<p><strong>ಜೈಪುರ</strong>: ರಾಜಸ್ಥಾನದ ಬರನ್ ಜಿಲ್ಲೆಯ ಅಂತಾ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಜೈನ್ ಭಾಯ 69,571 ಮತಗಳನ್ನು ಪಡೆದು ತಮ್ಮ ಹತ್ತಿರದ ಪ್ರತಿಸ್ಪರ್ಧಿ, ಬಿಜೆಪಿ ಅಭ್ಯರ್ಥಿ ಮೋರ್ಪಾಲ್ ಸುಮನ್ ಅವರ ವಿರುದ್ಧ 15,612 ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆ.</p><p>ಬಿಜೆಪಿ ಅಭ್ಯರ್ಥಿ ಉಪಚುನಾವಣೆಯಲ್ಲಿ 53,959 ಮತಗಳನ್ನು ಪಡೆದುಕೊಂಡರು. ಭಾಯ ಅವರು ಮತ ಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆ ಹಿಡಿದಿಟ್ಟುಕೊಂಡಿದ್ದರು. ಉಪಚುನಾವಣೆಯಲ್ಲಿ ಒಟ್ಟು 15 ಅಭ್ಯರ್ಥಿಗಳು ಕಣದಲ್ಲಿದ್ದರು.</p><h2>ಉಪಚುನಾವಣೆಗೆ ಕಾರಣವೇನು? </h2><p>ಅಂತಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಬಿಜೆಪಿಯ ಕನ್ವರ್ ಲಾಲ್ ಮೀನಾ ಕ್ರಿಮಿನಲ್ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾದ ಬಳಿಕ ಅವರನ್ನು ವಿಧಾಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸಲಾಯಿತು. ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಭಾಯ ಅವರನ್ನು ಕನ್ವರ್ ಲಾಲ್ ಮೀನಾ ಸೋಲಿಸಿದ್ದರು.</p><p>ಚುನಾವಣೆ ಬಳಿಕ ಮಾತನಾಡಿದ ಭಾಯ, ಮತದಾರರ ಮನಸ್ಥಿತಿಯಲ್ಲಿನ ಬದಲಾವಣೆಯೇ ತಮ್ಮ ಗೆಲುವಿಗೆ ಕಾರಣ ಎಂದಿದ್ದಾರೆ. ‘ಕಳೆದ ಚುನಾವಣೆಯಲ್ಲಿ ಬಿಜೆಪಿಯ ಆಶ್ವಾಸನೆಗಳಿಂದ ಜನರು ದಾರಿ ತಪ್ಪಿದ್ದರು. ಆದರೆ ಈ ಬಾರಿ ಅವರು ನಮಗೆ ಆಶೀರ್ವದಿಸಿದ್ದಾರೆ’ ಎಂದು ಅವರು ಹೇಳಿದರು.</p>.<h2><strong>ಮಿಜೋರಾಂನಲ್ಲಿ ಗೆದ್ದ ಎಮ್ಎನ್ಎಫ್ ಅಭ್ಯರ್ಥಿ</strong></h2><p>ಮಿಜೋರಾಂನ ಡಂಪಾ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಅಲ್ಲಿನ ವಿರೋಧ ಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್(ಎಮ್ಎನ್ಎಫ್) ನಾಯಕ ಹಾಗೂ ಮಾಜಿ ಸಚಿವ ಆರ್. ಲಾಲ್ತಾಂಗ್ಲಿಯಾನಾ ಅವರು 562 ಮತಗಳಿಂದ ಝೆಡ್ಪಿಎಮ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದ ಬರನ್ ಜಿಲ್ಲೆಯ ಅಂತಾ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಜೈನ್ ಭಾಯ 69,571 ಮತಗಳನ್ನು ಪಡೆದು ತಮ್ಮ ಹತ್ತಿರದ ಪ್ರತಿಸ್ಪರ್ಧಿ, ಬಿಜೆಪಿ ಅಭ್ಯರ್ಥಿ ಮೋರ್ಪಾಲ್ ಸುಮನ್ ಅವರ ವಿರುದ್ಧ 15,612 ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆ.</p><p>ಬಿಜೆಪಿ ಅಭ್ಯರ್ಥಿ ಉಪಚುನಾವಣೆಯಲ್ಲಿ 53,959 ಮತಗಳನ್ನು ಪಡೆದುಕೊಂಡರು. ಭಾಯ ಅವರು ಮತ ಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆ ಹಿಡಿದಿಟ್ಟುಕೊಂಡಿದ್ದರು. ಉಪಚುನಾವಣೆಯಲ್ಲಿ ಒಟ್ಟು 15 ಅಭ್ಯರ್ಥಿಗಳು ಕಣದಲ್ಲಿದ್ದರು.</p><h2>ಉಪಚುನಾವಣೆಗೆ ಕಾರಣವೇನು? </h2><p>ಅಂತಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಬಿಜೆಪಿಯ ಕನ್ವರ್ ಲಾಲ್ ಮೀನಾ ಕ್ರಿಮಿನಲ್ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾದ ಬಳಿಕ ಅವರನ್ನು ವಿಧಾಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸಲಾಯಿತು. ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಭಾಯ ಅವರನ್ನು ಕನ್ವರ್ ಲಾಲ್ ಮೀನಾ ಸೋಲಿಸಿದ್ದರು.</p><p>ಚುನಾವಣೆ ಬಳಿಕ ಮಾತನಾಡಿದ ಭಾಯ, ಮತದಾರರ ಮನಸ್ಥಿತಿಯಲ್ಲಿನ ಬದಲಾವಣೆಯೇ ತಮ್ಮ ಗೆಲುವಿಗೆ ಕಾರಣ ಎಂದಿದ್ದಾರೆ. ‘ಕಳೆದ ಚುನಾವಣೆಯಲ್ಲಿ ಬಿಜೆಪಿಯ ಆಶ್ವಾಸನೆಗಳಿಂದ ಜನರು ದಾರಿ ತಪ್ಪಿದ್ದರು. ಆದರೆ ಈ ಬಾರಿ ಅವರು ನಮಗೆ ಆಶೀರ್ವದಿಸಿದ್ದಾರೆ’ ಎಂದು ಅವರು ಹೇಳಿದರು.</p>.<h2><strong>ಮಿಜೋರಾಂನಲ್ಲಿ ಗೆದ್ದ ಎಮ್ಎನ್ಎಫ್ ಅಭ್ಯರ್ಥಿ</strong></h2><p>ಮಿಜೋರಾಂನ ಡಂಪಾ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಅಲ್ಲಿನ ವಿರೋಧ ಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್(ಎಮ್ಎನ್ಎಫ್) ನಾಯಕ ಹಾಗೂ ಮಾಜಿ ಸಚಿವ ಆರ್. ಲಾಲ್ತಾಂಗ್ಲಿಯಾನಾ ಅವರು 562 ಮತಗಳಿಂದ ಝೆಡ್ಪಿಎಮ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>