<p><strong>ಪಟ್ನಾ:</strong>ಭೀಕರಪ್ರವಾಹಕ್ಕೆ ತುತ್ತಾಗಿರುವ ಬಿಹಾರದಲ್ಲಿ ಪರಿಸ್ಥಿತಿ ಅವಲೋಕಿಸಲು ತೆರಳಿದ ಸಂಸದರೇ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.</p>.<p>ಬಿಜೆಪಿ ಸಂಸದ ರಾಮ ಕೃಪಾಳ್ ಯಾದವ್ ಅವರು ಪ್ರವಾಹಪೀಡಿತ ಪಟ್ನಾದ ಮಸೌರಿಗೆ ಪರಿಸ್ಥಿತಿ ಅವಲೋಕಿಸಲು ಬುಧವಾರ ತೆರಳಿದ್ದರು. ಈ ವೇಳೆ ಚಿಕ್ಕ ತೆಪ್ಪವೊಂದರಲ್ಲಿ ಅವರನ್ನು ಕರೆದೊಯ್ಯಲಾಗಿತ್ತು. ಸಮೀಕ್ಷೆ ನಡೆಸಿ ದಡದತ್ತ ವಾಪಸಾಗುತ್ತಿದ್ದ ವೇಳೆ ಸಂಸದರಿದ್ದ ತೆಪ್ಪ ನೀರಿನಲ್ಲಿ ಮುಳುಗಿದೆ. ಈ ವೇಳೆ ಸಂಸದರೂ ಆಯ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.</p>.<p>ಭಾರೀ ಮಳೆಯಿಂದಾಗಿ ಬಿಹಾರದಾದ್ಯಂತ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಪಟ್ನಾದ ಬಹುತೇಕ ಪ್ರದೇಶಗಳು ಮುಳುಗಡೆಯಾಗಿದ್ದವು. ಭಾರೀ ಮಳೆ, ಪ್ರವಾಹದಿಂದ ಬಿಹಾರ, ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ 110ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/what-happened-america-fumes-669110.html" target="_blank">ಬಿಹಾರದಲ್ಲಿ ಮಾತ್ರ ಪ್ರವಾಹವೇ?: ಪತ್ರಕರ್ತರ ವಿರುದ್ಧ ಹರಿಹಾಯ್ದ ನಿತೀಶ್ ಕುಮಾರ್</a></p>.<p><a href="https://www.prajavani.net/stories/national/27-dead-rain-batters-bihar-668512.html" target="_blank">ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿದ ಬಿಹಾರ: ಮೃತರ ಸಂಖ್ಯೆ 29ಕ್ಕೆ ಏರಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong>ಭೀಕರಪ್ರವಾಹಕ್ಕೆ ತುತ್ತಾಗಿರುವ ಬಿಹಾರದಲ್ಲಿ ಪರಿಸ್ಥಿತಿ ಅವಲೋಕಿಸಲು ತೆರಳಿದ ಸಂಸದರೇ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.</p>.<p>ಬಿಜೆಪಿ ಸಂಸದ ರಾಮ ಕೃಪಾಳ್ ಯಾದವ್ ಅವರು ಪ್ರವಾಹಪೀಡಿತ ಪಟ್ನಾದ ಮಸೌರಿಗೆ ಪರಿಸ್ಥಿತಿ ಅವಲೋಕಿಸಲು ಬುಧವಾರ ತೆರಳಿದ್ದರು. ಈ ವೇಳೆ ಚಿಕ್ಕ ತೆಪ್ಪವೊಂದರಲ್ಲಿ ಅವರನ್ನು ಕರೆದೊಯ್ಯಲಾಗಿತ್ತು. ಸಮೀಕ್ಷೆ ನಡೆಸಿ ದಡದತ್ತ ವಾಪಸಾಗುತ್ತಿದ್ದ ವೇಳೆ ಸಂಸದರಿದ್ದ ತೆಪ್ಪ ನೀರಿನಲ್ಲಿ ಮುಳುಗಿದೆ. ಈ ವೇಳೆ ಸಂಸದರೂ ಆಯ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.</p>.<p>ಭಾರೀ ಮಳೆಯಿಂದಾಗಿ ಬಿಹಾರದಾದ್ಯಂತ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಪಟ್ನಾದ ಬಹುತೇಕ ಪ್ರದೇಶಗಳು ಮುಳುಗಡೆಯಾಗಿದ್ದವು. ಭಾರೀ ಮಳೆ, ಪ್ರವಾಹದಿಂದ ಬಿಹಾರ, ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ 110ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/what-happened-america-fumes-669110.html" target="_blank">ಬಿಹಾರದಲ್ಲಿ ಮಾತ್ರ ಪ್ರವಾಹವೇ?: ಪತ್ರಕರ್ತರ ವಿರುದ್ಧ ಹರಿಹಾಯ್ದ ನಿತೀಶ್ ಕುಮಾರ್</a></p>.<p><a href="https://www.prajavani.net/stories/national/27-dead-rain-batters-bihar-668512.html" target="_blank">ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿದ ಬಿಹಾರ: ಮೃತರ ಸಂಖ್ಯೆ 29ಕ್ಕೆ ಏರಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>