<p><strong>ಪಟ್ನಾ:</strong> ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು<br />ಅವರಿಗೆ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ಬಿಹಾರ ವಿಧಾನ ಪರಿಷತ್ ಸಭಾಪತಿ ಅವಧೇಶ್ ನಾರಾಯಣ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಇವರ<br />ಜೊತೆಗೂಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ನಿತೀಶ್<br />ಕುಮಾರ್ ಅವರು ಕೋವಿಡ್–19 ಪರೀಕ್ಷೆಗೆ ಬಳಗಾಗಿದ್ದರು.</p>.<p>ಸಭಾಪತಿ ಮತ್ತು ಮುಖ್ಯಮಂತ್ರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ 14 ಅಧಿಕಾರಿಗಳುಹಾಗೂ<br />ಕಚೇರಿ ಸಿಬ್ಬಂದಿಗಳಿಗೂ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು ಅವರಿಗೂ ನೆಗೆಟಿವ್ ಫಲಿತಾಂಶ ಬಂದಿದೆಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ನಿತೀಶ್ ಕುಮಾರ್ ಪಕ್ಕದಲ್ಲಿ ಕುಳಿತಿದ್ದ ಸಭಾಧ್ಯಕ್ಷ ವಿಜಯ್ ಕುಮಾರ್ ಚೌಧರಿ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್<br />ಕುಮಾರ್ ಮೋದಿ ಅವರನ್ನು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರ ವರದಿಯ ಫಲಿತಾಂಶ ಬರಬೇಕಿದೆ<br />ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಗಣ್ಯರನ್ನು ಸ್ಕ್ರೀನಿಂಗ್ಗೆ ಗುರಿಪಡಿಸಲಾಗುವುದು ಎಂದು ಸಿಎಂ<br />ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು<br />ಅವರಿಗೆ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ಬಿಹಾರ ವಿಧಾನ ಪರಿಷತ್ ಸಭಾಪತಿ ಅವಧೇಶ್ ನಾರಾಯಣ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಇವರ<br />ಜೊತೆಗೂಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ನಿತೀಶ್<br />ಕುಮಾರ್ ಅವರು ಕೋವಿಡ್–19 ಪರೀಕ್ಷೆಗೆ ಬಳಗಾಗಿದ್ದರು.</p>.<p>ಸಭಾಪತಿ ಮತ್ತು ಮುಖ್ಯಮಂತ್ರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ 14 ಅಧಿಕಾರಿಗಳುಹಾಗೂ<br />ಕಚೇರಿ ಸಿಬ್ಬಂದಿಗಳಿಗೂ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು ಅವರಿಗೂ ನೆಗೆಟಿವ್ ಫಲಿತಾಂಶ ಬಂದಿದೆಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ನಿತೀಶ್ ಕುಮಾರ್ ಪಕ್ಕದಲ್ಲಿ ಕುಳಿತಿದ್ದ ಸಭಾಧ್ಯಕ್ಷ ವಿಜಯ್ ಕುಮಾರ್ ಚೌಧರಿ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್<br />ಕುಮಾರ್ ಮೋದಿ ಅವರನ್ನು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರ ವರದಿಯ ಫಲಿತಾಂಶ ಬರಬೇಕಿದೆ<br />ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಗಣ್ಯರನ್ನು ಸ್ಕ್ರೀನಿಂಗ್ಗೆ ಗುರಿಪಡಿಸಲಾಗುವುದು ಎಂದು ಸಿಎಂ<br />ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>