<p><strong>ಪಟ್ನಾ:</strong> ಬಿಹಾರದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಫೆಬ್ರುವರಿ 28ರಂದು ಸಂಭವಿಸಿದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದು ಸೇತುವೆ ನಿರ್ಮಾಣದ ಗುಣಮಟ್ಟದ ಮೇಲೆ ಬೆಳಕು ಚೆಲ್ಲುವಂತೆ ಮಾಡಿತ್ತು. ಗ್ರಾಮೀಣ ಅಭಿವೃದ್ಧಿ ಇಲಾಖೆ (ಆರ್ಡಬ್ಲ್ಯು) ಸೇತುವೆಯನ್ನು ನಿರ್ಮಿಸುತ್ತಿತ್ತು.</p><p>ಘಟನೆ ಸಂಬಂಧ ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ ಮತ್ತು ಆರ್ಡಬ್ಲ್ಯು ಜೂನಿಯರ್ ಎಂಜಿನಿಯರ್ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ ಎಂದು ಗೋಪಾಲ್ಗಂಜ್ ಜಿಲ್ಲಾಧಿಕಾರಿ ಪವನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ. </p><p>ಸೇತುವೆಯನ್ನು ₹2.87 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸೇತುವೆಯನ್ನು ನಿರ್ಮಿಸುತ್ತಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ. </p><p>2024ರಲ್ಲಿ ಬಿಹಾರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10ಕ್ಕೂ ಹೆಚ್ಚು ಸೇತುವೆಗಳು ಹಠಾತ್ತನೆ ಕುಸಿದಿದ್ದವು. ಈ ಘಟನೆಗಳು ಸೇತುವೆಗಳ ಸಾಮರ್ಥ್ಯದ ಬಗ್ಗೆ ಕಳವಳ ಸೃಷ್ಟಿಸಿದ್ದವು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತುರ್ತು ದುರಸ್ತಿ ಅಗತ್ಯವಿರುವ ಸೇತುವೆಗಳ ಪಟ್ಟಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಸೂಚಿಸಿದ್ದರು.</p>
<p><strong>ಪಟ್ನಾ:</strong> ಬಿಹಾರದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಫೆಬ್ರುವರಿ 28ರಂದು ಸಂಭವಿಸಿದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದು ಸೇತುವೆ ನಿರ್ಮಾಣದ ಗುಣಮಟ್ಟದ ಮೇಲೆ ಬೆಳಕು ಚೆಲ್ಲುವಂತೆ ಮಾಡಿತ್ತು. ಗ್ರಾಮೀಣ ಅಭಿವೃದ್ಧಿ ಇಲಾಖೆ (ಆರ್ಡಬ್ಲ್ಯು) ಸೇತುವೆಯನ್ನು ನಿರ್ಮಿಸುತ್ತಿತ್ತು.</p><p>ಘಟನೆ ಸಂಬಂಧ ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ ಮತ್ತು ಆರ್ಡಬ್ಲ್ಯು ಜೂನಿಯರ್ ಎಂಜಿನಿಯರ್ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ ಎಂದು ಗೋಪಾಲ್ಗಂಜ್ ಜಿಲ್ಲಾಧಿಕಾರಿ ಪವನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ. </p><p>ಸೇತುವೆಯನ್ನು ₹2.87 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸೇತುವೆಯನ್ನು ನಿರ್ಮಿಸುತ್ತಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ. </p><p>2024ರಲ್ಲಿ ಬಿಹಾರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10ಕ್ಕೂ ಹೆಚ್ಚು ಸೇತುವೆಗಳು ಹಠಾತ್ತನೆ ಕುಸಿದಿದ್ದವು. ಈ ಘಟನೆಗಳು ಸೇತುವೆಗಳ ಸಾಮರ್ಥ್ಯದ ಬಗ್ಗೆ ಕಳವಳ ಸೃಷ್ಟಿಸಿದ್ದವು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತುರ್ತು ದುರಸ್ತಿ ಅಗತ್ಯವಿರುವ ಸೇತುವೆಗಳ ಪಟ್ಟಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಸೂಚಿಸಿದ್ದರು.</p>