಘಸ್ಫೋಟ: ನಾಪತ್ತೆಯಾದ 30 ಜನರ ಪತ್ತೆಗೆ ಮುಂದುವರಿದ ಶೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ರಾಷ್ಟ್ರೀಯ ಜನತಾ ದಳಕ್ಕೆ (ಆರ್ಜೆಡಿ) ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೋಮವಾರ ಘೋಷಿಸಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಹಾರ ಚುನಾವಣೆಯಲ್ಲಿ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಮಾಡಿದ ಹಗರಣಗಳು ಬಹಿರಂಗಗೊಳ್ಳಲಿದೆ. ಜನರಿಗೆ ಸತ್ಯ ತಿಳಿಯಲಿದೆ ಎಂದು ಹೇಳಿದ್ದಾರೆ.</p><p>ನಿತೀಶ್ ಕುಮಾರ್ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡುವ ಉದ್ದೇಶ ಬಿಜೆಪಿಗೆ ಇಲ್ಲ. ನಾವು ಒಮ್ಮೆ ನಿತೀಶ್ ಕುಮಾರ್ ಅವರನ್ನು ಪ್ರಧಾನಿಯಾನ್ನಾಗಿ ಮಾಡಲು ಬಯಸಿದ್ದೆವು. ಆದರೆ ಮುಖ್ಯಮಂತ್ರಿ ಸ್ಥಾನದಿಂದ ನಿವೃತ್ತಿ ಹೊಂದುವಂತೆ ಬಿಜೆಪಿಯವರು ಮಾಡುತ್ತಾರೆ ಎಂದು ಯಾದವ್ ತಿಳಿಸಿದ್ದಾರೆ.</p>.ಒಡಿಶಾ| ಕೋಳಿಫಾರಂ ಗೋಡೆ ಕುಸಿದು ಇಬ್ಬರ ಸಾವು, 16 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’.ಹಠಾತ್ ಸಾವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ: ದಿನೇಶ್ ಗುಂಡೂರಾವ್. <p>ಬಿಜೆಪಿ ಪಕ್ಷವು ಧಾರ್ಮಿಕ ಸಿದ್ಧಾಂತದಲ್ಲಿ ಬೂಟಾಟಿಕೆ ಹೊಂದಿದೆ. ಅನ್ಯಾಯ ಎಸಗುವವರು, ತಾರತಮ್ಯ ಮಾಡುವವರು ಮತ್ತು ಮಕ್ಕಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವವರು ತಮ್ಮನ್ನು ತಾವು ಸನಾತನಿಗಳೆಂದು ಕರೆದುಕೊಳ್ಳುವುದು ಸರಿಯಲ್ಲ ಎಂದು ಯಾದವ್ ಹೇಳಿದ್ದಾರೆ.</p><p>ಇಂದಿನ ರಾಜಕೀಯದಲ್ಲಿ ಕೇವಲ ಕೇಸರಿ ನಿಲುವಂಗಿ ಧರಿಸುವುದರಿಂದ ಒಬ್ಬರನ್ನು 'ಬಾಬಾ' ಅಥವಾ ಯೋಗಿ ಎಂದು ಕರೆಯಲಾಗುವುದಿಲ್ಲ. ನಿಜವಾಗಿ ಯೋಗಿ ಎಂದು ಕರೆಯುವುದು ಆತನ ಆಲೋಚನೆ ಮತ್ತು ನಡವಳಿಕೆಯಿಂದ ಮಾತ್ರ ಎಂದು ಯೋಗಿ ಆದಿತ್ಯನಾಥ್ ವಿರುದ್ಧ ಯಾದವ್ ಕಿಡಿಕಾರಿದ್ದಾರೆ. </p><p>ದೇಶ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಂದ ಬಿಜೆಪಿಯು ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದೆ. 2027ರ ಉತ್ತರ ಪ್ರದೇಶ ಚುನಾವಣೆಯು ನೀವು ಹಿಂದೆಂದೂ ನೋಡಿರದ ಮತ್ತು ಯಾವುದೇ ಸಮೀಕ್ಷೆಗಳ ಫಲಿತಾಂಶಕ್ಕಿಂತ ಭಿನ್ನವಾಗಿರುತ್ತದೆ ಎಂದು ಯಾದವ್ ತಿಳಿಸಿದ್ದಾರೆ.</p>.ಆತ್ಮೀಯವಾಗಿ ಮಾತನಾಡಿದ್ದನ್ನು ನಕಾರಾತ್ಮಕವಾಗಿ ಬರೆಯಬಾರದು: ಬಸವರಾಜ ರಾಯರಡ್ಡಿ.ಮಹಾರಾಷ್ಟ್ರ: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ.ಭಯೋತ್ಪಾದನೆಯ ಪೋಷಕರು, ಸಂತ್ರಸ್ತರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಆಗದು: ಮೋದಿ.ಹಿಮಾಚಲ ಪ್ರದೇಶ | ಮೇಘಸ್ಫೋಟ: ನಾಪತ್ತೆಯಾದ 30 ಜನರ ಪತ್ತೆಗೆ ಮುಂದುವರಿದ ಶೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>