<p><strong>ಪಟ್ನಾ:</strong> ಗಯಾ ಕ್ಷೇತ್ರದ ಬಿಜೆಪಿಯ ಹಿರಿಯ ಶಾಸಕ ಪ್ರೇಮ್ ಕುಮಾರ್ ಅವರು ಬಿಹಾರ ವಿಧಾನಸಭೆಯ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.</p>.<p>ಸ್ಪೀಕರ್ ಆಗಿ ಆಯ್ಕೆಯಾದ ಅವರನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ವಿಪಕ್ಷ ತೇಜಸ್ವಿ ಯಾದವ್ ಅವರು ಸಂಪ್ರದಾಯದಂತೆ ಸ್ಪೀಕರ್ ಕುರ್ಚಿಗೆ ಕರೆದುಕೊಂಡು ಬಂದರು.</p>.<p>ಈ ವೇಳೆ ಮಾತನಾಡಿದ ತೇಜಸ್ವಿ, ‘ನೀವು ಬುದ್ಧನ ಭೂಮಿಯಿಂದ ಬಂದಿದ್ದೀರಿ. ವಿರೋಧ ಪಕ್ಷದೊಂದಿಗೆ ನ್ಯಾಯಯುತವಾಗಿ ವರ್ತಿಸುತ್ತೀರಿ ಮತ್ತು ವಿಪಕ್ಷಗಳ ಮಾತನ್ನು ತಾಳ್ಮೆಯಿಂದ ಆಲಿಸುವಿರಿ ಎಂದು ಆಶಿಸುತ್ತೇವೆ’ ಎಂದು ಹೇಳಿದರು.</p>.<p>ಪ್ರೇಮ್ ಕುಮಾರ್ ಅವರು ಬರೋಬ್ಬರಿ ಒಂಬತ್ತು ಬಾರಿ ಗಯಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1990ರಲ್ಲಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದ ಅವರು, ಅಂದಿನಿಂದ ಯಾವುದೇ ಚುನಾವಣೆಗಳಲ್ಲಿ ಸೋತಿಲ್ಲ.</p>.<p>‘ಸರ್ವಾನುಮತದ ಆಯ್ಕೆಯಿಂದ ಸಂತೋಷವಾಗಿದೆ. ಸರ್ಕಾರ ಮತ್ತು ವಿಪಕ್ಷಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಮತ್ತು ನಿಯಮಗಳ ಪ್ರಕಾರ ಕಲಾಪಗಳನ್ನು ನಡೆಸುತ್ತೇನೆ. ಭವಿಷ್ಯದ ಪೀಳಿಗೆಗೆ ಮಾದರಿಯಾಗುವೆ’ ಎಂದು ಪ್ರೇಮ್ ಕುಮಾರ್ ಹೇಳಿದರು.</p>.<p>ಈ ಹಿಂದೆ ನಿತೀಶ್ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ಕೃಷಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ಇತಿಹಾಸದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಗಯಾ ಕ್ಷೇತ್ರದ ಬಿಜೆಪಿಯ ಹಿರಿಯ ಶಾಸಕ ಪ್ರೇಮ್ ಕುಮಾರ್ ಅವರು ಬಿಹಾರ ವಿಧಾನಸಭೆಯ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.</p>.<p>ಸ್ಪೀಕರ್ ಆಗಿ ಆಯ್ಕೆಯಾದ ಅವರನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ವಿಪಕ್ಷ ತೇಜಸ್ವಿ ಯಾದವ್ ಅವರು ಸಂಪ್ರದಾಯದಂತೆ ಸ್ಪೀಕರ್ ಕುರ್ಚಿಗೆ ಕರೆದುಕೊಂಡು ಬಂದರು.</p>.<p>ಈ ವೇಳೆ ಮಾತನಾಡಿದ ತೇಜಸ್ವಿ, ‘ನೀವು ಬುದ್ಧನ ಭೂಮಿಯಿಂದ ಬಂದಿದ್ದೀರಿ. ವಿರೋಧ ಪಕ್ಷದೊಂದಿಗೆ ನ್ಯಾಯಯುತವಾಗಿ ವರ್ತಿಸುತ್ತೀರಿ ಮತ್ತು ವಿಪಕ್ಷಗಳ ಮಾತನ್ನು ತಾಳ್ಮೆಯಿಂದ ಆಲಿಸುವಿರಿ ಎಂದು ಆಶಿಸುತ್ತೇವೆ’ ಎಂದು ಹೇಳಿದರು.</p>.<p>ಪ್ರೇಮ್ ಕುಮಾರ್ ಅವರು ಬರೋಬ್ಬರಿ ಒಂಬತ್ತು ಬಾರಿ ಗಯಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1990ರಲ್ಲಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದ ಅವರು, ಅಂದಿನಿಂದ ಯಾವುದೇ ಚುನಾವಣೆಗಳಲ್ಲಿ ಸೋತಿಲ್ಲ.</p>.<p>‘ಸರ್ವಾನುಮತದ ಆಯ್ಕೆಯಿಂದ ಸಂತೋಷವಾಗಿದೆ. ಸರ್ಕಾರ ಮತ್ತು ವಿಪಕ್ಷಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಮತ್ತು ನಿಯಮಗಳ ಪ್ರಕಾರ ಕಲಾಪಗಳನ್ನು ನಡೆಸುತ್ತೇನೆ. ಭವಿಷ್ಯದ ಪೀಳಿಗೆಗೆ ಮಾದರಿಯಾಗುವೆ’ ಎಂದು ಪ್ರೇಮ್ ಕುಮಾರ್ ಹೇಳಿದರು.</p>.<p>ಈ ಹಿಂದೆ ನಿತೀಶ್ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ಕೃಷಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ಇತಿಹಾಸದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>