<p><strong>ಪೂರ್ಣಿಯಾ:</strong> 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆಸಲು ಬಿಜೆಪಿ ಯತ್ನಿಸುತ್ತಿದೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಆರೋಪಿಸಿದ್ದಾರೆ. </p><p>'ಕಳೆದ ವರ್ಷ ಹರಿಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗದ ಜೊತೆ ಸೇರಿಕೊಂಡು ಬಿಜೆಪಿ ಮತ ಕಳ್ಳತನ ನಡೆಸಿತ್ತು. ಈಗ ಬಿಹಾರದಲ್ಲೂ ಅದನ್ನೇ ನಡೆಸಲು ಯತ್ನಿಸುತ್ತಿದೆ' ಎಂದು ಅವರು ಟೀಕಿಸಿದ್ದಾರೆ. </p><p>'ರಾಜ್ಯದಲ್ಲಿ ಮತ ಕಳ್ಳತನ ತಡೆಯುವುದು ಹಾಗೂ ಸಂವಿಧಾನದ ರಕ್ಷಣೆ ಯುವಜನರ ಜವಾಬ್ದಾರಿಯಾಗಿದೆ. ಮತಗಟ್ಟೆಗಳಲ್ಲಿ ನೀವೆಲ್ಲರೂ ಎಚ್ಚರದಿಂದಿರಬೇಕು' ಎಂದು ರಾಹುಲ್ ಹೇಳಿದ್ದಾರೆ. </p><p>'ಕೋಟ್ಯಧಿಪತಿ ಉದ್ಯಮಿಗಳಿಗಾಗಿ ಯುವಜನರು ನಿರುದ್ಯೋಗಿಗಳಾಗಿ ಉಳಿಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ' ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ. </p><p>ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧವೂ ಟೀಕಿಸಿದ ರಾಹುಲ್, 'ರಾಜ್ಯದ ಯುವಜನರನ್ನು ಕಾರ್ಮಿಕರನ್ನಾಗಿ ಪರಿವರ್ತಿಸಿದ್ದಾರೆ' ಎಂದು ಆರೋಪಿಸಿದ್ದಾರೆ. </p>.ನ್ಯಾಯಯುತವಾಗಿ ಚುನಾವಣೆ ನಡೆದರೆ ಎನ್ಡಿಎ ಸರ್ಕಾರ ಪತನ ಖಚಿತ: ಪ್ರಿಯಾಂಕಾ.ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೂರ್ಣಿಯಾ:</strong> 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆಸಲು ಬಿಜೆಪಿ ಯತ್ನಿಸುತ್ತಿದೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಆರೋಪಿಸಿದ್ದಾರೆ. </p><p>'ಕಳೆದ ವರ್ಷ ಹರಿಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗದ ಜೊತೆ ಸೇರಿಕೊಂಡು ಬಿಜೆಪಿ ಮತ ಕಳ್ಳತನ ನಡೆಸಿತ್ತು. ಈಗ ಬಿಹಾರದಲ್ಲೂ ಅದನ್ನೇ ನಡೆಸಲು ಯತ್ನಿಸುತ್ತಿದೆ' ಎಂದು ಅವರು ಟೀಕಿಸಿದ್ದಾರೆ. </p><p>'ರಾಜ್ಯದಲ್ಲಿ ಮತ ಕಳ್ಳತನ ತಡೆಯುವುದು ಹಾಗೂ ಸಂವಿಧಾನದ ರಕ್ಷಣೆ ಯುವಜನರ ಜವಾಬ್ದಾರಿಯಾಗಿದೆ. ಮತಗಟ್ಟೆಗಳಲ್ಲಿ ನೀವೆಲ್ಲರೂ ಎಚ್ಚರದಿಂದಿರಬೇಕು' ಎಂದು ರಾಹುಲ್ ಹೇಳಿದ್ದಾರೆ. </p><p>'ಕೋಟ್ಯಧಿಪತಿ ಉದ್ಯಮಿಗಳಿಗಾಗಿ ಯುವಜನರು ನಿರುದ್ಯೋಗಿಗಳಾಗಿ ಉಳಿಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ' ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ. </p><p>ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧವೂ ಟೀಕಿಸಿದ ರಾಹುಲ್, 'ರಾಜ್ಯದ ಯುವಜನರನ್ನು ಕಾರ್ಮಿಕರನ್ನಾಗಿ ಪರಿವರ್ತಿಸಿದ್ದಾರೆ' ಎಂದು ಆರೋಪಿಸಿದ್ದಾರೆ. </p>.ನ್ಯಾಯಯುತವಾಗಿ ಚುನಾವಣೆ ನಡೆದರೆ ಎನ್ಡಿಎ ಸರ್ಕಾರ ಪತನ ಖಚಿತ: ಪ್ರಿಯಾಂಕಾ.ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>