ಪಟ್ನಾ: ಗಾಲ್ವನ್ ಕಣಿವೆ ಸಂಘರ್ಷದಲ್ಲಿ ಹುತಾತ್ಮರಾದ ರಾಜ್ಯದ ಸೈನಿಕರ ಕುಟುಂಬದವರಿಗೆ ಉದ್ಯೋಗ ನೀಡುವ ಪ್ರಸ್ತಾವಕ್ಕೆ ಬಿಹಾರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಪೂರ್ವ ಲಡಾಖ್ನ ಗಾಲ್ವನ್ ಕಣಿವೆ ಪ್ರದೇಶದಲ್ಲಿ ಜೂನ್ 15ರ ರಾತ್ರಿ ಭಾರತ ಹಾಗೂ ಚೀನಾ ಸೇನೆಗಳ ನಡುವೆ ಹಿಂಸಾತ್ಮಕ ಸಂಘರ್ಷ ನಡೆದಿತ್ತು. ಈ ವೇಳೆ ದೇಶದ 20 ಯೋಧರು ಹುತಾತ್ಮರಾಗಿದ್ದರು.
ಸಂಘರ್ಷದ ಸಂದರ್ಭ ಚೀನಾ ಕಡೆಯಲ್ಲಿ ಸುಮಾರು 43 ಸಾವು–ನೋವು ಸಂಭವಿಸಿದೆ ಎಂದು ವರದಿಯಾಗಿತ್ತು.