<p><strong>ಪಟ್ನಾ:</strong> ಬಿಹಾರದಲ್ಲಿ ಗುರುವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.</p>.<p>‘ಎನ್ಡಿಎ ಕೂಟದ ಭಾಗವಾಗಿರುವ ಬಿಜೆಪಿ, ಜೆಡಿಯು, ಎಲ್ಜೆಪಿ, ಎಚ್ಎಎಂ ಮತ್ತು ಆರ್ಎಲ್ಎಂ ಪಕ್ಷಗಳಿಂದ ಒಟ್ಟು 27 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿಂದಿನಂತೆ 16:16:2:1:1ರ ಅನುಪಾತದಲ್ಲಿಯೇ ಸಚಿವ ಸಂಪುಟ ಇರಲಿದೆ. 12:11:2:1:1 ಅನುಪಾತದಲ್ಲಿ ಗುರುವಾರ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಆರ್ಜೆಡಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆರು ಸ್ಥಾನಗಳನ್ನು ಖಾಲಿ ಉಳಿಸಲಾಗಿದೆ’ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.</p>.<p class="title">ಏಪ್ರಿಲ್ 15ರಂದು ಮುಖ್ಯಮಂತ್ರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಷ್ಟೆ ಪ್ರಮಾಣವಚನ ಸ್ವೀಕರಿಸಿದ್ದರು. ಬಿಜೆಪಿಯ ಪ್ರಮುಖ ನಾಯಕರು ಪಂಚರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಕಾರಣ ಸಚಿವರ ಪ್ರಮಾಣವಚನ ಸಮಾರಂಭವನ್ನು ಫಲಿತಾಂಶ ಘೋಷಣೆ ಬಳಿಕ ಆಯೋಜಿಸಲಾಗಿದೆ. <span style="font-size:14pt;font-family:'Times New Roman', serif;background-color:transparent;">ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದಲ್ಲಿ ಗುರುವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.</p>.<p>‘ಎನ್ಡಿಎ ಕೂಟದ ಭಾಗವಾಗಿರುವ ಬಿಜೆಪಿ, ಜೆಡಿಯು, ಎಲ್ಜೆಪಿ, ಎಚ್ಎಎಂ ಮತ್ತು ಆರ್ಎಲ್ಎಂ ಪಕ್ಷಗಳಿಂದ ಒಟ್ಟು 27 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿಂದಿನಂತೆ 16:16:2:1:1ರ ಅನುಪಾತದಲ್ಲಿಯೇ ಸಚಿವ ಸಂಪುಟ ಇರಲಿದೆ. 12:11:2:1:1 ಅನುಪಾತದಲ್ಲಿ ಗುರುವಾರ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಆರ್ಜೆಡಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆರು ಸ್ಥಾನಗಳನ್ನು ಖಾಲಿ ಉಳಿಸಲಾಗಿದೆ’ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.</p>.<p class="title">ಏಪ್ರಿಲ್ 15ರಂದು ಮುಖ್ಯಮಂತ್ರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಷ್ಟೆ ಪ್ರಮಾಣವಚನ ಸ್ವೀಕರಿಸಿದ್ದರು. ಬಿಜೆಪಿಯ ಪ್ರಮುಖ ನಾಯಕರು ಪಂಚರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಕಾರಣ ಸಚಿವರ ಪ್ರಮಾಣವಚನ ಸಮಾರಂಭವನ್ನು ಫಲಿತಾಂಶ ಘೋಷಣೆ ಬಳಿಕ ಆಯೋಜಿಸಲಾಗಿದೆ. <span style="font-size:14pt;font-family:'Times New Roman', serif;background-color:transparent;">ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>