<p><strong>ಪಟ್ನಾ:</strong> ‘ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರಂತೆ ನಾನಲ್ಲ; ಚುನಾವಣಾ ಆಯೋಗದ ನೋಟಿಸ್ಗೆ ಉತ್ತರಿಸುವೆ’ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್ಕುಮಾರ್ ಸಿನ್ಹಾ ಅವರು ಸೋಮವಾರ ಇಲ್ಲಿ ತಿಳಿಸಿದರು.</p>.<p>ತಾವು ಮತದಾರರ ಎರಡು ಗುರುತಿನ ಚೀಟಿ ಹೊಂದಿರುವುದಕ್ಕೆ ಆಯೋಗವು ನೀಡಿರುವ ನೋಟಿಸ್ಗೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿನ್ಹಾ, ‘ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ನಾನು ಗೌರವಿಸುತ್ತೇನೆ’ ಎಂದು ಹೇಳಿದರು.</p>.<p>ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿದ ಆಯೋಗವು ಕರಡು ಪಟ್ಟಿಯನ್ನು ಪ್ರಕಟಿಸಿದ್ದು, ಪರಿಷ್ಕರಣೆಯ ನಂತರವೂ ಉಪಮುಖ್ಯಮಂತ್ರಿ ವಿಜಯ್ಕುಮಾರ್ ಸಿನ್ಹಾ ಅವರು ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರಾಗಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ (ಆರ್ಜೆಡಿ) ತೇಜಸ್ವಿ ಯಾದವ್ ದೂರಿದ್ದರು.</p>.<p>ಇದು ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದ ಉಪಮುಖ್ಯಮಂತ್ರಿ, ‘ನನ್ನ ಬಳಿ ಸೂಕ್ತ ದಾಖಲೆಗಳಿವೆ’ ಎಂದೂ ಹೇಳಿಕೊಂಡಿದ್ದರು.</p>.<p>ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು, ಆ.14ರೊಳಗೆ ಉತ್ತರಿಸುವಂತೆ ಉಪಮುಖ್ಯಮಂತ್ರಿಗೆ ನೋಟಿಸ್ ನೀಡಿತ್ತು.</p>.<p>‘ಸಿನ್ಹಾ ಅವರು ಮತದಾರರ ಎರಡು ಗುರುತಿನ ಚೀಟಿ ಹೊಂದಿದ್ದಾರೆ. ಅದರಲ್ಲಿ ಒಂದನ್ನು ಅಧಿಕೃತವಾಗಿ ನೀಡಿಲ್ಲ’ ಎಂದಿರುವ ಆಯೋಗದ ಅಧಿಕಾರಿಗಳು, ತೇಜಸ್ವಿ ಯಾದವ್ಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರಂತೆ ನಾನಲ್ಲ; ಚುನಾವಣಾ ಆಯೋಗದ ನೋಟಿಸ್ಗೆ ಉತ್ತರಿಸುವೆ’ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್ಕುಮಾರ್ ಸಿನ್ಹಾ ಅವರು ಸೋಮವಾರ ಇಲ್ಲಿ ತಿಳಿಸಿದರು.</p>.<p>ತಾವು ಮತದಾರರ ಎರಡು ಗುರುತಿನ ಚೀಟಿ ಹೊಂದಿರುವುದಕ್ಕೆ ಆಯೋಗವು ನೀಡಿರುವ ನೋಟಿಸ್ಗೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿನ್ಹಾ, ‘ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ನಾನು ಗೌರವಿಸುತ್ತೇನೆ’ ಎಂದು ಹೇಳಿದರು.</p>.<p>ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿದ ಆಯೋಗವು ಕರಡು ಪಟ್ಟಿಯನ್ನು ಪ್ರಕಟಿಸಿದ್ದು, ಪರಿಷ್ಕರಣೆಯ ನಂತರವೂ ಉಪಮುಖ್ಯಮಂತ್ರಿ ವಿಜಯ್ಕುಮಾರ್ ಸಿನ್ಹಾ ಅವರು ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರಾಗಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ (ಆರ್ಜೆಡಿ) ತೇಜಸ್ವಿ ಯಾದವ್ ದೂರಿದ್ದರು.</p>.<p>ಇದು ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದ ಉಪಮುಖ್ಯಮಂತ್ರಿ, ‘ನನ್ನ ಬಳಿ ಸೂಕ್ತ ದಾಖಲೆಗಳಿವೆ’ ಎಂದೂ ಹೇಳಿಕೊಂಡಿದ್ದರು.</p>.<p>ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು, ಆ.14ರೊಳಗೆ ಉತ್ತರಿಸುವಂತೆ ಉಪಮುಖ್ಯಮಂತ್ರಿಗೆ ನೋಟಿಸ್ ನೀಡಿತ್ತು.</p>.<p>‘ಸಿನ್ಹಾ ಅವರು ಮತದಾರರ ಎರಡು ಗುರುತಿನ ಚೀಟಿ ಹೊಂದಿದ್ದಾರೆ. ಅದರಲ್ಲಿ ಒಂದನ್ನು ಅಧಿಕೃತವಾಗಿ ನೀಡಿಲ್ಲ’ ಎಂದಿರುವ ಆಯೋಗದ ಅಧಿಕಾರಿಗಳು, ತೇಜಸ್ವಿ ಯಾದವ್ಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>