<p><strong>ಪಟ್ನಾ:</strong> ವಿರೋಧ ಪಕ್ಷದ ನಾಯಕರಿಗೆ ಬಿಹಾರದ ಅಭಿವೃದ್ಧಿ ಬಗ್ಗೆ ಯಾವುದೇ ಕಾರ್ಯಸೂಚಿ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶುಕ್ರವಾರ) ಆರೋಪಿಸಿದ್ದಾರೆ. </p><p>ಲಾಲೂ ಪ್ರಸಾದ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಆರ್ಜೆಡಿ-ಕಾಂಗ್ರೆಸ್ ಮೈತ್ರಿಯು ರಾಜ್ಯದಲ್ಲಿ ನುಸುಳುಕೋರರನ್ನು ಬೆಂಬಲಿಸುವುದನ್ನು ಬಿಟ್ಟರೆ ಬಡಜನರಿಗಾಗಿ ಬೇರೆ ಏನನ್ನೂ ಮಾಡಿಲ್ಲ ಎಂದು ಟೀಕಿಸಿದ್ದಾರೆ. </p><p>ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಸೋನಿಯಾ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಲಾಲೂ ಹಾಗೂ ಸೋನಿಯಾ ತಮ್ಮ ಪುತ್ರರ ಬಗ್ಗೆ ಮಾತ್ರ ಕಾಳಜಿ ಹೊಂದಿದ್ದಾರೆ. ಬಿಹಾರದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. </p><p>ಎನ್ಡಿಎಗೆ ಇನ್ನೂ ಐದು ವರ್ಷಗಳವರೆಗೆ ಜನಾದೇಶ ನೀಡಿ. ಬಿಹಾರವನ್ನು ಅಭಿವೃದ್ಧಿ ಹೊಂದಿದ ರಾಜ್ಯಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು. ರಾಜ್ಯವನ್ನು ಪ್ರವಾಹ ಮುಕ್ತಗೊಳಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ. </p>.ದೆಹಲಿಯಲ್ಲಿ ಮತ ಹಾಕಿದ್ದ ಬಿಜೆಪಿ ನಾಯಕರಿಂದ ಬಿಹಾರದಲ್ಲೂ ಮತ ಚಲಾವಣೆ: ರಾಹುಲ್.ಮತ್ತೆ ‘ಜಂಗಲ್ ರಾಜ್’ ಆಡಳಿತ ಬರದಂತೆ ತಡೆಯಲು ಕಮಲದ ಬಟನ್ ಒತ್ತಿ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ವಿರೋಧ ಪಕ್ಷದ ನಾಯಕರಿಗೆ ಬಿಹಾರದ ಅಭಿವೃದ್ಧಿ ಬಗ್ಗೆ ಯಾವುದೇ ಕಾರ್ಯಸೂಚಿ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶುಕ್ರವಾರ) ಆರೋಪಿಸಿದ್ದಾರೆ. </p><p>ಲಾಲೂ ಪ್ರಸಾದ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಆರ್ಜೆಡಿ-ಕಾಂಗ್ರೆಸ್ ಮೈತ್ರಿಯು ರಾಜ್ಯದಲ್ಲಿ ನುಸುಳುಕೋರರನ್ನು ಬೆಂಬಲಿಸುವುದನ್ನು ಬಿಟ್ಟರೆ ಬಡಜನರಿಗಾಗಿ ಬೇರೆ ಏನನ್ನೂ ಮಾಡಿಲ್ಲ ಎಂದು ಟೀಕಿಸಿದ್ದಾರೆ. </p><p>ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಸೋನಿಯಾ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಲಾಲೂ ಹಾಗೂ ಸೋನಿಯಾ ತಮ್ಮ ಪುತ್ರರ ಬಗ್ಗೆ ಮಾತ್ರ ಕಾಳಜಿ ಹೊಂದಿದ್ದಾರೆ. ಬಿಹಾರದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. </p><p>ಎನ್ಡಿಎಗೆ ಇನ್ನೂ ಐದು ವರ್ಷಗಳವರೆಗೆ ಜನಾದೇಶ ನೀಡಿ. ಬಿಹಾರವನ್ನು ಅಭಿವೃದ್ಧಿ ಹೊಂದಿದ ರಾಜ್ಯಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು. ರಾಜ್ಯವನ್ನು ಪ್ರವಾಹ ಮುಕ್ತಗೊಳಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ. </p>.ದೆಹಲಿಯಲ್ಲಿ ಮತ ಹಾಕಿದ್ದ ಬಿಜೆಪಿ ನಾಯಕರಿಂದ ಬಿಹಾರದಲ್ಲೂ ಮತ ಚಲಾವಣೆ: ರಾಹುಲ್.ಮತ್ತೆ ‘ಜಂಗಲ್ ರಾಜ್’ ಆಡಳಿತ ಬರದಂತೆ ತಡೆಯಲು ಕಮಲದ ಬಟನ್ ಒತ್ತಿ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>