<p><strong>ನವದೆಹಲಿ:</strong> ‘ಬಿಹಾರದ ಚುನಾವಣೆ ಹೊಸ್ತಿಲಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತಗಳನ್ನು ಕದಿಯುವಾಗ ಚುನಾವಣಾ ಆಯೋಗ ಕೈಗೆ ಸಿಕ್ಕಿಬಿದ್ದಿದ್ದು, ಆಯೋಗವು ಬಿಜೆಪಿಯ ‘ಎಲೆಕ್ಷನ್ ಚೋರಿ ಬ್ರಾಂಚ್’ ಆಗಿ ಬದಲಾಗಿದಿಯೇ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.</p><p>22 ವರ್ಷಗಳ ನಂತರ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಇದರಲ್ಲಿ ಅನರ್ಹ, ಒಂದಕ್ಕಿಂತ ಹೆಚ್ಚು ಬಾರಿ ಹೆಸರಿರುವ ಹಾಗೂ ಕಾನೂನಿನ್ವಯ ಅರ್ಹ ಮತದಾರರ ಹೆಸರು ಸೇರಿಸುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುನ್ನುಡಿ ಬರೆದಿದೆ.</p><p>‘ಯುಟ್ಯೂಬರ್ ಅಜಿತ್ ಅಂಜುಮ್ ಅವರು ಬಿಹಾರದಲ್ಲಿ ಕೈಗೊಂಡಿರುವ SIR ಕುರಿತು ಸರಣಿ ವರದಿಗಳನ್ನು ಪ್ರಸಾರ ಮಾಡಿದ್ದರು. ಇವುಗಳನ್ನು ರಾಹುಲ್ ಗಾಂಧಿ ಮರುಹಂಚಿಕೊಂಡಿದ್ದು, ‘SIR ಹೆಸರಿನಲ್ಲಿ ಚುನಾವಣಾ ಆಯೋಗವು ಮತಗಳನ್ನು ಕದಿಯುವಾಗಲೇ ಸಿಕ್ಕಿಬಿದ್ದಿದೆ. ಈ ಸುದ್ದಿಯನ್ನು ಬಯಲಿಗೆ ತಂದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.</p><p>‘ಚುನಾವಣಾ ಆಯೋಗವು ಈಗಲೂ ಪಾರದರ್ಶಕ ಚುನಾವಣೆ ನಡೆಸುವ ಸಂಸ್ಥೆಯಾಗಿಯೇ ಉಳಿದಿದೆಯೇ ಅಥವಾ ಸಂಪೂರ್ಣವಾಗಿ ಬಿಜೆಪಿಯ ‘ಚುನಾವಣಾ ಕಳ್ಳತನ ಶಾಖೆ’ಯಾಗಿ ಬದಲಾಗಿದೆಯೇ’ ಎಂದು ರಾಹುಲ್ ಕೇಳಿದ್ದಾರೆ.</p><p>‘ಪೌರತ್ವ ದಾಖಲೆಗಳನ್ನೇ ಮುಂದಿಟ್ಟುಕೊಂಡು ಕೊಟ್ಯಂತರ ಅರ್ಹ ಭಾರತೀಯ ಮತದಾರರನ್ನು ಉದ್ದೇಶಪೂರ್ವಕವಾಗಿಯೇ ಕೈಬಿಡುವ ಹುನ್ನಾರ ನಡೆಸಲಾಗಿದೆ’ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p><p>‘ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದೀರಿ’ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಇತ್ತೀಚೆಗೆ ಹೇಳಿದ್ದರು.</p><p>ಬಿಹಾರ ವಿಧಾನಸಭೆಗೆ ಇದೇ ವರ್ಷ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಇದರ ಭಾಗವಾಗಿ ನಡೆದ SIR ಪ್ರಶ್ನಿಸಿ ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಇದರ ಬೆನ್ನಲ್ಲೇ ಜ್ಞಾನೇಶ್ ಕುಮಾರ್ ಅವರು ಈ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಿಹಾರದ ಚುನಾವಣೆ ಹೊಸ್ತಿಲಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತಗಳನ್ನು ಕದಿಯುವಾಗ ಚುನಾವಣಾ ಆಯೋಗ ಕೈಗೆ ಸಿಕ್ಕಿಬಿದ್ದಿದ್ದು, ಆಯೋಗವು ಬಿಜೆಪಿಯ ‘ಎಲೆಕ್ಷನ್ ಚೋರಿ ಬ್ರಾಂಚ್’ ಆಗಿ ಬದಲಾಗಿದಿಯೇ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.</p><p>22 ವರ್ಷಗಳ ನಂತರ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಇದರಲ್ಲಿ ಅನರ್ಹ, ಒಂದಕ್ಕಿಂತ ಹೆಚ್ಚು ಬಾರಿ ಹೆಸರಿರುವ ಹಾಗೂ ಕಾನೂನಿನ್ವಯ ಅರ್ಹ ಮತದಾರರ ಹೆಸರು ಸೇರಿಸುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುನ್ನುಡಿ ಬರೆದಿದೆ.</p><p>‘ಯುಟ್ಯೂಬರ್ ಅಜಿತ್ ಅಂಜುಮ್ ಅವರು ಬಿಹಾರದಲ್ಲಿ ಕೈಗೊಂಡಿರುವ SIR ಕುರಿತು ಸರಣಿ ವರದಿಗಳನ್ನು ಪ್ರಸಾರ ಮಾಡಿದ್ದರು. ಇವುಗಳನ್ನು ರಾಹುಲ್ ಗಾಂಧಿ ಮರುಹಂಚಿಕೊಂಡಿದ್ದು, ‘SIR ಹೆಸರಿನಲ್ಲಿ ಚುನಾವಣಾ ಆಯೋಗವು ಮತಗಳನ್ನು ಕದಿಯುವಾಗಲೇ ಸಿಕ್ಕಿಬಿದ್ದಿದೆ. ಈ ಸುದ್ದಿಯನ್ನು ಬಯಲಿಗೆ ತಂದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.</p><p>‘ಚುನಾವಣಾ ಆಯೋಗವು ಈಗಲೂ ಪಾರದರ್ಶಕ ಚುನಾವಣೆ ನಡೆಸುವ ಸಂಸ್ಥೆಯಾಗಿಯೇ ಉಳಿದಿದೆಯೇ ಅಥವಾ ಸಂಪೂರ್ಣವಾಗಿ ಬಿಜೆಪಿಯ ‘ಚುನಾವಣಾ ಕಳ್ಳತನ ಶಾಖೆ’ಯಾಗಿ ಬದಲಾಗಿದೆಯೇ’ ಎಂದು ರಾಹುಲ್ ಕೇಳಿದ್ದಾರೆ.</p><p>‘ಪೌರತ್ವ ದಾಖಲೆಗಳನ್ನೇ ಮುಂದಿಟ್ಟುಕೊಂಡು ಕೊಟ್ಯಂತರ ಅರ್ಹ ಭಾರತೀಯ ಮತದಾರರನ್ನು ಉದ್ದೇಶಪೂರ್ವಕವಾಗಿಯೇ ಕೈಬಿಡುವ ಹುನ್ನಾರ ನಡೆಸಲಾಗಿದೆ’ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p><p>‘ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದೀರಿ’ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಇತ್ತೀಚೆಗೆ ಹೇಳಿದ್ದರು.</p><p>ಬಿಹಾರ ವಿಧಾನಸಭೆಗೆ ಇದೇ ವರ್ಷ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಇದರ ಭಾಗವಾಗಿ ನಡೆದ SIR ಪ್ರಶ್ನಿಸಿ ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಇದರ ಬೆನ್ನಲ್ಲೇ ಜ್ಞಾನೇಶ್ ಕುಮಾರ್ ಅವರು ಈ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>